ವರ್ಗಾವಣೆ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ- ತೋಟಗಾರಿಕಾ ವಿವಿ ಸಿಬ್ಬಂದಿ ಆಕ್ರೋಶ

Public TV
1 Min Read
bgk managuli

ಬಾಗಲಕೋಟೆ: ತೋಟಗಾರಿಕಾ ವಿಶ್ವವಿದ್ಯಾಲಯ ಅಧೀನ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸಚಿವ ಎಂ.ಸಿ ಮನಗೂಳಿ ಮೂಗು ತೂರಿಸಿದ್ದಾರೆ. ವರ್ಗಾವಣೆಯ ಬಗ್ಗೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಚಿವರು ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ನನ್ನ ಗಮನಕ್ಕೆ ಬಾರದೆ ವರ್ಗಾವಣೆ ಮಾಡಬಾರದೆಂದು ಎಂದು ಮನಗೂಳಿ ಅವರು ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಸಚಿವರ ಪತ್ರದ ಪ್ರತಿಯನ್ನು ತೋಟಗಾರಿಕೆ ವಿವಿ ಪ್ರಭಾರಿ ಉಪಕುಲಪತಿಗಳಿಗೆ ಕಾರ್ಯದರ್ಶಿಗಳು ಕಳುಹಿಸಿದ್ದಾರೆ. ಈ ಮೂಲಕ ವರ್ಗಾವಣೆ ಆದೇಶಕ್ಕೆ ತಡೆ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಕಾರ್ಯದರ್ಶಿಗಳ ಆದೇಶದ ಪ್ರಕಾರ ವರ್ಗಾವಣೆ ವಿಚಾರವನ್ನು ವಿವಿ ಆಡಳಿತ ಮಂಡಳಿ ತಡೆಹಿಡಿದಿದ್ದಾರೆ.

BGK MANUGULI 1

ತೋಟಗಾರಿಕಾ ವಿವಿ ನಿಯಮಾವಳಿ ಪ್ರಕಾರ ಸಚಿವರು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಆದರೆ ಮನಗೂಳಿಯವರು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ತೋಟಗಾರಿಕಾ ವಿಶ್ವವಿದ್ಯಾಲಯಗಳ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಆರೋಪಿಸಿದೆ.

ಸಚಿವರು ಈ ಕಾರ್ಯದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಸಚಿವರ ವಿರುದ್ಧ ಪ್ರತಿಭಟನೆಗೆ ಇಳಿಯೋದಾಗಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ. ಕೆ.ಎಂ ಇಂದಿರೇಶ್ ಬಾಗಲಕೋಟೆ ತೋಟಗಾರಿಕೆ ವಿವಿ ಪ್ರಭಾರ ಉಪಕುಲಪತಿ ಜೂನ್ 6ರಂದು ಸಿಬ್ಬಂದಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಜೂನ್ 7ರಂದು ತಡೆ ನೀಡುವಂತೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಂದ ಆದೇಶ ಬಂದಿದೆ.

bgk horticulture university

ಜನರಲ್ ವರ್ಗಾವಣೆ, ಮುಚ್ಯುವಲ್ ವರ್ಗಾವಣೆ, ರಿಕ್ವೆಸ್ಟ್ ವರ್ಗಾವಣೆ ಅಡಿಯಲ್ಲಿ 45 ಸಿಬ್ಬಂದಿ ವರ್ಗಾವಣೆ ಆದೇಶ ಹೊರಡಿಸಲಾಗುತ್ತು. ಹಾಗೆಯೇ ವಿವಿಯ ಇಬ್ಬರು ಡೀನ್, ಒಬ್ಬರು ರೆಜಿಸ್ಟ್ರಾರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಆದೇಶಿಸಲಾಗಿತ್ತು. ಆದರೆ ಈ ವಿಚಾರದಲ್ಲಿ ಸಚಿವರು ಹಸ್ತಕ್ಷೇಪ ಮಾಡಿರುವುದು ಸರಿಯಲ್ಲ ಎಂದು ಸಿಬ್ಬಂದಿ ಕಿಡಿಕಾರುತ್ತಿದ್ದಾರೆ.

Share This Article