ಯಡಿಯೂರಪ್ಪ, ಶೋಭಾ, ಸದಾನಂದ ಗೌಡರಿಂದ ಹಿಂದೂ ಕಾರ್ಯಕರ್ತರ ಕೊಲೆ:ಶ್ರೀರಾಮುಲು ಎಡವಟ್ಟು

Public TV
1 Min Read
mng ramulu 2

ಮಂಗಳೂರು: ಬಿಜೆಪಿ ನಾಯಕರಿಂದ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ಹೇಳುವ ಮೂಲಕ ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಎಡವಟ್ಟು ಮಾಡಿಕೊಂಡಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಸಂಸದ ಶ್ರೀರಾಮುಲು, ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ, ಬಿ.ಎಸ್ ಯಡಿಯೂರಪ್ಪ ಮತ್ತು ಸದಾನಂದ ಗೌಡ ಅವರು ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದರು. ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು ಹೇಳಿದ್ದಾರೆ.

ಕರಾವಳಿಯ ಕೊಲೆ ರಾಜಕೀಯದ ಬಗ್ಗೆ ಮಾತನಾಡುವ ಭಾಷಣ ಮಾಡುವ ಮಾತಿನ ಭರದಲ್ಲಿ ಸಂಸದ ಶ್ರೀ ರಾಮುಲು ಅವರು ಏನೋ ಹೇಳಲು ಹೋಗಿ ಇನ್ನೇನೋ ಹೇಳಿಬಿಟ್ಟಿದ್ದಾರೆ. ಮರು ಕ್ಷಣವೇ ತಮ್ಮ ಹೇಳಿಕೆ ಬಗ್ಗೆ ಎಚ್ಚೆತ್ತಾ ಅವರು ಕರ್ನಾಟಕದಲ್ಲಿ ಜಾತಿ ವಿಭಜನೆ ಮಾಡುವ ಹಾಗೂ ಆರ್‍ಎಸ್‍ಎಸ್, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿದರು.

ಸಂಸದ ಶ್ರೀ ರಾಮುಲು ಅವರ ಮಾತನ್ನು ಕೇಳಿ ವೇದಿಕೆ ಮೇಲಿದ್ದ ಬಿಜೆಪಿ ಮುಖಂಡರು ಕ್ಷಣ ಕಾಲ ಕಂಗಾಲು ಆಗಿದ್ದರು.

https://www.youtube.com/watch?v=dwZiNKvyUug

 

mng ramulu

bjp mng

njp mng

Share This Article
Leave a Comment

Leave a Reply

Your email address will not be published. Required fields are marked *