ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆದಿದ್ದು ದುರ್ದೈವ: ಹೆಚ್.ಕೆ ಪಾಟೀಲ್

Public TV
1 Min Read
HK Patil

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ (Assembly Session) ನಡೆಸುವುದು ಸರಿಯಲ್ಲ. ಸಂಸದೀಯ ಬದ್ಧತೆ ವಿಚಾರಗಳಿಗೆ ಇದು ವ್ಯತಿರಿಕ್ತವಾದುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ (H.K Patil) ಹೇಳಿದ್ದಾರೆ.

ವಿಧಾನಸೌಧದಲ್ಲಿ (Vidhana Soudha) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರ ಆಯ್ಕೆ ವಿಚಾರ ಅವರ ಪಕ್ಷದ ವಿಚಾರವಾದರೂ ಸದನದ ದೃಷ್ಟಿಯಿಂದ ಇದು ದುರ್ದೈವದ ಸಂಗತಿಯಾಗಿದೆ. ನಮ್ಮ ಸದನದಲ್ಲಿ ಯಾವಾಗಲೂ ವಿರೋಧ ಪಕ್ಷದ ನಾಯಕರು ಇದ್ದೇ ಇರುತ್ತಿದ್ದರು. ಈಗ ವಿರೋಧ ಪಕ್ಷದ ನಾಯಕರಿಲ್ಲದೆ ನಮ್ಮ ರಾಜ್ಯಪಾಲರ ಭಾಷಣ ಮಾತ್ರ ನಡೆದಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಆದರೆ ಸದನದ ಘನತೆ ಮತ್ತು ಸಂಸ್ಕೃತಿ ಪರಂಪರೆಗೆ ಧಕ್ಕೆಯಾಗಿದೆ. ವಿಧಾನಸಭೆಯ ಇತಿಹಾಸದಲ್ಲೇ ಇಂತಹ ಪ್ರಕರಣ ಇದೇ ಮೊದಲು ಎಂದಿದ್ದಾರೆ. ಇದನ್ನೂ ಓದಿ: ಜೆಪಿ ನಗರದಲ್ಲಿ ಸಾಯಿ ಟ್ರಸ್ಟ್‌ನಿಂದ ಗುರುಪೂರ್ಣಿಮೆ – 20 ಸಾವಿರ ತೆಂಗಿನಕಾಯಿಯಿಂದ ವಿಶೇಷ ಅಲಂಕಾರ

ಇದೇ ವೇಳೆ, ಬಿಜೆಪಿಯ ಜನ ವಿರೋಧಿ ಕಾನೂನುಗಳನ್ನ ವಾಪಸ್ ಪಡೆಯುವಂತಹ ಚಿಂತನೆ ಇದೆ. ಕೆಲ ಕಾನೂನುಗಳನ್ನ ವಾಪಸ್ ಪಡೆಯುವಂತಹ ಪ್ರಕ್ರಿಯೆಯನ್ನು ಬಹಳ ಬೇಗನೆ ಪ್ರಾರಂಭಿಸುತ್ತೇವೆ. ಕಲಾಪ ಸಲಹಾ ಸಮಿತಿ ಸಭೆ ಬಳಿಕ ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article