ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಭೀಕರ ಹತ್ಯೆ

Public TV
1 Min Read
MURDER copy

ಕಲಬುರಗಿ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಕುಕನೂರು (Kukanur) ಗ್ರಾಮದಲ್ಲಿ ನಡೆದಿದೆ.

ಕುಕನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಗುರುಬಸಮ್ಮ ಹುಚ್ಚಡ (65) ಕೊಲೆಯಾದ ಮಹಿಳೆ. ಗುರುವಾರ ಬೆಳಗ್ಗೆ ಜಮೀನಿಗೆ ತೆರಳಿದ್ದ ಗುರುಬಸಮ್ಮ ಸಂಜೆಯಾದರೂ ವಾಪಸ್ ಮನೆಗೆ ಬಂದಿರಲಿಲ್ಲ. ಸಂಜೆ ವೇಳೆ ಇವರ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಗುರುಬಸಮ್ಮ ಕೊಲೆಯಾಗಿ ಬಿದ್ದಿದ್ದರು. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುಷ್ಕರ್ಮಿಗಳು ಅವರ ಶವವನ್ನು ಜಮೀನಿನಲ್ಲೇ ಅರೆ ಬರೆಯಾಗಿ ಹೂತಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಮುಖಂಡರ ಮಧ್ಯೆ ಗಲಾಟೆ – ಕೈ ಮುಖಂಡನಿಗೆ ಚಾಕು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪಘಾತವಾಗಿ ಗಂಟೆ ಕಳೆದರೂ ಬಾರದ ಅಂಬುಲೆನ್ಸ್ – ನಡುರಸ್ತೆಯಲ್ಲೇ ನರಳಾಡಿ ಪ್ರಾಣ ಬಿಟ್ಟ ಯುವಕ

Share This Article