Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

Crime

ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

Public TV
Last updated: August 30, 2025 5:08 pm
Public TV
Share
2 Min Read
Chattisgarh Temple Theft Arrest
SHARE

ರಾಯ್ಪುರ್: ಸಾಮಾನ್ಯವಾಗಿ ನಮಗೆ ಯಾರಾದ್ರೂ ದ್ರೋಹ ಮಾಡಿದ್ರೆ ಅಥವಾ ಕಿರಿಕ್‌ ಮಾಡಿದ್ರೆ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಬಹುಕಾಲ ಹೊಂಚು ಹಾಕ್ತೀವಿ. ಆದ್ರೆ ಇಲ್ಲೊಬ್ಬ ವ್ಯಕ್ತಿ ತನ್ನ ಈ ಸ್ಥಿತಿಗೆ ದೇವರೇ ಕಾರಣ ಅಂತ ದೂಷಿಸಿದ್ದಾನೆ. ಅಷ್ಟೇ ಅಲ್ಲ ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹುಂಡಿಗಳ ಕಳ್ಳತನವನ್ನೂ ಮಾಡಿದ್ದಾನೆ.

ಹೌದು. ಜೈಲಿನಲ್ಲಿರುವಾಗ ಹೆಚ್‌ಐವಿ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೊಬ್ಬ ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ದೇವಾಲಯ, ಜೈನ ದೇವಾಲಯ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ ಘಟನೆ ಛತ್ತೀಸ್‌ಗಡದಲ್ಲಿ ನಡೆದಿದೆ. ಸದ್ಯ ಈತನನ್ನು ದುರ್ಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ

ಬಂಧಿತ ವ್ಯಕ್ತಿ 2012ರ ಪ್ರಕರಣವೊಂದರಲ್ಲಿ ಜೈಲು ಸೇರಿದ್ದಾಗ ಹೆಚ್‌ಐವಿ ಸೋಂಕು ತಗುಲಿತ್ತು. ಇದರಿಂದಾಗಿ ದೇವರ ಮೇಲಿನ ನಂಬಿಕೆ ಕಳೆದುಕೊಂಡು ದೇಗುಲಗಳಲ್ಲಿನ ಹುಂಡಿ ಕಳ್ಳತನ ಮಾಡುವುದರಲ್ಲಿ ತೊಡಗಿಕೊಂಡಿದ್ದ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸುಮಾರು 10 ವರ್ಷಗಳಿಂದ ಛತ್ತೀಸ್‌ಗಢದ ದುರ್ಗ್ ಮತ್ತು ಸುತ್ತಮುತ್ತಲಿನ ದೇವಾಲಯಗಳಲ್ಲಿ ಹುಂಡಿ ಕಾಣಿಕೆಯ ಹಣ ಕಳ್ಳತನ ಆಗ್ತಿತ್ತು. ಬೀಗ ಮುರಿದು ಹಣ ಕಳ್ಳತನ ಮಾಡಿ, ಯಾವುದೇ ಸಾಕ್ಷಿಯನ್ನು ಬಿಡದೇ ಕಳ್ಳ ಪರಾರಿಯಾಗಿ ಬಿಡುತ್ತಿದ್ದ. ಈ ರೀತಿ 10ಕ್ಕೂ ಹೆಚ್ಚು ದೇವಾಲಯಗಳಲ್ಲಿ ಕಳ್ಳತನ ಮಾಡಿದ್ದಾನೆ. ಅದಲ್ಲದೇ ಇನ್ನೂ ಬೇರೆ ಕಳ್ಳತನ ಪ್ರಕರಣಗಳಲ್ಲಿ ಈತನೇ ಭಾಗಿಯಾಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಆರೋಪಿ 2012ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯದ ಕಳ್ಳತನ ಮಾಡಲು ಪ್ರಾರಂಭಿಸಿದ್ದ. ಮೊದಲು ದೇವಾಲಯದ ಪರಿಶೀಲನೆ ಮಾಡಿ, ಮಾರನೇ ದಿನ ಸ್ಕೂಟರ್‌ನಲ್ಲಿ ಬರುತ್ತಿದ್ದ. ದೂರದಲ್ಲಿಯೇ ಸ್ಕೂಟರ್‌ನ್ನು ನಿಲ್ಲಿಸಿ, ಬಟ್ಟೆ ಬದಲಾಯಿಸಿ ಬಳಿಕ ಕಳ್ಳತನಕ್ಕೆ ಇಳಿಯುತ್ತಿದ್ದ. ಕೆಲಸ ಮುಗಿದ ನಂತರ ಮತ್ತೆ ಬಟ್ಟೆ ಬದಲಾಯಿಸಿಕೊಂಡು ಮನೆಗೆ ಹೋಗುತ್ತಿದ್ದ. ಹೀಗೆ ಆ.23 ಮತ್ತು 24ರ ಮಧ್ಯರಾತ್ರಿ ಆರೋಪಿಯು ದುರ್ಗ್ ಹೊರವಲಯದಲ್ಲಿರುವ ಜೈನ ದೇವಾಲಯಕ್ಕೆ ನುಗ್ಗಿ ಕಳ್ಳತನ ಮಾಡಿದ್ದ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

ಕೊನೆಗೆ ಅಪರಾಧ ನಿಗ್ರಹ ದಳ, ಸೈಬರ್ ಘಟಕ ಮತ್ತು ನೆವಾಯಿ ಪೊಲೀಸ್ ಠಾಣೆಯ ಜಂಟಿ ತಂಡವು ಕಳ್ಳತನ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡಿ `ತ್ರಿಣಯನ್’ ಅಪ್ಲಿಕೇಶನ್ ಬಳಸಿ ಆತನ ಚಲನವಲನಗಳನ್ನು ಪತ್ತೆಹಚ್ಚಿದರು. ಬಳಿಕ ಆತನ ಮಾರ್ಗವನ್ನು ಕಂಡುಹಿಡಿದು, ಮನೆಯನ್ನು ಪತ್ತೆಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು.

ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಈವರೆಗೆ ನೆವಾಯ್, ಸುಪೇಲಾ, ಪದ್ಮನಾಭಪುರ, ಭಿಲಾಯಿ ಭಟ್ಟಿ ಮತ್ತು ಭಿಲಾಯಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 10ಕ್ಕೂ ಹೆಚ್ಚು ದೇವಾಲಯಗಳಲ್ಲಿ ಹುಂಡಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಾನು ಜೈಲಿನಲ್ಲಿರುವಾಗ ನನಗೆ ಹೆಚ್‌ಐವಿ ಸೋಂಕು ತಗುಲಿತ್ತು. ಈ ಮೂಲಕ ದೇವರು ನನ್ನ ಜೀವನವನ್ನೇ ಹಾಳು ಮಾಡಿದ. ಹೀಗಾಗಿ ನಾನು ದೇವರ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಿದೆ. ಇನ್ನೂ ಕದ್ದ ಹಣವನ್ನು ನಾನು ಕೇವಲ ಜೀವನ ನಡೆಸಲು ಬಳಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.

ಸದ್ಯ ಆತನನ್ನು ಬಂಧಿಸಿ, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸರು 1,282 ರೂ. ಮೌಲ್ಯದ ನಾಣ್ಯಗಳು ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!

TAGGED:ChhattisgarhHIV Positive ManTemple Hundi Theftಛತ್ತೀಸ್‍ಗಡಹೆಚ್‍ಐವಿ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Boat Tragedy Madhya Pradesh Narmada River
Latest

ನರ್ಮದಾ ನದಿ ಬೋಟ್ ದುರಂತ‌ | ಊಟ ಮಾಡಲು ಆಗ್ತಿಲ್ಲ, ನಿದ್ರೆಯೂ ಬರುತ್ತಿಲ್ಲ – ಕಣ್ಣೀರಿಟ್ಟ ಚಾಲಕ

Public TV
By Public TV
1 minute ago
Bengaluru Hulimavu Housewife Suicide
Bengaluru City

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
3 minutes ago
Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
30 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
31 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
37 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?