Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವರುಣನ ರೌದ್ರಾವತಾರಕ್ಕೆ ತುಂಬಿದ ಕೆರೆ-ಕುಂಟೆ – ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

Public TV
Last updated: July 9, 2018 8:25 am
Public TV
Share
2 Min Read
OVER RAIN
SHARE

ಬೆಂಗಳೂರು: ದಿನೇ ದಿನೇ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಕೆರೆ, ಕುಂಟೆ ಮತ್ತು ನದಿಗಳು ತುಂಬಿ ಹರಿಯುತ್ತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿಯಲ್ಲಿ ಸ್ವಲ್ಪ ಬಿಡುವು ಕೊಟ್ಟ ವರುಣ ಈಗ ಉಡುಪಿ, ಮಡಿಕೇರಿ, ಚಿಕ್ಕಮಗಳೂರು ಭಾಗಗಳಲ್ಲಿ ಅಬ್ಬರಿಸುತ್ತಿದ್ದಾನೆ. ಎಲ್ಲಿ ನೋಡಿದರು ನೀರು ನಿಂತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ಉಡುಪಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ರಾತ್ರಿಯಿಂದ ಸುರಿದ ಧಾರಾಕಾರ ಮಳೆ- ಜನ ಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ!

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಎನ್‍ಡಿಆರ್ ತಂಡ ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆಗೊಂಡಿದೆ. ಮೂಲ್ಕಿ ಭಾಗದಲ್ಲಿ ನೆರೆಗೆ ಕಾರಣವಾಗಿದ್ದ ಶಾಂಭವಿ ನದಿಯಲ್ಲಿ ನೀರು ಇಳಿಕೆಯಾಗಿದೆ. ಆದರು ಇಲ್ಲಿನ ಕೃಷಿ ಜಮೀನು, ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದ ನೀರು ಕಡಿಮೆಯಾಗಿಲ್ಲ. ಹೀಗಾಗಿ ಶಿಬರೂರು, ಕಿಲೆಂಜೂರು ಭಾಗದ ಸಂತ್ರಸ್ತರಿಗಾಗಿ ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕ ಗಂಜಿ ಕೇಂದ್ರ ಆರಂಭಿಸಲಾಗಿದೆ.

RAIN 1

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು, ಕೆರೆಗಳು ತುಂಬಿ ಹರಿಯುತ್ತಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕೆಆರ್‍ಎಸ್ ಭರ್ತಿಗೆ ಇನ್ನು 15.45 ಅಡಿ ಬಾಕಿ ಇದ್ದು, ಒಳಹರಿವು 10,124 ಕ್ಯೂಸೆಕ್ ಇದ್ದರೆ, ಹೊರ ಹರಿವು 3,494 ಕ್ಯೂಸೆಕ್ ಇದೆ. ಬರೋಬ್ಬರಿ 15 ವರ್ಷಗಳ ಬಳಿಕ ಒಂದೇ ತಿಂಗಳಲ್ಲಿ ತುಂಗಭದ್ರಾ ಡ್ಯಾಂನಲ್ಲಿ 42 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಹಾರಂಗಿ ಜಲಾಶಯ ಭರ್ತಿಯಾಗಿದ್ದು ಒಳ ಹರಿವು ಹೆಚ್ಚಳವಾಗಿದೆ.

ನಿರಂತರ ಮಳೆಯಿಂದಾಗಿ ಪಶ್ಚಿಮ ಘಟ್ಟದಿಂದ ಹರಿದು ಬರುವ ಬಹುತೇಕ ನದಿಗಳು ತುಂಬಿಕೊಂಡಿದೆ. ಗಡಿನಾಡು ಕಾಸರಗೋಡು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಧೂರು ಸಿದ್ಧಿವಿನಾಯಕ ಕ್ಷೇತ್ರಕ್ಕೆ ನದಿಯ ನೆರೆ ನೀರು ನುಗ್ಗಿದೆ. ದೇವಸ್ಥಾನದ ಅಂಗಣದ ಒಳಭಾಗದಲ್ಲಿ ಭಾನುವಾರ ರಾತ್ರಿಯಿಂದ ಎರಡು ಅಡಿಯಷ್ಟು ನೀರು ನಿಂತಿತ್ತು. ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆಗಳು ನೀರಿನ ಮಧ್ಯೆಯೇ ನಡೆದಿದೆ. ಭಕ್ತರು ನೀರಿನಲ್ಲಿ ನಿಂತೇ ದೇವರ ಸೇವೆ ಪೂರೈಸಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾದಾಗ ಪ್ರತಿವರ್ಷವೂ ನೆರೆ ನೀರು ದೇಗುಲಕ್ಕೆ ನುಗ್ಗುತ್ತದೆ.

RAIN 2

ಉಡುಪಿ ಜಿಲ್ಲೆಯಲ್ಲಿ ಮೂರು ದಿನ ನಿರಂತರ ಮುಂಗಾರು ಮಳೆ ಆರ್ಭಟಿಸಿದ್ದು ಸ್ವರ್ಣಾ ನದಿ ಉಕ್ಕಿ ಹರಿದಿದೆ. ನದಿಯ ರಭಸಕ್ಕೆ ಬಜೆ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಕಾರ್ಕಳ, ಉಡುಪಿಯಲ್ಲಿ ಸುರಿದ ಧಾಕಾರಾರ ಮಳೆ ಪರಿಣಾಮ ಅಣೆಕಟ್ಟು ಮೇಲಿಂದ ನದಿ ತುಂಬಿ ಹರಿಯುತ್ತಿದೆ. ಸುತ್ತ ಮುತ್ತಲಿನ ತೋಟಗಳಿಗೆ ನದಿ ನೀರು ನುಗ್ಗಿದೆ. ಪುನರ್ವಸು ಮಳೆಗೆ ಉಡುಪಿ ಜಿಲ್ಲೆ ತತ್ತರಗೊಂಡಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಉಡುಪಿನಗರ, ಮಲ್ಪೆ, ಬ್ರಹ್ಮಾವರ ಮತ್ತು ಕೋಟ ಭಾಗಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕುಂದಾಪುರದ ಖಾರ್ವಿಕೆರೆಯಲ್ಲಿ ಮೂರು ಮನೆಗಳು ಕುಸಿದಿವೆ. ಕೊಲ್ಲೂರಿನಲ್ಲಿ ಮಳೆಯಿಂದಾಗಿ ಜನಜೀವನ ಅಕ್ಷರಶಃ ಅಸ್ತವ್ಯಸ್ತಗೊಂಡಿತು. ಇನ್ನು ಕಾರ್ಕಳ ತಾಲೂಕಿನಲ್ಲೂ ಅತಿ ಹೆಚ್ಚು ಮಳೆಯಾಗಿದೆ. ಕಟಪಾಡಿಯ ಕಲ್ಲಾಪುವಿನಲ್ಲಿ ರಾಷ್ಡ್ರೀಯ ಹೆದ್ದಾರಿಯಲ್ಲಿ ನೆರೆ ನೀರು ಆವರಿಸಿದೆ. ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತುರ್ತು ಕಾಮಗಾರಿಗೆ ಆದೇಶ ನೀಡಿದ್ದಾರೆ.

TAGGED:collegedakshina kannadaDamageKodaguPublic TVrainriverschooludupiVacationಉಡುಪಿಕಾಲೇಜುಕೊಡಗುದಕ್ಷಿಣ ಕನ್ನಡನದಿಪಬ್ಲಿಕ್ ಟಿವಿಮಳೆರಜೆಶಾಲಾಹಾನಿ
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 second ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
3 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
20 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
25 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
28 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?