ನೆಲಮಂಗಲ: ರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದು ಹೋಮ್ ಗಾರ್ಡ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ರೈಲ್ವೇ ಗೊಲ್ಲಹಳ್ಳಿ ನಿಲ್ದಾಣದಲ್ಲಿ ನಡೆದಿದೆ.
ಅರ್ಜುನ್ ಬೆಟ್ಟಹಳ್ಳಿ ನಿವಾಸಿಯಾದ 22 ವರ್ಷದ ಅನುಸೂಯ ಮೃತ ದುರ್ದೈವಿ. ಬೆಂಗಳೂರಿನ ಮೆಟ್ರೋದಲ್ಲಿ ಹೋಮ್ ಗಾಡ್9 ಆಗಿ ಕೆಲಸ ಮಾಡುತ್ತಿದ್ದ ಅನುಸೂಯ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ.
ಅಪಘಾತ ನಡೆದು ಎರಡು ಗಂಟೆಯಾದರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.