Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಳೆಯುವ ಹಣ್ಣುಗಳಿಗೆ ದಾಸ್ತಾನು ಕೇಂದ್ರ: ಬಜೆಟ್‍ನಲ್ಲಿ ತೋಟಗಾರಿಕೆ, ರೇಷ್ಮೆಗೆ ಸಿಕ್ಕಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೊಳೆಯುವ ಹಣ್ಣುಗಳಿಗೆ ದಾಸ್ತಾನು ಕೇಂದ್ರ: ಬಜೆಟ್‍ನಲ್ಲಿ ತೋಟಗಾರಿಕೆ, ರೇಷ್ಮೆಗೆ ಸಿಕ್ಕಿದ್ದು ಏನು?

Karnataka

ಕೊಳೆಯುವ ಹಣ್ಣುಗಳಿಗೆ ದಾಸ್ತಾನು ಕೇಂದ್ರ: ಬಜೆಟ್‍ನಲ್ಲಿ ತೋಟಗಾರಿಕೆ, ರೇಷ್ಮೆಗೆ ಸಿಕ್ಕಿದ್ದು ಏನು?

Public TV
Last updated: July 5, 2018 1:46 pm
Public TV
Share
2 Min Read
horticulture sericulture HDK
SHARE

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ದೋಸ್ತಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಕೃಷಿ ಮತ್ತು ತೋಟಗಾರಿಕೆಗೆ ಒಟ್ಟು 7,642 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.

ತೋಟಗಾರಿಕಾ ವಲಯದಲ್ಲಿ ಇಸ್ರೇಲ್ ಮಾದರಿ ನೀರಾವರಿ ಕ್ರಮಗಳನ್ನು ಅಳವಡಿಸಲು ಸಾಧ್ಯವಿರುತ್ತದೆ. ಈ ಹಿನ್ನೇಲೆಯಲ್ಲಿ ಕಾರವಾರ, ತುಮಕೂರು, ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಇಸ್ರರೇಲ್ ಮಾದರಿ ನೀರಾವರಿ ಒದಗಿಸಲು 150 ಕೋಟಿ ರೂ.ಗಳನ್ನು ನಿಗದಿಪಡಿಸಲಾಗುವುದು.

ರಾಜ್ಯದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಹೆದ್ದಾರಿ, ರಸ್ತೆಗಳಲ್ಲಿ ಗುರುತಿಸಲಾಗುವ 10 ಸ್ಥಳಗಳಲ್ಲಿ ಎಪಿಎಂಸಿ ವತಿಯಿಂದ ಅಥವಾ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮಾರುಕಟ್ಟೆ ಶುಲ್ಕ ಆದಾಯ ಹಂಚಿಕೆ ಮಾದರಿಯಲ್ಲಿ ಅಗತ್ಯ ಮೂಲ ಸೌಲಭ್ಯಗಳೊಂದಿಗೆ ಸುಸಜ್ಜಿತವಾದ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ರೈತರು ತಾವು ಬೆಳೆದ ಸಿರಿಧಾನ್ಯಗಳು, ಸಾವಯವ ಉತ್ಪನ್ನಗಳು ಅಧಿಸೂಚಿತ ಮಾರಾಟ ಉತ್ಪನ್ನಗಳು (ಪ್ರಮುಖವಾಗಿ ಹಣ್ಣು ಮತ್ತು ತರಕಾರಿಗಳು) ನೇರವಾಗಿ ಗ್ರಾಹಕರಿಗೆ, ಮಾರಾಟಗಾರರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು.

horticulture 1

ಟೊಮಾಟೋ ಮತ್ತು ಮಾವಿನ ಹಣ್ಣಿನಂತಹ ಬೇಗನೆ ಕೊಳೆಯುವ ತೋಟಗಾರಿಕೆ ಬೆಳೆಗಳ ಮತ್ತು ಅವುಗಳ ಉಪ ಉತ್ಪನ್ನಗಳ ಸಂಸ್ಕರಣೆ ಮತ್ತು ದಾಸ್ತಾನು ಮಾಡುವ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ರಾಜ್ಯದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ಇಂಡೋ-ಇಸ್ರೇಲ್ ಸಹಭಾಗಿತ್ವದಲ್ಲಿ ಆರು ಉತ್ಕøಷ್ಟ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳನ್ನು ಕೇಂದ್ರೀಕರಿಸಿ ಹೆಚ್ಚಿನ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಮಳೆ ಪ್ರಮಾಣ ತೀವ್ರತರವಾಗಿ ಕುಂಠಿತವಾಗಿದ್ದು, ತೆಂಗಿನ ಮರಗಳು ಒಣಗಿ ಹೋಗುತ್ತಿದ್ದು, ಅನುತ್ಪಾದಕವಾಗಿವೆ. ಅದರಲ್ಲೂ 2017 ನೇ ಸಾಲಿನ ಬೇಸಿಗೆಯಲ್ಲಿ ಬರಗಾಲದಿಂದ 44 ಲಕ್ಷಕ್ಕೂ ಹೆಚ್ಚು ತೆಂಗಿನ ಮರಗಳು ಸಂಪೂರ್ಣ ಒಣಗಿ ಅನುತ್ಪಾದಕವಾಗಿವೆ. ಈ ಕಾರಣದಿಂದಾಗಿ ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಒಂದು ಯೋಜನೆಯನ್ನು ರೂಪಿಸಲಾಗುತ್ತಿದೆ. ಈ ಉದ್ದೇಶಕ್ಕೆ 190 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಸಂಪೂರ್ಣವಾಗಿ ಒಣಗಿರುವ ತೆಂಗಿನ ತೋಟಗಳಲ್ಲಿ ಪರ್ಯಾಯ ಬೆಳೆಗಳಾದ ಮಾವು, ಗೋಡಂಬಿ, ಹುಣಸೆ, ತೀತಾಫಲ, ನೇರಳೆ ಇತ್ಯಾದಿ ಬೆಳೆಗಳನ್ನು ಇಲಾಖೆಯ ವಿವಿಧ ಯೋಜನೆಯಡಿ ಬೆಳೆಯಲು ಪ್ರೋತ್ಸಾಹಿಸಲಾಗುವುದು.

sericulture

ರೇಷ್ಮೆಗೆ ಸಿಕ್ಕಿದ್ದು ಏನು?
ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ವ್ಯವಸ್ಥೆ ಕಲ್ಪಿಸಲು ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಜಿಲ್ಲೆಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ಸ್ಥಾಪಿಸಲಾಗುವುದು. ಇದಕ್ಕಾಗಿ 2018-19ನೇ ಸಾಲಿಗೆ ಒಂದು ಕೋಟಿ ರೂ. ಮೀಸಲು.

ಕರ್ನಾಟಕ ರೇಷ್ಮೆ ನಾಡು. ವಿಶ್ವಬ್ಯಾಂಕ್ ನೆರವಿನೊಂದಿಗೆ 70ರ ದಶಕದಲ್ಲಿ ರೇಷ್ಮೆ ಕೃಷಿಗೆ ಪೂರಕವಾಗಲೆಂದು ಬೆಂಗಳೂರು ಸಮೀಪದ ತಲಘಟ್ಟಪುರದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು. ಈ ಸಂಸ್ಥೆಯ ಪೂರ್ಣ ಪ್ರಮಾಣದ ಅನುಕೂಲ ಪಡೆಯಲು ತಜ್ಞರಿಂದ ಸಂಪೂರ್ಣ ಅಧ್ಯಯನ ನಡೆಸಿ ವರದಿ ಪಡೆದು ಈ ಸಂಸ್ಥೆಯ ಪುನಶ್ಚೇತನ ಮಾಡುವ ಉದ್ದೇಶಕ್ಕಾಗಿ 5 ಕೋಟಿ ರೂ.ಗಳನ್ನು ನೀಡಲಾಗುವುದು.

ಸಾಂಪ್ರದಾಯಿಕ ರೇಷ್ಮೆ ವಸ್ತ್ರ ಉತ್ಪಾದನೆಯ ಜೊತೆಗೆ ರೇಷ್ಮೆ ಉಪ ಉತ್ನನ್ನಗಳಾದ ಉಗುರು ಪಾಲಿಷ್, ಲಿಪ್ ಸ್ಟಿಕ್ ಹಾಗೂ ರೇಷ್ಮೆ ಬಣ್ಣಗಳಿಗೆ ವಿಶ್ವವ್ಯಾಪಿ ಬೇಡಿಕೆಯಿದೆ. ಈ ಮಾರುಕಟ್ಟೆಯ ಅವಕಾಶವನ್ನು ಬಳಸಿಕೊಳ್ಳಲು ಅನುಕೂಲವಂತೆ ಕಾರ್ಯತಂತ್ರ ರೂಪಿಸಲು ಎರಡು ಕೋಟಿ ರೂ. ಗಳನ್ನು ನೀಡಲಾಗುವುದು.

ಚನ್ನಪಟ್ಟಣದಲ್ಲಿರುವ ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ (ಕೆ.ಎಸ್.ಐ.ಸಿ) ಘಟಕದ ಪುನಶ್ಚೇತನಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗುವುದು.

TAGGED:budgetchief ministerhd kumaraswamyHorticulturePublic TVSilkಎಚ್ ಡಿ ಕುಮಾರಸ್ವಾಮಿತೋಟಗಾರಿಕೆಪಬ್ಲಿಕ್ ಟಿವಿಬಜೆಟ್ಮುಖ್ಯಮಂತ್ರಿರೇಷ್ಮೆ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

Sanjay Raut
Latest

ಸಾವಿರಾರು ನಮ್ಮ ಮತದಾರರ ಹೆಸರು ಕಾಣೆಯಾಗಿದೆ: ಸಂಜಯ್‌ ರಾವತ್‌

Public TV
By Public TV
47 seconds ago
women suicide bengaluru
Bengaluru City

ಬೆಂಗಳೂರು| ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ

Public TV
By Public TV
9 minutes ago
Devendra Fadnavis Eknath Shinde
Latest

ಮುಂಬೈ ಪಾಲಿಕೆ ಚುನಾವಣೆ – ಮಹಾಯುತಿಗೆ ಭಾರೀ ಮುನ್ನಡೆ, ಉದ್ದವ್‌ ಕೋಟೆ ಛಿದ್ರ?

Public TV
By Public TV
36 minutes ago
modified silencer leads to rs 1 lakh fine on car in bengaluru
Bengaluru City

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ಭೂಪನಿಗೆ 1.11 ಲಕ್ಷ ರೂ. ದಂಡದ ಬರೆ!

Public TV
By Public TV
46 minutes ago
Young women arrested in Bengaluru for stealing while dressing as boys
Bengaluru City

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ – ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌

Public TV
By Public TV
59 minutes ago
Harihara Temple
Crime

ಹರಿಹರ | ಆಂಜನೇಯ ದೇವಾಲಯದ ಚಿನ್ನಾಭರಣ ಕಳ್ಳತನ – ಅಪ್ಪ, ಮಗ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?