Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

Crime

ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

Public TV
Last updated: August 30, 2025 5:08 pm
Public TV
Share
2 Min Read
Chattisgarh Temple Theft Arrest
SHARE

ರಾಯ್ಪುರ್: ಸಾಮಾನ್ಯವಾಗಿ ನಮಗೆ ಯಾರಾದ್ರೂ ದ್ರೋಹ ಮಾಡಿದ್ರೆ ಅಥವಾ ಕಿರಿಕ್‌ ಮಾಡಿದ್ರೆ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಬಹುಕಾಲ ಹೊಂಚು ಹಾಕ್ತೀವಿ. ಆದ್ರೆ ಇಲ್ಲೊಬ್ಬ ವ್ಯಕ್ತಿ ತನ್ನ ಈ ಸ್ಥಿತಿಗೆ ದೇವರೇ ಕಾರಣ ಅಂತ ದೂಷಿಸಿದ್ದಾನೆ. ಅಷ್ಟೇ ಅಲ್ಲ ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹುಂಡಿಗಳ ಕಳ್ಳತನವನ್ನೂ ಮಾಡಿದ್ದಾನೆ.

ಹೌದು. ಜೈಲಿನಲ್ಲಿರುವಾಗ ಹೆಚ್‌ಐವಿ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೊಬ್ಬ ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ದೇವಾಲಯ, ಜೈನ ದೇವಾಲಯ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ ಘಟನೆ ಛತ್ತೀಸ್‌ಗಡದಲ್ಲಿ ನಡೆದಿದೆ. ಸದ್ಯ ಈತನನ್ನು ದುರ್ಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ

ಬಂಧಿತ ವ್ಯಕ್ತಿ 2012ರ ಪ್ರಕರಣವೊಂದರಲ್ಲಿ ಜೈಲು ಸೇರಿದ್ದಾಗ ಹೆಚ್‌ಐವಿ ಸೋಂಕು ತಗುಲಿತ್ತು. ಇದರಿಂದಾಗಿ ದೇವರ ಮೇಲಿನ ನಂಬಿಕೆ ಕಳೆದುಕೊಂಡು ದೇಗುಲಗಳಲ್ಲಿನ ಹುಂಡಿ ಕಳ್ಳತನ ಮಾಡುವುದರಲ್ಲಿ ತೊಡಗಿಕೊಂಡಿದ್ದ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸುಮಾರು 10 ವರ್ಷಗಳಿಂದ ಛತ್ತೀಸ್‌ಗಢದ ದುರ್ಗ್ ಮತ್ತು ಸುತ್ತಮುತ್ತಲಿನ ದೇವಾಲಯಗಳಲ್ಲಿ ಹುಂಡಿ ಕಾಣಿಕೆಯ ಹಣ ಕಳ್ಳತನ ಆಗ್ತಿತ್ತು. ಬೀಗ ಮುರಿದು ಹಣ ಕಳ್ಳತನ ಮಾಡಿ, ಯಾವುದೇ ಸಾಕ್ಷಿಯನ್ನು ಬಿಡದೇ ಕಳ್ಳ ಪರಾರಿಯಾಗಿ ಬಿಡುತ್ತಿದ್ದ. ಈ ರೀತಿ 10ಕ್ಕೂ ಹೆಚ್ಚು ದೇವಾಲಯಗಳಲ್ಲಿ ಕಳ್ಳತನ ಮಾಡಿದ್ದಾನೆ. ಅದಲ್ಲದೇ ಇನ್ನೂ ಬೇರೆ ಕಳ್ಳತನ ಪ್ರಕರಣಗಳಲ್ಲಿ ಈತನೇ ಭಾಗಿಯಾಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಆರೋಪಿ 2012ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯದ ಕಳ್ಳತನ ಮಾಡಲು ಪ್ರಾರಂಭಿಸಿದ್ದ. ಮೊದಲು ದೇವಾಲಯದ ಪರಿಶೀಲನೆ ಮಾಡಿ, ಮಾರನೇ ದಿನ ಸ್ಕೂಟರ್‌ನಲ್ಲಿ ಬರುತ್ತಿದ್ದ. ದೂರದಲ್ಲಿಯೇ ಸ್ಕೂಟರ್‌ನ್ನು ನಿಲ್ಲಿಸಿ, ಬಟ್ಟೆ ಬದಲಾಯಿಸಿ ಬಳಿಕ ಕಳ್ಳತನಕ್ಕೆ ಇಳಿಯುತ್ತಿದ್ದ. ಕೆಲಸ ಮುಗಿದ ನಂತರ ಮತ್ತೆ ಬಟ್ಟೆ ಬದಲಾಯಿಸಿಕೊಂಡು ಮನೆಗೆ ಹೋಗುತ್ತಿದ್ದ. ಹೀಗೆ ಆ.23 ಮತ್ತು 24ರ ಮಧ್ಯರಾತ್ರಿ ಆರೋಪಿಯು ದುರ್ಗ್ ಹೊರವಲಯದಲ್ಲಿರುವ ಜೈನ ದೇವಾಲಯಕ್ಕೆ ನುಗ್ಗಿ ಕಳ್ಳತನ ಮಾಡಿದ್ದ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

ಕೊನೆಗೆ ಅಪರಾಧ ನಿಗ್ರಹ ದಳ, ಸೈಬರ್ ಘಟಕ ಮತ್ತು ನೆವಾಯಿ ಪೊಲೀಸ್ ಠಾಣೆಯ ಜಂಟಿ ತಂಡವು ಕಳ್ಳತನ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡಿ `ತ್ರಿಣಯನ್’ ಅಪ್ಲಿಕೇಶನ್ ಬಳಸಿ ಆತನ ಚಲನವಲನಗಳನ್ನು ಪತ್ತೆಹಚ್ಚಿದರು. ಬಳಿಕ ಆತನ ಮಾರ್ಗವನ್ನು ಕಂಡುಹಿಡಿದು, ಮನೆಯನ್ನು ಪತ್ತೆಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು.

ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಈವರೆಗೆ ನೆವಾಯ್, ಸುಪೇಲಾ, ಪದ್ಮನಾಭಪುರ, ಭಿಲಾಯಿ ಭಟ್ಟಿ ಮತ್ತು ಭಿಲಾಯಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 10ಕ್ಕೂ ಹೆಚ್ಚು ದೇವಾಲಯಗಳಲ್ಲಿ ಹುಂಡಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಾನು ಜೈಲಿನಲ್ಲಿರುವಾಗ ನನಗೆ ಹೆಚ್‌ಐವಿ ಸೋಂಕು ತಗುಲಿತ್ತು. ಈ ಮೂಲಕ ದೇವರು ನನ್ನ ಜೀವನವನ್ನೇ ಹಾಳು ಮಾಡಿದ. ಹೀಗಾಗಿ ನಾನು ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಿದೆ. ಇನ್ನೂ ಕದ್ದ ಹಣವನ್ನು ನಾನು ಕೇವಲ ಜೀವನ ನಡೆಸಲು ಬಳಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.

ಸದ್ಯ ಆತನನ್ನು ಬಂಧಿಸಿ, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸರು 1,282 ರೂ. ಮೌಲ್ಯದ ನಾಣ್ಯಗಳು ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!

TAGGED:ChhattisgarhHIV Positive ManTemple Hundi Theftಛತ್ತೀಸ್‍ಗಡಹೆಚ್‍ಐವಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

T20 World Cup ICC votes to replace Bangladesh if it doesnt play in India
Cricket

ಟಿ20 ವಿಶ್ವಕಪ್‌ | ಪಾಕ್‌ ಜಾಗದಲ್ಲಿ ಆಡುತ್ತಾ ಬಾಂಗ್ಲಾದೇಶ?

Public TV
By Public TV
22 minutes ago
Dharmendra Pradhan
Latest

ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Public TV
By Public TV
58 minutes ago
Pariksha Pe charcha
Latest

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

Public TV
By Public TV
1 hour ago
Shakeel Ahmad Rahul Gandhi
Latest

ರಾಹುಲ್ ಹೇಡಿ, ಅಂಜುಬುರುಕ ಎಂದ ಮುಸ್ಲಿಂ ಕೈ ನಾಯಕನಿಗೆ ಈಗ ಬೆದರಿಕೆ ಕರೆ

Public TV
By Public TV
2 hours ago
hd kumaraswamy 1 1
Automobile

ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ದೇಶಿಯ ಆಟೋಮೊಬೈಲ್‌ ಕ್ಷೇತ್ರ : ಹೆಚ್‌ಡಿಕೆ

Public TV
By Public TV
2 hours ago
Pitbull dog
Latest

ಟ್ರಕ್ಕಿಂಗ್‌ನಲ್ಲಿ ಹಿಮಪಾತದಿಂದ ಬಾಲಕ ಸಾವು – ಊಟ, ನೀರಿಲ್ಲದೇ 4 ದಿನ ಶವದ ಪಕ್ಕದಲ್ಲೇ ಇದ್ದ ನಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?