Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮ ದಂಗಲ್ ಮಧ್ಯೆ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗುತ್ತಾ ಕಂಟಕ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮ ದಂಗಲ್ ಮಧ್ಯೆ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗುತ್ತಾ ಕಂಟಕ?

Bengaluru City

ಧರ್ಮ ದಂಗಲ್ ಮಧ್ಯೆ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗುತ್ತಾ ಕಂಟಕ?

Public TV
Last updated: April 7, 2022 11:13 am
Public TV
Share
2 Min Read
karaga
SHARE

ಬೆಂಗಳೂರು: ಹಿಜಬ್, ಹಲಾಲ್ ಕಟ್ ಹಾಗೂ ಜಟ್ಕಾ ಕಟ್, ಮಸೀದಿಗಳಲ್ಲಿ ಸೌಂಡ್ ಬ್ಯಾನ್‍ಗೊಳಿಸುವ ಬಗ್ಗೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಇದೀಗ ಐತಿಹಾಸಿಕ ಬೆಂಗಳೂರು ಕರಗ ಉತ್ಸವದ ಮೇಲೂ ಕರಿನೆರಳಿನ ಭೀತಿ ಎದುರಾಗಿದೆ. ಕರಗ ಉತ್ಸವದ ವೇಳೆ ಮೂರ್ತಿಯನ್ನು ದರ್ಗಾಕ್ಕೆ ತೆಗೆದುಕೊಂಡು ಹೀಗುವುದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

karaga

ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವಕ್ಕೆ ದೇಶ, ವಿದೇಶಗಳಿಂದ ಸಾವಿರಾರು ಮಂದಿ ಆಗಮಿಸುತ್ತಿದ್ದರು. ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಾರೆ. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

karaga

ರಾತ್ರಿ ಆರಂಭವಾಗುವ ಕರಗ ಸಾಮಾನ್ಯವಾಗಿ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಅವೆನ್ಯೂ ರಸ್ತೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಮಸ್ತಾನ್ ಸಾಬ್ ದರ್ಗಾ, ಅಣ್ಣಮ್ಮ ದೇವಸ್ಥಾನ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್, ಮಾರ್ಗವಾಗಿ ಕರಗ ಸಾಗುತ್ತದೆ. ವಿಶೇಷವೆಂದರೆ ಪ್ರತಿ ವರ್ಷ ಕರಗ ಉತ್ಸವ ಮೂರ್ತಿಯನ್ನು ಮಸ್ತಾನ್ ಸಾಬ್ ದರ್ಗಾದ ಒಳಗೆ ಕೊಂಡ್ಯೊಯಲಾಗುತ್ತದೆ. ಅದರಂತೆ ಈ ಬಾರಿ ಕೂಡ ಸಂಪ್ರದಾಯದಂತೆ ಕರಗ ಉತ್ಸವ ಮೂರ್ತಿಯನ್ನು ದರ್ಗಾಕ್ಕೆ ಬರಲಿ ಎಂದು ಮೌಲ್ವಿಗಳು ಆಹ್ವಾನ ನೀಡಿ ಮನವಿ ಮಾಡಿದ್ದಾರೆ. ಆದರೆ ಕೆಲ ಹಿಂದೂ ಪರ ಸಂಘಟನೆಗಳು ಕರಗ ಉತ್ಸವ ಮೂರ್ತಿಯನ್ನು ದರ್ಗಾಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿವೆ.

Karaga Bengaluru 1

ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಮುಸ್ಲಿಂ ಧರ್ಮಗುರುಗಳು ಭೇಟಿ ನೀಡಿ, ಕರಗ ಉತ್ಸವ ಮೊದಲಿನಿಂದಲೂ ಹಿಂದೂ ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಏನೇ ವಿರೋಧ ಬಂದರೂ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಉತ್ಸವ ಭೇಟಿ ನೀಡಲಿ. ನೂರಾರು ವರ್ಷಗಳ ಇತಿಹಾಸದಂತೆ ಆಚರಣೆ ನಡೆಯಲಿದೆ ಎಂದು ಸಮಿತಿಯಿಂದ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

madikeri dasara karaga 2 2

ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರಗ ಉತ್ಸವ ಸಮಿತಿ ಅಧ್ಯಕ್ಷ ಸತೀಶ್ ಅವರು, ಕರಗ ಉತ್ಸವದ ಸಂದರ್ಭದಲ್ಲಿ ದರ್ಗಾಗೆ ಭೇಟಿ ನೀಡಿ ಮುಂದೆ ಸಾಗುವುದು ಹಿಂದಿನಿಂದ ನಡೆದು ಬಂದ ಪದ್ಧತಿಯಾಗಿದೆ. ಈಗಾಗಲೇ ಕೆ.ಆರ್. ಮಾರುಕಟ್ಟೆ ಸರ್ಕಲ್‍ನಲ್ಲಿರುವ ದರ್ಗಾದಿಂದ ಮುಸ್ಲಿಂ ಮುಖಂಡರು ಕರಗ ಉತ್ಸವ ಸಮಿತಿಯನ್ನು ಭೇಟಿ ಮಾಡಿ, ಎಲ್ಲರೂ ಎಂದಿನಂತೆ ಕೂಡಿ ಕರಗ ಆಚರಣೆ ಮಾಡೋಣ ಎಂದು ಹೇಳಿದ್ದಾರೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡಲಿರುವ ಕರಗ ದಾರಿಯಲ್ಲಿ ಸಿಗುವ ದರ್ಗಾದ ಒಳಗೆ ಹೋಗಿ ದರ್ಗಾದ ದರ್ಶನ ಮಾಡಿ ಮುಂದೆ ಸಾಗುವ ಇತಿಹಾಸವಿದೆ. ಶತಮಾನಗಳ ಇತಿಹಾಸವಿರುವ ಬೆಂಗಳೂರಿನ ಕರಗ ಎಂದಿನಂತೆ ನಡೆಯಲಿದೆ ಎಂದಿದ್ದಾರೆ.

KARAGA 2 1

ಎರಡು ವರ್ಷ ಕೊರೊನಾ ಕರಿನೆರಳು ಕರಗದ ಮೇಲೆ ಬಿದ್ದಿತ್ತು. ಹೀಗಾಗಿ ಈ ಬಾರಿ ವಿಜೃಂಭಣೆಯಿಂದ ಕರಗ ಆಚರಣೆಗೆ ಸಿದ್ಧತೆ ನಡೆದಿದೆ. ಬೆಂಗಳೂರಿನ ಐತಿಹಾಸಿಕ ಕರಗ ಆಚರಣೆಯು ಏಪ್ರಿಲ್ 8 ರಿಂದ ಪ್ರಾರಂಭವಾಗಲಿದೆ. ಏಪ್ರಿಲ್ 16 ರಂದು ನಡೆಯುವ ಕರಗ ಶಕ್ತ್ಯೋತ್ಸವ ನಡೆಯುವ ದಿನವಾಗಿದ್ದು, ಏಪ್ರಿಲ್ 18ರಂದು ಸಂತೋತ್ಸವ ಧ್ವಜಾರೋಹಣದ ಮೂಲಕ ಕರಗ ಉತ್ಸವಕ್ಕೆ ತೆರೆ ಬೀಳಲಿದೆ.

TAGGED:bengalurudargahhinduKaragamuslimShree Dharmaraswamy Templeಕರಗದರ್ಗಾಬೆಂಗಳೂರುಮುಸ್ಲಿಂಶ್ರೀ ಧರ್ಮರಾಯಸ್ವಾಮಿ ದೇವಾಲಯಹಿಂದೂ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
5 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
6 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
6 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?