ನವದೆಹಲಿ: ಭಯೋತ್ಪಾದಕರೆಲ್ಲರೂ ಹಿಂದೂಗಳೆಂದು ಹೇಳಿಕೆ ನೀಡಿದ್ದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಮುಖಂಡ ತಸ್ಲೀಮ್ ಅಹ್ಮದ್ ರೆಹ್ಮಾನಿ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದಿಗೆ ಮಾತನಾಡುವ ವೇಳೆ ಈ ಕುರಿತು ರೆಹ್ಮಾನಿ ಒಪ್ಪಿಕೊಂಡಿದ್ದು, ಕಾಫಿರ್ ಎಂಬ ಬದವನ್ನು ಬಳಸಿದರ ಕುರಿತು ಉತ್ತರಿಸಿದ್ದಾರೆ. ಪ್ರಾರಂಭದಲ್ಲಿ ಕಾಫಿರ್ ಪದವನ್ನು ಬಳಸಿಲ್ಲ. ಕುಫ್ರ್ ಪದವನ್ನು ಬಳಸಿದ್ದೆ ಎಂದು ಹೇಳಿದ್ದರು. ನಂತರ ತಮ್ಮ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ.
ಎಲ್ಲ ಹಿಂದೂಗಳು ಭಯೋತ್ಪಾದಕರಲ್ಲ. ಆದರೆ ಭಯೋತ್ಪಾದಕರೆಲ್ಲರೂ ಹಿಂದೂಗಳು. ಪಿಎಫ್ಐಗೆ ಈ ಕುರಿತು ನಾವು ಭರವಸೆ ನೀಡುತ್ತೇವೆ. ನೀವು ಒಂಟಿಯಾಗಿಲ್ಲ. ನಿಮ್ಮ ಜೊತೆ ನಾವಿದ್ದೇವೆ ಎಂದು ನವೆಂಬರ್ 2017ರಲ್ಲಿ ಹೇಳಿದ್ದೆ ಎಂದು ರೆಹ್ಮಾನಿ ಒಪ್ಪಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದ ಸಿಎಎ ವಿರುದ್ಧದ ಹಿಂಸಾಚಾರದಲ್ಲಿ ತೊಡಗಿರುವ ಕುರಿತು ಚರ್ಚೆ ನಡೆದಿದ್ದು, ಯುಪಿ ಮುಖ್ಯಸ್ಥ ಹಾಗೂ ಖಜಾಂಚಿ ಸೇರಿದಂತೆ 25 ಪಿಎಫ್ಐ ಸದಸ್ಯರನ್ನು ಬಂಧಿಸಲಾಗಿದೆ. ಈ ಸಂದರ್ಭದಲ್ಲೇ ರೆಹ್ಮಾನಿ ಈ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ನವೆಂಬರ್ 6, 2017ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಾರ್ಯಕರ್ತಸನ್ಮಾನ ಕಾರ್ಯಕ್ರಮದಲ್ಲಿ ರೆಹ್ಮಾನಿ ಪ್ರಚೋದಿತ ಹೇಳಿಕೆ ನೀಡಿದ್ದರು. ಅಲ್ಲದೆ ಎಸ್ಡಿಪಿಐ ಪಿಎಫ್ಐನ ರಾಜಕೀಯ ಸಂಘಟನೆಯಾಗಿದೆ. ಈ ಸಂಘಟನೆಗಳು ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿವೆ ಎಂದು ಆರೋಪಿಸಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. ಉತ್ತರ ಪ್ರದೇಶದಲ್ಲಿ ನಡೆದ ಭಾರೀ ಹಿಂಸಾಚಾದಲ್ಲಿ ಸಂಘಟನೆ ಪ್ರಮುಖ ಪಾತ್ರ ವಹಿಸಿದೆ ಎಂದು ಪೊಲೀಸರು ಆರೋಪಿಸಿದ್ದು, ಇದಕ್ಕೆ ಸೂಕ್ತ ದಾಖಲೆಗಳನ್ನು ಸಹ ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಿಂಸಾಚಾರ ನಡೆಸಿದ್ದಾರೆ. ಈ ಮೂಲಕ ಯುಪಿಯ ಹಿಂಸಾಚಾರದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೆ ಕಾರಣರಾಗಿದ್ದಾರೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ಯುಪಿ ರಾಜಧಾನಿ ಲಕ್ನೋದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಪಿಎಫ್ಐ ಸಂಘಟನೆಯಾಗಿದೆ. ಸಿಎಎ ಕುರಿತು ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ. ಈ ಕುರಿತು ಪಿಎಫ್ಐ ಮುಖ್ಯಸ್ಥ ಹಾಗೂ ಖಜಾಂಚಿ ಹಿಂಸಾಚಾರದಲ್ಲಿ ತಮ್ಮ ಪಾತ್ರವಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.