ಕಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ ಉದಯ ವಾಹಿನಿಯು ಈಗ ‘ಶ್ರೀಮದ್ ರಾಮಾಯಣ’ (Srimad Ramayana) ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಬುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.

ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಿದವರಿಗೆ ತಲಾ ಒಂದು ಸಾವಿರ ಬಹುಮಾನವನ್ನು ಅಂದೇ ಸಂದಾಯವಾಗುವಂತೆ ಯೋಜನೆ ರೂಪಿಸಲಾಗಿದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.


