ಶಿವಮೊಗ್ಗ: ಹಿಂದಿ ದೇಶವನ್ನು ಒಗ್ಗೂಡಿಸುವ ಭಾಷೆ ಅದನ್ನ ಯಾಕೆ ದ್ವೇಷ ಮಾಡುತ್ತಾರೋ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಟಾಟಿಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪ ಅವರು, ನಮ್ಮ ಮಾತೃಭಾಷೆ ಕನ್ನಡ, ಹಿಂದಿ ದೇಶವನ್ನು ಒಗ್ಗೂಡಿಸುವ ಭಾಷೆ. ಆದರೆ ಅದನ್ನು ಯಾಕೆ ದ್ವೇಷ ಮಾಡುತ್ತಿದ್ದಾರೊ ಗೊತ್ತಿಲ್ಲ ಎಂದರು. ಇದನ್ನೂ ಓದಿ:ಸಿದ್ದರಾಮಯ್ಯ ಒಬ್ಬ ದಡ್ಡ ವಡ್ಡ, ತಲೆ ಇಲ್ಲ – ಈಶ್ವರಪ್ಪ
ಹಿಂದಿ ಭಾಷೆಯಿಂದ ಕನ್ನಡದ ಆದ್ಯತೆ ಕಡಿಮೆ ಆಗಲ್ಲ. ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿಯನ್ನು ಜಾರಿಗೆ ತರಲು ನೋಡುತ್ತಿಲ್ಲ. ಆದರೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮಾತನ್ನು ಕೆಲವರು ತಪ್ಪಾಗಿ ಅರ್ಥೈಸುತ್ತಿದ್ದಾರೆ ಎಂದು ತಿಳಿಸಿದರು.