ಬೆಂಗಳೂರು: ಅಕ್ರಮವಾಗಿ ಹಸು ಮತ್ತು ಎಮ್ಮೆಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಹಿಂದೂ ಸಂಘಟನೆಗಳು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೈಸ್ ರಸ್ತೆಯಲ್ಲಿ ವಾಹನವೊಂದರಲ್ಲಿ ಹಸು ಮತ್ತು ಎಮ್ಮೆಗಳನ್ನು ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಹನ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಾಹನದಲ್ಲಿ ಎಂಟಕ್ಕೂ ಹೆಚ್ಚು ಎಮ್ಮೆಗಳು ಒದ್ದಾಡುತ್ತಿರುವುದು ಪತ್ತೆಯಾಗಿದೆ. ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದು, ಹಸುಗಳನ್ನು ತುಂಬಿದ್ದ ಮತ್ತೊಂದು ವಾಹನ ಕೂಡಾ ಪರಾರಿಯಾಗಿದೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಸಹೋದರಿ ಮನೆಯಲ್ಲಿ ED ಶೋಧ
ಅಕ್ರಮವಾಗಿ ನೈಸ್ ರೋಡ್ ಮತ್ತು ನೆಲಮಂಗಲಕ್ಕೆ ಸಂಪರ್ಕಿಸುವ ರಸ್ತೆಯ ಮೂಲಕ ಸಾಗಿಸಲಾಗುತ್ತಿತ್ತು. ಸದ್ಯ ವಾಹನವನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದು ಎಂಟು ಎಮ್ಮೆಗಳನ್ನು ರಕ್ಷಿಸಿದ್ದಾರೆ. ಹಸುಗಳನ್ನು ತುಂಬಿದ್ದ ಮತ್ತೊಂದು ವಾಹನ ಕೂಡ ಪರಾರಿಯಾಗಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಳೆದ 15 ದಿನಗಳ ಹಿಂದೆಯಷ್ಟೇ ಕ್ಯಾಂಟೇನರ್ ಮೂಲಕ 30ಕ್ಕೂ ಹೆಚ್ಚು ಹಸುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕೆಂಗೇರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ, ನಾವು ಅದನ್ನು ಪ್ರಶ್ನೆ ಮಾಡುತ್ತೇವಾ: ಮುಸ್ಲಿಂ ವಿದ್ಯಾರ್ಥಿಗಳು