Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಬೆಳೆಯಬೇಕಾದರೆ ಜನಮನದಲ್ಲಿ ವ್ಯಾಪಕ ಬದಲಾವಣೆಯಾಗಬೇಕು: ಕುಮಾರಿ ಸುದೀತಿ ಅಂಬಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕನ್ನಡ ಬೆಳೆಯಬೇಕಾದರೆ ಜನಮನದಲ್ಲಿ ವ್ಯಾಪಕ ಬದಲಾವಣೆಯಾಗಬೇಕು: ಕುಮಾರಿ ಸುದೀತಿ ಅಂಬಳೆ

Latest

ಕನ್ನಡ ಬೆಳೆಯಬೇಕಾದರೆ ಜನಮನದಲ್ಲಿ ವ್ಯಾಪಕ ಬದಲಾವಣೆಯಾಗಬೇಕು: ಕುಮಾರಿ ಸುದೀತಿ ಅಂಬಳೆ

Public TV
Last updated: November 15, 2023 7:27 pm
Public TV
Share
3 Min Read
horanadu kannada sahitya sammelana
SHARE

– ನವದೆಹಲಿಯಲ್ಲಿ ಹೊರನಾಡು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಮಾತು

ನವದೆಹಲಿ: ಕನ್ನಡ ಬೆಳೆಯಬೇಕಾದರೆ ಮನೆ ಮನೆಯಲ್ಲಿ, ಜನಮನದಲ್ಲಿ ವ್ಯಾಪಕವಾದ ಬದಲಾವಣೆ ಆಗಬೇಕು ಎಂದು ಪ್ರಥಮ ರಾಷ್ಟ್ರೀಯ ಹೊರನಾಡು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ (Horanadu Makkala Kannada Sahitya Sammelana) ಸರ್ವಾಧ್ಯಕ್ಷೆ ದೆಹಲಿಯ ಕುಮಾರಿ ಸುದೀತಿ ಅಂಬಳೆ ತಿಳಿಸಿದರು.

ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ದೆಹಲಿ ಘಟಕದ ಆಶ್ರಯದಲ್ಲಿ ದೆಹಲಿಯ ಸತ್ಯಸಾಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿ, ಈ ಜವಾಬ್ದಾರಿಯು ಸಮಾಜದ ಪ್ರತಿಯೊಬ್ಬರದ್ದಾಗಬೇಕು ಎಂದರು. ಇದನ್ನೂ ಓದಿ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನ ಪೊಲೀಸ್ ಕಸ್ಟಡಿ

horanadu kannada sahitya sammelana 2

ಇಂದು ನಾವು ಪಣ ತೊಟ್ಟು ಜನಾಂದೋಲನ ಮಾಡಿದ್ದೇ ಆದರೆ ಆ ಒಕ್ಕೊರಲಿನ ಧ್ವನಿಯು ಪರಿಣಾಮಕಾರಿಯಾಗಲಿದೆ. ಕಲಿಕೆ ಎನ್ನುವುದು ಕಲಿಸುವವರ ಮತ್ತು ಕಲಿಯುವವರ ಆಸಕ್ತಿಯನ್ನು ಅವಲಂಬಿಸಿದ್ದು, ಈ ಆಸಕ್ತಿಯನ್ನು ಮಕ್ಕಳಲ್ಲಿ ಮೂಡಿಸುವುದು ಹೇಗೆ ಎನ್ನುವುದೇ ಹೊರನಾಡ ಕನ್ನಡಿಗರ ಮುಂದಿರುವ ಸವಾಲಾಗಿದೆ. ಇದರಲ್ಲಿ ಪೋಷಕರ ಪಾತ್ರವೇ ಮುಖ್ಯವೆಂದರು.

ಕನ್ನಡ ಮೊದಲು ಮನೆಯ ಮಾತಾಗಬೇಕು, ಹೊರನಾಡ ಕನ್ನಡದ ಮಕ್ಕಳಿಗೆ ಕನ್ನಡದ ಪುಸ್ತಕವನ್ನು ಓದಿ ಎಂದು ಒಮ್ಮೆಗೆ ಹೇಳಿದರೆ ಅದು ಹತ್ತಲಾಗದ ಬೆಟ್ಟದಂತೆ ಕಾಣುತ್ತದೆ. ಈ ಸಮಸ್ಯೆಗೆ ಪರಿಹಾರ ಖಂಡಿತ ಇದೆ. ಕನ್ನಡ ಓದಲು ತೊಂದರೆ ಇರಬಹುದು, ಆದರೆ ಅನುಭವಿಸಲು ಏನು ತೊಂದರೆ ಇಲ್ಲವಲ್ಲ? ಕಥೆ, ಪದ್ಯ ,ಭಾವಗೀತೆ, ಜನಪದ ಗೀತೆ , ಹಾಸ್ಯ ಸಂಜೆ, ನಾಟಕಗಳು ಕನ್ನಡದ ಜ್ಞಾನ ಭಂಡಾರ ಮತ್ತು ಸೊಬಗನ್ನು ಹಂಚುತ್ತವೆ. ಇವೆಲ್ಲವನ್ನೂ ಅನುಭವಿಸುವ ಅವಕಾಶ ಒದಗಿಸಬೇಕು. ಪುಸ್ತಕ ಓದಲಾಗದಿದ್ದರೆ ಏನಂತೆ? ಕನ್ನಡ ಪ್ರಕಾಶಕರು ಮಕ್ಕಳ ಸಂಬಂಧಿತ ಆಡಿಯೋ ಪುಸ್ತಕಗಳನ್ನು ಹೊರ ತರಬೇಕೆಂದರು. ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ

ಕನ್ನಡ ಎಂದರೆ ಸಂತೋಷ ಮತ್ತು ಆನಂದದ ಅನುಭವ ಎನಿಸುತ್ತದೆ. ಈ ಹಂತದಲ್ಲಿ ಸ್ವಯಂ ಪ್ರೇರಣೆಯಿಂದ ಕನ್ನಡ ಕಲಿಯಲು, ಕಲಿಸಲು, ಬಳಸಲು, ಬೆಳೆಸಲು ಮಕ್ಕಳೇ ಮುಂದಾಗುತ್ತಾರೆ. ಸರ್ಕಾರ, ಸಮಾಜ, ಕನ್ನಡಪರ ಸಂಘಟನೆಗಳು, ಉದ್ಯಮಿಗಳು ಒಂದುಗೂಡಿ ನವಯುಗದ ಮಾಧ್ಯಮಗಳಲ್ಲಿ ಕೆಲಸ ಮಾಡುವ ಅಗತ್ಯವಿದೆ. ಮುಂದೊಂದು ದಿನ ತಾಯಿ ಭುವನೇಶ್ವರಿಗೆ ಜ್ಞಾನಪೀಠ ಪ್ರಶಸ್ತಿಯ ಕಿರೀಟ ಹಾಕಿಸುವ ಕುಡಿ ಹೊರನಾಡ ಕನ್ನಡಿಗರಲ್ಲಿ ಹುಟ್ಟಲೆಂದರು.

horanadu kannada sahitya sammelana 1

ತಾಯಿ ಭುವನೇಶ್ವರಿಯ ಸೇವೆ ಮಾಡಲು ನಾವು ಕರ್ನಾಟಕದಲ್ಲಿ ಇರಬೇಕಿಲ್ಲ. ನಮ್ಮಲ್ಲಿ ಕರ್ನಾಟಕ ಇರಬೇಕು. ನಾವೇ ಕನ್ನಡದ, ಕರ್ನಾಟಕದ ರಾಯಭಾರಿಗಳಾಗಬೇಕು. ಕನ್ನಡ ಸಂಸ್ಕೃತಿ, ಭಾಷೆ, ಸಾಹಿತ್ಯ ಕರ್ನಾಟಕದ ಗಡಿಗಷ್ಟೇ ಸೀಮಿತಗೊಳಿಸಬಾರದು. ಹೊರನಾಡಿಗೂ ಹರಡುವ ಸುವರ್ಣ ಅವಕಾಶ ನಮಗಿದೆ ಎಂದರು. ಭಾರತದ ಎಲ್ಲೆಡೆ ಕನ್ನಡದ ಮಕ್ಕಳಲ್ಲಿ ಕಲೆ, ಸಂಸ್ಕೃತಿಯನ್ನು ಬಿತ್ತುವ ಪ್ರಯತ್ನ ಮಾಡುತ್ತಿರುವ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಪವಿತ್ರ ಯಜ್ಞ ಕಾರ್ಯಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಹೆಚ್ಚಿನ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಬೇಕು. ಕನ್ನಡಪರ ಕಾನೂನುಗಳನ್ನು ಸಕ್ರಿಯಗೊಳಿಸಬೇಕೆಂದು ವಿನಂತಿಸಿದರು. ಇದನ್ನೂ ಓದಿ: ಎಲ್ಲರೂ ಒಗ್ಗಟ್ಟಾಗಿ ಹೋದರೆ ರಾಜ್ಯದಲ್ಲಿ 28 ಎಂಪಿ ಸ್ಥಾನ ಗೆಲ್ಲಬಹುದು: ಬೊಮ್ಮಾಯಿ

ಸಂಬಂಧದ ಬೆಸುಗೆ ಈ ಸಮ್ಮೇಳನದಿಂದ ಗಟ್ಟಿಯಾಗಿದೆ. ಗ್ರಾಮೀಣ ಭಾಗದ ಕಲೆಗಳ ಪುನರುತ್ಥಾನ ಆಗಬೇಕು. ಅವುಗಳನ್ನು ಉಳಿಸುವ ಕೆಲಸ ಸರ್ಕಾರದಿಂದಲೂ ಆಗಬೇಕು. ಮುಖ್ಯಮಂತ್ರಿಯೊಂದಿಗೆ ಈ ಬಗ್ಗೆ ಮಾತನಾಡಿ ಪರಿಷತ್ತಿಗೆ ಶಾಶ್ವತ ಅನುದಾನಕ್ಕಾಗಿ ಒತ್ತಾಯಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಸಾಹಿತ್ಯದ ಬೇರುಗಳನ್ನು ಗಟ್ಟಿಗೊಳಿಸಲು ಮಕ್ಕಳ ಸಾಹಿತ್ಯ ಪರಿಷತ್ತು ಪೂರಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರದ ಸಹಭಾಗಿತ್ವದಲ್ಲಿ ಇಂತಹ ಸಮ್ಮೇಳನಗಳು ನಡೆಯುವಂತಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಮಾತನಾಡಿ, ಕನ್ನಡ ಭಾಷೆಗೆ 5000 ವರ್ಷಗಳ ಇತಿಹಾಸವಿದೆ ಎಂಬುದಕ್ಕೆ ವೈಜ್ಞಾನಿಕ ಆಧಾರವಿದೆ. ನ್ಯಾನೋ ತಾಂತ್ರಿಕತೆ ಆವಿಷ್ಕಾರವಾಗಿದ್ದು ಕನ್ನಡಿಗರಿಂದ. ಕೇವಲ ಅಂಕಿಗಳನ್ನು ಬಳಸಿ ಮಹಾಕಾವ್ಯ ರಚಿಸಿದ ಕೀರ್ತಿ ಕನ್ನಡಿಗರದ್ದು. ಮೊಬೈಲ್ ಬಳಕೆಯು ಚಟ ಮತ್ತು ರೋಗವಾಗುತ್ತಿದ್ದು, ಇದನ್ನು ಗುಣಪಡಿಸಲು ನಿಮ್ಹಾನ್ಸ್‌ನಲ್ಲಿ ಪ್ರತ್ಯೇಕ ವಿಭಾಗವನ್ನೇ ತೆರೆಯಲಾಗಿದೆ. ಮಕ್ಕಳ ಮೇಲೆ ಪೋಷಕರು ತಮ್ಮ ಆಶೋತ್ತರಗಳನ್ನು ಹೇರಬಾರದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಹಾಗೂ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಮಾತನಾಡಿ, ಮಕ್ಕಳೇ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ವೇದಿಕೆ ಇದಾಗಬೇಕೆಂದರು. ವಿಧಾನ ಪರಿಷತ್ ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ಕನ್ನಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಕೆ.ಬಸವರಾಜು, ಪರಿಷತ್ತಿನ ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ್, ಸಂಘಟನಾ ಕಾರ್ಯದರ್ಶಿ ಅರುಣ್, ಸಹ ಅಧ್ಯಕ್ಷರಾದ ನೂತನ ಕೈಕಾಡೆ, ರಕ್ಷಿತ ಕಾಶೀನಾಥ ರಾಮ ತೀರ್ಥ, ಸ್ವಾತಿ ನಾಯಕ್, ರಕ್ಷಿತಾ, ವೆಂಕಟೇಶ್ ಕುಲಕರ್ಣಿ ಉಪಸ್ಥಿತರಿದ್ದರು.

TAGGED:Horanadu Makkala Kannada Sahitya SammelanaKumari Sudeeti ambaleNew Delhiಕುಮಾರಿ ಸುದೀತಿ ಅಂಬಳೆನವದೆಹಲಿಹೊರನಾಡು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

LPG tanker overturns in Nelamangala Bengaluru
Bengaluru City

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
37 seconds ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
5 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
31 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
34 minutes ago
Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
55 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?