ಶಿಮ್ಲಾ: ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕೆಂದು ಅರ್ಚಕ ಯತಿ ಸತ್ಯದೇವಾನಂದ ಸರಸ್ವತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮರ ಜನಸಂಖ್ಯೆಯು ಹಿಂದೂಗಳ ಅವನತಿಯನ್ನು ಸೂಚಿಸುತ್ತದೆ. ಹಿಂದೂಗಳು ತಮ್ಮ ಕುಟುಂಬಗಳನ್ನು ಬಲಪಡಿಸಬೇಕು. ಅವರು ತಮ್ಮ ಕುಟುಂಬ, ಮಾನವೀಯತೆ ಮತ್ತು ಸನಾತನ ಧರ್ಮವನ್ನು ರಕ್ಷಿಸಲು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಒತ್ತಾಯಿಸಿದರು.
ಮುಸ್ಲಿಮರು ಯೋಜಿತ ರೀತಿಯಲ್ಲಿ ಅನೇಕ ಮಕ್ಕಳನ್ನು ಹೇರುವುದರ ಮೂಲಕ ತಮ್ಮ ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಸ್ಲಿಮರು ಭಾರತದಲ್ಲಿ ಬಹುಸಂಖ್ಯಾತರಾಗುತ್ತಾರೆ. ಆಗ ಭಾರತವನ್ನು ನೆರೆಯ ಪಾಕಿಸ್ತಾನದಂತೆ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುತ್ತಾರೆ. ಇದಕ್ಕಾಗಿಯೇ ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು ಎಂದರು. ಇದನ್ನೂ ಓದಿ: ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ
ಎರಡು ಮಕ್ಕಳ ರಾಷ್ಟ್ರೀಯ ನೀತಿಗೆ ವಿರುದ್ಧವಾಗಿದೆಯೇ ಎಂದು ಕೇಳಿದಾಗ, ನಮ್ಮ ದೇಶದಲ್ಲಿ ನಾಗರಿಕರು ಕೇವಲ ಎರಡು ಮಕ್ಕಳಿಗೆ ಜನ್ಮ ನೀಡುವಂತೆ ಹೇಳುವ ಯಾವುದೇ ಕಾನೂನು ಇಲ್ಲ. ಹಿಂದೂಗಳು ತಮ್ಮ ಕುಟುಂಬ, ಮಾನವೀಯತೆ ಮತ್ತು ಸನಾತನ ಧರ್ಮವನ್ನು ರಕ್ಷಿಸಲು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪೊಲೀಸರು ಸಂಯಮದಿಂದ ವರ್ತಿಸದಿದ್ದರೆ, ಹಳೇ ಹುಬ್ಬಳ್ಳಿ ಮತ್ತೊಂದು ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಆಗುತ್ತಿತ್ತು: ಆರಗ ಜ್ಞಾನೇಂದ್ರ