ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು (Rain), ಶನಿವಾರ (ಮೇ 31) ರಂದು ಎಲ್ಲಾ ಶಾಲೆಗಳಿಗೆ (School) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಭಾರೀ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ (Student) ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಭಾರೀ ಮಳೆ ಪರಿಣಾಮ ವಿವಿಧೆಡೆ ಆರು ಮಂದಿ ಬಲಿಯಾಗಿದ್ದಾರೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಆರ್ಭಟ ಮುಂದುವರಿದಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!