ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ತಂಬೇನಹಳ್ಳಿ ಬಳಿ ನಡೆದಿದೆ.
ವೆಂಕಟೇಶ್ (35) ಸ್ಥಳದಲ್ಲಿಯೇ ಸಾವನಪ್ಪಿದ ಮೃತ ದುರ್ದೈವಿ. ವ್ಯಕ್ತಿಯು ತಂಬೇನಹಳ್ಳಿಯ ನಿವಾಸಿಯಾಗಿದ್ದು, ಪಟ್ಟಣಕ್ಕೆ ಹೋಗಿ ವಾಪಸ್ ಹಿಂದಿರುಗುತ್ತಿದ್ದ ವೇಳೆ ವಾಹನವೊಂದು ವ್ಯಕ್ತಿ ಮೇಲೆ ಹರಿದು ಹೋದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತನ ಮೇಲೆ ವಾಹನ ಹರಿಸಿದ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಟ್ಟಪ್ಪ
ಸ್ಥಳಕ್ಕೆ ದೊಡ್ಡಬೆಳವಂಗಲ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಡಿಸೆಂಬರ್ 1 ರಿಂದ ಜಿಯೋ ದುಬಾರಿ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?