ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಪಬ್ಲಿಕ್ ಟಿವಿಯಲ್ಲಿ ವರದಿ ಬಂದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.
ಬೇಸಿಗೆ ಕಳೆದು ಮಳೆಗಾಲ ಆರಂಭ ಆಗಿದ್ದರೂ, ಕೇಂದ್ರ ವಡಗೇರಾದಲ್ಲಿ ಎರಡ್ಮೂರು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದೆ. ಕುಡಿಯುವ ನೀರಿಗಾಗಿ ವಡಗೇರಾ ಪಟ್ಟಣದ ಜನ ಎರಡು ಕಿಲೋ ಮೀಟರ್ ದೂರ ಕ್ರಮಿಸಿ ನೀರು ತರುವ ದುಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಕುಡಿಯೋ ನೀರಿಗೂ ಹಾಹಾಕಾರ- ಕಿ.ಮೀಟರ್ಗಟ್ಟಲೇ ಹೋಗಿ ನೀರು ತರೋ ಪರಿಸ್ಥಿತಿ
ಶಾಲೆಗೆ ಹೋಗಬೇಕಿದ್ದ ವಿದ್ಯಾರ್ಥಿಗಳು ಶಾಲೆ ಬಿಟ್ಟು ಪೋಷಕರ ಜೊತೆ ನೀರು ತರೋದಕ್ಕೆ ನಿತ್ಯವೂ ಹೋಗಲೇಬೇಕು. ಇಲ್ಲದಿದ್ದರೆ ಕುಡಿಯೋದಕ್ಕೆ ನೀರು ಸಿಗದೇ ಪರದಾಡಬೇಕಾಗ್ತದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದರ ಕುರಿತಾದ ಸುದ್ದಿ ಪ್ರಸಾರದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿ ಇರೋ ಸಮಸ್ಯೆಯ ವಾಸ್ತವಾಂಶ ಅರಿತುಕೊಂಡಿದ್ದಾರೆ. ಶೀಘ್ರದಲ್ಲೇ ಇಡೀ ಪಟ್ಟಣಕ್ಕೆ ನೀರು ಒದಗಿಸೋದಾಗಿ ಭರವಸೆ ನೀಡಿದ್ದಾರೆ.
Web Stories