ಬಿಎಸ್‌ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳ್ತಿದ್ದಾರೆ: ಪರಂ

Public TV
1 Min Read
G Parameshwara 1

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ (B S Yediyurappa) ವಿರುದ್ಧ ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಪ್ರಕರಣದ ಕುರಿತು ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡ್ತಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ್ದು, ಇದು ಬಹಳ ಸೂಕ್ಷ್ಮ ವಿಷಯ ಎಂದಿದ್ದಾರೆ.

ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡ್ತಿದ್ದಾರೆ. ಇದರ ಬಗ್ಗೆ ಡಿಸಿಎಂ, ಸಿಎಂ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡ್ತೀವಿ. ವಶಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲೆ ನಿರ್ಧಾರವಾಗುತ್ತದೆ. ಆ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾ ಹೇಳ್ತಾರೆ. ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಫಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ನನಗೆ ಹೇಳಿದ್ದಾರೆ. ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸೇರಿದ್ದಂತದ್ದು, ಯಾವುದೇ ವಿಷಯ ಆದರೂ ಬಹಳ ಎಚ್ಚರಿಕೆಯಿಂದ ಹೇಳಬೇಕಾಗುತ್ತದೆ. ಹೆಚ್ಚು ಮಾಹಿತಿ ತಗೆದುಕೊಳ್ಳೋವರೆಗೂ ಏನು ಬಹಿರಂಗ ಮಾಡೋಕೆ ಆಗಲ್ಲ ಎಂದು ಹೇಳಿದರು.

Share This Article