Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೋಳಿ ಹಬ್ಬ ಯಾಕೆ ಆಚರಣೆ ಮಾಡ್ತಾರೆ..? ಮಹತ್ವವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: March 18, 2022 7:24 am
Public TV
Share
3 Min Read
Holi
SHARE

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ.

ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.

Rathi Manmatha

ಹೋಳಿಯ ಇತಿಹಾಸ?
ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ ಹಾಗೂ ಕ್ರೂರಿಯೂ ಆಗಿದ್ದನು. ತಾರಕಾಸುರ ತನಗೆ ಸಾವು ಬರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂಬ ವರವನ್ನು ಕೇಳಿದ್ದನು. ತಾರಕಾಸುರನ ತಪ್ಪಸ್ಸನ್ನು ಮೆಚ್ಚಿ ಬ್ರಹ್ಮ ವರವನ್ನು ಕೊಡುತ್ತಾನೆ. ಆಗ ತನಗೆ ವರ ಸಿಕ್ಕಿದೆ ಎಂದು ತಾರಕಾಸುರ ಮೆರೆಯುತ್ತಿರುತ್ತಾನೆ.

holi in maharashtra

ಇತ್ತ ಭೋಗ ಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ಆಗ ದೇವತೆಗಳು ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ ಅಂದರೆ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದ್ದರು. ಈ ವೇಳೆ ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.

Holi 5

ಮತ್ತೊಂದು ಕಥೆ:
ಹಿರಣ್ಯಕಶಿಪುವಿನ ಸಹೋದರಿ ಹೋಲಿಕಾ ಇದ್ದಳು. ಹಿರಣ್ಯಕಶಿಪು ತನ್ನ ರಾಜ್ಯದಲ್ಲಿ ದೇವರನ್ನು ಪೂಜಿಸುವುದನ್ನು ನಿಷೇಧಿಸಿದ್ದು, ತನ್ನನ್ನೇ ದೇವರೆಂದು ಪೂಜಿಸುವಂತೆ ಆದೇಶಿಸಿದ್ದನು. ಆದರೆ ಆತನ ಮಗ ಪ್ರಹ್ಲಾದ ವಿಷ್ಣು ದೇವರ ಪರಮ ಭಕ್ತನಾಗಿದ್ದನು. ತಾನು ಎಷ್ಟೆ ಪ್ರಯತ್ನ ಮಾಡಿದರು ಮಗನಿಂದ ವಿಷ್ಣು ದೇವರ ಆರಾಧಾನೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಕೊನೆಗೆ ಹಿರಣ್ಯಕಶಿಪು ತನ್ನ ಮಗನನ್ನು ದಂಡಿಸಲು ತೀರ್ಮಾನಿಸುತ್ತಾನೆ. ಆಗ ಬೆಂಕಿಯು ಸುಡದಂತೆ ವರವನ್ನು ಪಡೆದಿದ್ದ ತನ್ನ ತಂಗಿ ಹೋಲಿಕಾಳ ಸಹಾಯವನ್ನು ಹಿರಣ್ಯಕಶಿಪು ಪಡೆಯುತ್ತಾನೆ. ಹಿರಣ್ಯಕಶಿಪು ತನ್ನ ಮಗನನ್ನು ಆಕೆಯ ತೊಡೆಯ ಮೇಲೆ ಕೂರಿಸಿಕೊಳ್ಳುವಂತೆ ತಂಗಿಯಲ್ಲಿ ಕೇಳಿದನು. ಹೋಲಿಕಾ ಅಣ್ಣನ ಆಜ್ಞೆಯಂತೆ ಪ್ರಹ್ಲಾದನನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಳ್ಳುತ್ತಾಳೆ. ಆದರೆ ಈ ಪಾಪಕೃತ್ಯವನ್ನು ಹೋಲಿಕಾ ಮಾಡಿದ್ದರಿಂದಾಗಿ, ಆಕೆಯ ವರ ನಿಷ್ಫಲವಾಗುತ್ತದೆ. ಇದರಿಂದ ಹೋಲಿಕಾ ಸುಟ್ಟು ಬೂದಿಯಾಗುತ್ತಾಳೆ. ಪ್ರಹ್ಲಾದ ಸುರಕ್ಷಿತವಾಗಿ ಬೆಂಕಿಯಿಂದ ಹೊರಬರುತ್ತಾನೆ. ಅದಕ್ಕಾಗಿ ಪ್ರತೀ ವರ್ಷ ಹೋಲಿಯ ಮುನ್ನ ಹಿಂದೂ ಮನೆಗಳಲ್ಲಿ ಹೋಲಿಕನನ್ನು ಸುಡುತ್ತಾರೆ.

Holi 7

ಈ ಹಬ್ಬ ಮನೆಯ ಪ್ರತಿಯೊಬ್ಬ ಸದಸ್ಯರನ್ನು ಒಂದುಗೂಡಿಸುತ್ತದೆ ಮತ್ತು ಹಬ್ಬದ ಸಡಗರವನ್ನು ಪ್ರತಿಯೊಬ್ಬರಲ್ಲಿ ತುಂಬುತ್ತದೆ. ಕೆಟ್ಟದ್ದು ಒಳ್ಳೆಯದರ ಮುಂದೆ ತಲೆಬಾಗಲೇಬೇಕು ಎಂಬ ಸಂದೇಶವನ್ನು ಹೋಳಿ ಹಬ್ಬ ಸಾರುತ್ತದೆ. ದುಷ್ಕ್ರತ್ಯಗಳು ದೇವರ ಶಕ್ತಿಯ ಎದುರು ಎಂದಿಗೂ ಜಯವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸಾರ ಈ ಹಬ್ಬದ ಹಿಂದಿದೆ. ಹೋಲಿಕನಂತೆ ಕೆಟ್ಟ ಶಕ್ತಿಗಳು, ದುಷ್ಟ ಆಲೋಚನೆಗಳು ನಾಶವಾಗಿ ಹೊಸದರ ಪ್ರಾರಂಭದ ಕಡೆಗೆ ಮನುಷ್ಯರು ಹೋಗುತ್ತಾರೆ.

Holi 3

TAGGED:celebrationHoli festivalPublic TVTraditionಆಚರಣೆಪಬ್ಲಿಕ್ ಟಿವಿಸಂಪ್ರದಾಯಹೋಳಿ ಹಬ್ಬ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories

You Might Also Like

byrathi suresh session
Dakshina Kannada

ಮಂಗಳೂರಿಗೆ 675 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್‌

Public TV
By Public TV
10 minutes ago
Army Jawan
Latest

ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ ಕೇಸ್ – 20 ಲಕ್ಷ ದಂಡ ವಿಧಿಸಿದ NHAI

Public TV
By Public TV
11 minutes ago
Prabhu Chauhans Son Pratheek Chauhan
Bidar

ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು

Public TV
By Public TV
18 minutes ago
monorail train stuck in mumbai
Latest

ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

Public TV
By Public TV
43 minutes ago
AI Image
Latest

ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

Public TV
By Public TV
1 hour ago
Rajasthan Murder Case
Crime

ಲವ್ವರ್‌ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ; ಹತ್ಯೆ ಬಗ್ಗೆ ಸಾಕ್ಷಿ ನುಡಿದ 8 ವರ್ಷದ ಪುತ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?