Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Haveri

ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ

Public TV
Last updated: November 19, 2019 11:18 pm
Public TV
Share
3 Min Read
HVR KANTHIMATA SWAMIJ app
SHARE

– ಪಂಚಪೀಠದ ಶ್ರೀಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ
– ಜೆಡಿಎಸ್ ಮುಖಂಡ ಕೋನರೆಡ್ಡಿ ಆರೋಪ

ಹಾವೇರಿ: ರಟ್ಟೀಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದು, ಉಪ ಸಮರದ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಈ ಕುರಿತು ಸ್ವತಃ ಸ್ವಾಮೀಜಿಗಳೇ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದು, ನಾಮಪತ್ರ ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಹಿರಿಯ ಮಠಾಧೀಶರ ಆದೇಶದಿಂದ ನಿರ್ಧಾರ ಬದಲಿಸಿದ್ದೇನೆ. ಸಾಧ್ಯವಾದರೆ ಬುಧವಾರವೇ ನಾಮಪತ್ರ ಹಿಂಪಡೆಯುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಗುರುವಾರ ನಾಮಪತ್ರ ವಾಪಸ್ ಪಡೆಯುವುದು ಖಚಿತ. ಯಾರೇ ಜನಪ್ರತಿನಿಧಿ ಆಯ್ಕೆಯಾಗಿ ಬಂದರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರುವ ಅಜೆಂಡಾಗೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ವಾಪಸ್ ಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

BJP JDS

ಕೆಲ ದಿನಗಳ ಹಿಂದೆ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು. ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ, ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಅದರಂತೆ ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದರು.

ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬೇಡಿಕೊಂಡಿದ್ದರು. ಬಿ.ಸಿ.ಪಾಟೀಲ್ ಅವರನ್ನು ಸೋಲಿಸಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ಮಾಡಿದ್ದರು. ಅಲ್ಲದೆ ವೀರಶೈವ ಲಿಂಗಾಯತರ ಮತ ಒಡೆಯಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈ ರಣತಂತ್ರ ರೂಪಿಸಿದ್ದಾರೆ ಎಂದು ಭಕ್ತರು ಸಹ ಸ್ವಾಮೀಜಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದರು.

collage hvr swamiji

ಪಂಚಪೀಠದ ಶ್ರೀಗಳಿಂದ ಒತ್ತಡ:
ಇದಕ್ಕೂ ಮುನ್ನ ರಾಣೆಬೆನ್ನೂರಿನಲ್ಲಿ ಮಾತನಾಡಿದ್ದ ಜೆಡಿಎಸ್ ಮುಖಂಡ ಎನ್.ಎಚ್.ಕೋನರೆಡ್ಡಿ, ಧರ್ಮದಲ್ಲಿ ರಾಜಕಾರಣ ಬೇಡ ಎಂದು ಪಂಚಪೀಠದ ಜಗದ್ಗುರುಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ ಬಂದಿದೆ. ಅಲ್ಲದೆ ಮುಖ್ಯಮಂತ್ರಿಗಳ ಪುತ್ರ ಬಿ.ವೈ.ರಾಘವೇಂದ್ರ ಅವರು ಸಹ ಸ್ವಾಮೀಜಿ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ಸ್ವಾಮೀಜಿಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಿದ್ದರು.

ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಸ್ವಾಮೀಜಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ನಿಮಗೆ ಮಾನಸಿಕವಾಗಿ ತೊಂದರೆಯಾಗಬಾರದು. ಧರ್ಮದಲ್ಲಿ ರಾಜಕಾರಣವನ್ನು ಜೆಡಿಎಸ್ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದು ಕುಮಾರಸ್ವಾಮಿ ಅವರ ನಂಬಿಕೆ ಆಗಿದೆ. ಹೀಗಾಗಿ ಸ್ವಾಮೀಜಿಗೆ ನೀವು ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರು. ಇದಕ್ಕೆ ನಮ್ಮ ಪಕ್ಷ ಯಾವುದೇ ರೀತಿ ವಿರೋಧ ವ್ಯಕ್ತಪಡಿಸುವುದಿಲ್ಲ ಅಂತ ತಿಳಿಸಿದ್ದರು ಎಂದು ಮಾಹಿತಿ ನೀಡಿದ್ದರು.

vlcsnap 2019 11 19 21h58m22s110

ಸ್ವಾಮೀಜಿಗಳು ಸ್ಪರ್ಧಿಸುತ್ತಿರುವುದರಿಂದ ಬಿಜೆಪಿಗೆ ಸೋಲಿನ ಭೀತಿ ಇದೆಯೇನೋ, ಅದೇ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ. ಸ್ವಾಮೀಜಿ ನಿರ್ಧಾರಕ್ಕೆ ನಮ್ಮ ಪಕ್ಷ ಬದ್ಧ. ಇದೀಗ ನಾನು ರಟ್ಟಿಹಳ್ಳಿಗೆ ತೆರಳಿ ಚುನಾವಣೆ ಸಿದ್ಧತೆ ಮಾಡಿ ಬಂದಿದ್ದೇನೆ. ಈ ಕುರಿತು ಅಲ್ಲಿನ ಭಕ್ತರ ಬಳಿ ಚರ್ಚಿಸಿ ಬಂದಿದ್ದೇನೆ ಎಂದಿದ್ದರು.

ರಾಜಕೀಯ ಪ್ರವೇಶದ ಕುರಿತು ನಾಮಪತ್ರ ಸಲ್ಲಿಸಿದ ದಿನವೇ ಸ್ವಾಮೀಜಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆಗಬಹುದಾದರೆ, ನಾನ್ಯಾಕೆ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ. ಅದನ್ನು ನಾವು ಗೌರವಿಸುತ್ತೇವೆ. ಆದರೆ ನಮ್ಮ ಪಕ್ಷದಿಂದ ಒತ್ತಡ ಹಾಕುವುದಿಲ್ಲ ಎಂದು ತಿಳಿಸಿದ್ದರು.

ನಮ್ಮ ಪಕ್ಷದಿಂದ ಬೇರೆಯವರಿಗೆ ಟಿಕೆಟ್ ಫೈನಲ್ ಆಗಿತ್ತು. ಆದರೆ ಮಧ್ಯರಾತ್ರಿ ಸ್ವಾಮೀಜಿ ನಿಲ್ಲೋದು ಗೊತ್ತಾಯಿತು. ಜನರು ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ನಾವು ಅಭ್ಯರ್ಥಿ ಬದಲಾಯಿಸಿದೆವು. ಅವರು ನಿಲ್ಲಲು ಬಯಸಿದ್ದಾರೆ, ನಾವು ಬೆಂಬಲಿಸುತ್ತೇವೆ. ಆದರೆ ಅವರಿಗೆ ಏನೂ ತೊಂದರೆಯಾಗಬಾರದು, ಅದೇ ನಮ್ಮ ಕಾಳಜಿ ಎಂದಿದ್ದರು.

Share This Article
Facebook Whatsapp Whatsapp Telegram
Previous Article UDP Pejawar sri ಶಬರಿಮಲೆ ಮಾತ್ರ ಯಾಕೆ? ಮಸೀದಿಗೆ ಮಹಿಳಾ ಪ್ರವೇಶವೂ ಚರ್ಚೆ ಆಗಲಿ- ಪೇಜಾವರ ಶ್ರೀ
Next Article ramachandra Rao ಎಡಿಜಿಪಿ ರಾಮಚಂದ್ರರಾವ್ ಕಾರಿಗೆ ಲಾರಿ ಡಿಕ್ಕಿ- ತಪ್ಪಿದ ಭಾರೀ ಅನಾಹುತ

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Vijayapura Bhima River 8 people rescued from flood
Districts

ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

6 minutes ago
Cylinder Blast 2
Bellary

ಹೊಸಪೇಟೆ | ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

29 minutes ago
Davanagere Galate
Davanagere

ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್

48 minutes ago
Darshan Pavithra Gowda 1
Bengaluru City

ತನ್ನ ಸ್ವಾರ್ಥಕ್ಕಾಗಿ ನಮ್ಮನ್ನಿಲ್ಲಿ ಕೊಳೆಯುವಂತೆ ಮಾಡಿದ್ದಾನೆ – ದರ್ಶನ್‌ ವಿರುದ್ಧವೇ ಗ್ಯಾಂಗ್‌ ಸದಸ್ಯರ ಅಸಮಾಧಾನ?

56 minutes ago
Mysuru Dasara Cauvery Aarti begins DK Shivakumar KRS Dam
Districts

ಕಾವೇರಿ ಆರತಿಗೆ ಪುಷ್ಪಾರ್ಚನೆ ಮಾಡಿ ಡಿಕೆಶಿ ಚಾಲನೆ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?