ಸಿನಿಮೀಯ ರೀತಿ ಡಿವೈಡರ್ ದಾಟಿ ನಾಲ್ಕು ಪಲ್ಟಿಯಾಗಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ

Public TV
1 Min Read
mandya accident

ಮಂಡ್ಯ: ಸಿನಿಮೀಯ ರೀತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ನಾಲ್ಕು ಪಲ್ಟಿ ಹೊಡೆದು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಟಿ.ಎಂ.ಹೊಸೂರು ಗೇಟ್ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ತ್ರಿಲೋಕ್(32) ಸ್ಥಳದಲ್ಲೇ ಮೃತಪಟ್ಟಿದ್ದು, ರೂಪೇಶ್(33) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಘುನಂದನ್ ಎಂಬುವರ ಕಾಲುಗಳು ಮುರಿದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿದ್ದ ಎಲ್ಲರೂ ಬೆಂಗಳೂರಿನ ಮಾಗಡಿ ರೋಡ್ ನಿವಾಸಿಗಳಾಗಿದ್ದು, ವೈಷ್ಣವಿ ಗ್ರೂಪ್ ನಲ್ಲಿ ಕೆಲಸ ಮಾಡ್ತಿದ್ರು. ನಿನ್ನೆ ರಾತ್ರಿ ಕೆಲಸದ ನಿಮಿತ್ತ ಇವ್ರೆಲ್ಲ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಹಾರಿ ನಾಲ್ಕು ಪಲ್ಟಿ ಹೊಡೆದು ಬಳಿಕ, ಮೈಸೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಶ್ರೀರಂಗಪಟ್ಟಣ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mnd accident 1

mnd accident 2

mnd accident 3

mnd accident 1

Share This Article
Leave a Comment

Leave a Reply

Your email address will not be published. Required fields are marked *