ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಪಬ್ಲಿಕ್ ಟಿವಿಯಲ್ಲಿ ವರದಿ ಬಂದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.

ಶಾಲೆಗೆ ಹೋಗಬೇಕಿದ್ದ ವಿದ್ಯಾರ್ಥಿಗಳು ಶಾಲೆ ಬಿಟ್ಟು ಪೋಷಕರ ಜೊತೆ ನೀರು ತರೋದಕ್ಕೆ ನಿತ್ಯವೂ ಹೋಗಲೇಬೇಕು. ಇಲ್ಲದಿದ್ದರೆ ಕುಡಿಯೋದಕ್ಕೆ ನೀರು ಸಿಗದೇ ಪರದಾಡಬೇಕಾಗ್ತದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದರ ಕುರಿತಾದ ಸುದ್ದಿ ಪ್ರಸಾರದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿ ಇರೋ ಸಮಸ್ಯೆಯ ವಾಸ್ತವಾಂಶ ಅರಿತುಕೊಂಡಿದ್ದಾರೆ. ಶೀಘ್ರದಲ್ಲೇ ಇಡೀ ಪಟ್ಟಣಕ್ಕೆ ನೀರು ಒದಗಿಸೋದಾಗಿ ಭರವಸೆ ನೀಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


