Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎರಡನೇ ಬಾರಿ ಹೋಗಿ ರಾಜಣ್ಣ ಕೈಗೆ ಸಿಕ್ಕಿ ಬಿದ್ದ ಹನಿಟ್ರ್ಯಾಪ್‌ ಅಸಾಮಿಗಳು!

Public TV
Last updated: March 21, 2025 7:53 am
Public TV
Share
2 Min Read
Honey Trap Rajanna
SHARE

ಬೆಂಗಳೂರು: ಸಹಕಾರಿ ಸಚಿವ ರಾಜಣ್ಣ (Rajanna) ಅವರ ಮನೆ ಬಳಿ ಎರಡನೇ ಬಾರಿ ಹೋದಾಗ ಹನಿಟ್ರ್ಯಾಪ್‌ (Honey Trap) ಅಸಾಮಿಗಳು ಸಿಕ್ಕಿ ಬಿದ್ದಿದ್ದಾರೆ.

ಹೌದು. ಜಯಮಹಲ್‌ನಲ್ಲಿರುವ ಸಹಕಾರ ಸಚಿವ ರಾಜಣ್ಣ ಅವರ ಸರ್ಕಾರಿ ನಿವಾಸಕ್ಕೆ ಮೊದಲ ಬಾರಿಗೆ ಹನಿಟ್ರ್ಯಾಪ್‌ ಗ್ಯಾಂಗ್‌ ಹೋಗಿದೆ. ಈ ವೇಳೆ ರಾಜಣ್ಣ ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಎರಡನೇ ಬಾರಿ ಹೋದಾಗ ಅಸಲಿಯತ್ತು ತಿಳಿದು ರಾಜಣ್ಣ ಅವರನ್ನು ಲಾಕ್‌ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಾಜಣ್ಣ ಇಬ್ಬರ ಬಳಿ ನಿಮ್ಮನ್ನು ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಂದ ವ್ಯಕ್ತಿಗಳು ಹನಿಟ್ರ್ಯಾಪ್‌ ಮಾಡಲು ಹೇಳಿದವರ ಹೆಸರನ್ನು ತಿಳಿಸಿದ್ದಾರೆ. ವಿಚಾರಣೆ ವೇಳೆ ಆ ವ್ಯಕ್ತಿಗಳು ತಮಗೆ ನಿರ್ದೇಶನ ಕೊಟ್ಟ ವ್ಯಕ್ತಿಗಳ ಬಗ್ಗೆ ವಿವರ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದು ಬಂದಿದೆ. ಇದನ್ನೂ ಓದಿ: ನಾನೇನು ಶ್ರೀರಾಮಚಂದ್ರ ಅಲ್ಲ – ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಕೆ.ಎನ್‌ ರಾಜಣ್ಣ ಆಗ್ರಹ

6 ತಿಂಗಳಿನಿಂದ ಹನಿಟ್ರ್ಯಾಪ್‌ಗೆ ಪ್ಲ್ಯಾನ್‌ ಮಾಡಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಈ ಪ್ಲ್ಯಾನ್‌ ಕಾರ್ಯಗತಗೊಳಿಸಲು ತಂಡ ಮುಂದಾಗಿತ್ತು. ರಾಜಣ್ಣ ನಿವಾಸದಲ್ಲಿರುವ ಸಿಸಿಟಿವಿಯಲ್ಲಿ ಹನಿಟ್ರ್ಯಾಪ್‌ಗೆ ಬಂದವರು ಸೆರೆಯಾಗಿದ್ದಾರೆ. ಈ ದೃಶ್ಯ ತನಿಖೆಯಲ್ಲಿ ಮುಖ್ಯಪಾತ್ರವಹಿಸಲಿದೆ.

ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ರಾಜಣ್ಣ ಪುತ್ರ, ಕಾಂಗ್ರೆಸ್‌ ಪರಿಷತ್‌ ಸದಸ್ಯ ರಾಜೇಂದ್ರ, ಎರಡು ತಿಂಗಳಿಂದ ನಮ್ಮ ತಂದೆಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ. ಅಲ್ಲದೇ 6 ತಿಂಗಳಿನಿಂದ ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಸದನದಲ್ಲಿ ಈಗಾಗಲೇ ನನ್ನ ತಂದೆಯವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಲು ಯತ್ನ ನಡೆದಿದೆ. ಇದು ರಾಜಕೀಯನಾ ಅಥವಾ ವೈಯಕ್ತಿಕನಾ ಎಂಬುದರ ಬಗ್ಗೆ ತನಿಖೆ ಆಗಬೇಕು. ಗೃಹ ಸಚಿವರು ನಮ್ಮ ಜಿಲ್ಲೆಯವರು. ಪರಮೇಶ್ವರ್‌ ಅವರ ಜೊತೆ ಮಾತನಾಡಿ ಈ ಬಗ್ಗೆ ದೂರು ನೀಡುತ್ತೇವೆ ಸರ್ಕಾರದಿಂದ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.

 

ರಿವೀಲ್‌ ಆಗಿದ್ದು ಹೇಗೆ?
ಕಳೆದ 4 ದಿನಗಳಿಂದ ತಮಕೂರು ಮೂಲದ ರಾಜ್ಯದ ಪ್ರಭಾವಿ ಸಚಿವರ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ನಡೆದಿದೆ ಎಂಬ ವಿಚಾರ ಜೋರಾಗಿ ಚರ್ಚೆ ಆಗುತ್ತಿತ್ತು. ಆದರೆ ಯಾರು ಎನ್ನುವ ಬಗ್ಗೆ ಯಾರು ಅಧಿಕೃತವಾಗಿ ತಿಳಿಸಿರಲಿಲ್ಲ.

ಶುಕ್ರವಾರ ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನೇರವಾಗಿಯೇ ಸಹಕಾರಿ ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಸಚಿವರ ಮೇಲೆ 2 ಸಲ ಹನಿಟ್ರ್ಯಾಪ್ ಯತ್ನ – ಸತೀಶ್ ಜಾರಕಿಹೊಳಿ ಬಾಂಬ್

ಯತ್ನಾಳ್ ಪ್ರಸ್ತಾಪ ಬೆನ್ನಲ್ಲೇ ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿರುವುದು ಸತ್ಯ ಎಂಬುದನ್ನು ರಾಜಣ್ಣ ಒಪ್ಪಿಕೊಂಡರು. ಕರ್ನಾಟಕ ಸಿಡಿ, ಪೆನ್‌ಡ್ರೈವ್ ಗೆ ಫ್ಯಾಕ್ಟರಿ ಆಗಿದೆ. 48 ಮಂದಿಯ ಮೇಲೆ ಸಿಡಿ, ಪೆನ್‌ಡ್ರೈವ್ ಆಪರೇಷನ್ ಮಾಡಲಾಗಿದೆ. ಎಲ್ಲಾ ಪಕ್ಷದವರು ಇದರಲ್ಲಿ ಸಿಲುಕಿದ್ದಾರೆ. ಕೇಂದ್ರದ ಮುಖಂಡರೂ ಇದ್ದಾರೆ. ಇದರ ಹಿಂದಿರುವ ಪ್ರೊಡ್ಯೂಸರ್ ಯಾರು? ಡೈರೆಕ್ಟರ್ ಯಾರು ಎನ್ನುವುದು ಗೊತ್ತಾಗಬೇಕು. ಹೀಗಾಗಿ ಈ ಬಗ್ಗೆ ಉನ್ನತಮಟ್ಟದ ತನಿಖೆ ಆಗಬೇಕು. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಸಚಿವ ರಾಜಣ್ಣ ಆಗ್ರಹಿಸಿದ್ದರು.

ರಾಜಣ್ಣ ಮಾತಿಗೆ ಪಕ್ಷಬೇಧ ಮರೆತು ಎಲ್ಲಾ ಪಕ್ಷಗಳಿಂದ ಬೆಂಬಲ ಸಿಕ್ಕಿತು. ತಕ್ಷಣವೇ ಗೃಹ ಸಚಿವರು ಕೂಡ ಉನ್ನತಮಟ್ಟದ ತನಿಖೆಗೆ ಆದೇಶ ನೀಡುವ ಘೋಷಣೆ ಮಾಡಿದರು.

TAGGED:bjpcongressHoney Trapkarnatakarajannaಕರ್ನಾಟಕಕಾಂಗ್ರೆಸ್ಬಿಜೆಪಿರಾಜಣ್ಣಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema News

radhika pandit ganesh chaturthi
ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Cinema Latest Sandalwood Top Stories
Ram Charan
1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್
Cinema Latest Mysuru South cinema
Upendra
ಉಪ್ಪಿ ಮನೆಯಲ್ಲಿ ಗಣೇಶ ಹಬ್ಬ ಭಲೇ ಜೋರು
Bengaluru City Cinema Latest Sandalwood
Gowri 3
ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ
Cinema Latest Sandalwood
Anil Shetty
ಸ್ಟಾರ್ಟಪ್ ಉದ್ಯಮಿ ಅನಿಲ್ ಶೆಟ್ಟಿ ಸಿನಿಮಾದ ಟೈಟಲ್ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

Gadag Public TV Belaku Impact
Districts

ಗದಗದ ಬಡ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ – ಸಂಪೂರ್ಣ ಮನೆ ದುರಸ್ತಿ ಮಾಡಿಸಿಕೊಟ್ಟ ಉಸಿರು ಫೌಂಡೇಶನ್

Public TV
By Public TV
24 minutes ago
Rahul Gandhi 3
Latest

ಗುಜರಾತ್‌ನಲ್ಲಿ ಹೆಸರೇ ಕೇಳದ ಪಕ್ಷಗಳಿಗೆ 4,300 ಕೋಟಿ ದೇಣಿಗೆ – ರಾಗಾ ಮತ್ತೊಂದು ಬಾಂಬ್‌

Public TV
By Public TV
1 hour ago
J And K Rain
Latest

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 2 ದಿನಗಳಲ್ಲಿ 41 ಮಂದಿ ಸಾವು

Public TV
By Public TV
1 hour ago
road cave chamarajapete
Bengaluru City

ಬೆಂಗಳೂರಲ್ಲಿ ಸುರಿದ ಮಳೆಯಿಂದ ಕಳಪೆ ಕಾಮಗಾರಿ ಬಯಲು – ಚಾಮರಾಜಪೇಟೆಯಲ್ಲಿ 50 ಮೀಟರ್ ಉದ್ದದ ರಸ್ತೆ ಕುಸಿತ

Public TV
By Public TV
2 hours ago
Chamarajanagara Suicide
Chamarajanagar

ಗೌರಿ-ಗಣೇಶ ಹಬ್ಬಕ್ಕೆ ಕರೆಯಲು ತವರಿನವರಿಲ್ಲವೆಂದು ಮನನೊಂದು ಗೃಹಿಣಿ ಸೂಸೈಡ್

Public TV
By Public TV
2 hours ago
AI ಚಿತ್ರ
Latest

ಉ.ಕನ್ನಡದಲ್ಲಿ ಭಾರೀ ಮಳೆ; 10 ತಾಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?