Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ತಂದೆಯ ವಿರುದ್ಧ ಸ್ಪರ್ಧೆ, ಇಂದು ಮಗನಿಗೆ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಅಂದು ತಂದೆಯ ವಿರುದ್ಧ ಸ್ಪರ್ಧೆ, ಇಂದು ಮಗನಿಗೆ ಬೆಂಬಲ

Bengaluru Rural

ಅಂದು ತಂದೆಯ ವಿರುದ್ಧ ಸ್ಪರ್ಧೆ, ಇಂದು ಮಗನಿಗೆ ಬೆಂಬಲ

Public TV
Last updated: November 13, 2019 5:24 pm
Public TV
Share
3 Min Read
Bachegowda HDK Sharath
SHARE

– ಶರತ್ ಬಚ್ಚೇಗೌಡ ಬೆಂಬಲಿಸಲು ಎಚ್‍ಡಿಕೆ ನಿರ್ಧಾರ
– ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಗುರುವಾರ ನಾಮಪತ್ರ ಸಲ್ಲಿಕೆ

ಬೆಂಗಳೂರು: ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್ ತೀರ್ಮಾನಿಸಿದ್ದು ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಅವರನ್ನು ಬೆಂಬಲಿಸುವುದಾಗಿ ಘೋಷಿಸಿದೆ.

ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ವಿರುದ್ಧ ಅಭ್ಯರ್ಥಿಯನ್ನು ಹಾಕದೇ ನಾವು ಬೆಂಬಲಿಸುತ್ತೇವೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

HDK 1

ಮಾಧ್ಯಮಗಳ ಜೊತೆ ಮಾತನಾಡಿದ ಅವರು, 15 ಕ್ಷೇತ್ರಗಳ ಪೈಕಿ 14ರಲ್ಲಿ ಮಾತ್ರ ನಾವು ಸ್ಪರ್ಧೆ ಮಾಡುತ್ತೇವೆ. ಹೊಸ ಕೋಟೆಯಲ್ಲಿ ಶರತ್ ಬಚ್ಚೇಗೌಡ ಅವರಿಗೆ ನಾವು ಬೆಂಬಲ ನೀಡುತ್ತೇವೆ. ಪಕ್ಷೇತರ ಅಭ್ಯರ್ಥಿಗೆ ನಮ್ಮ ಅವಶ್ಯಕತೆ ಇದ್ದರೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು. ಈ ವೇಳೆ ಜೆಡಿಎಸ್‍ಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎನ್ನುವ ಪ್ರಶ್ನೆಗೆ ಅವರು ನಮ್ಮ ಮನೆಯವರೇ ಮುಂದೆ ಏನ್ ಆಗುತ್ತದೋ ನೋಡೋಣ ಎಂದು ಉತ್ತರಿಸಿದರು.

ಕಾಂಗ್ರೆಸ್, ಬಿಜೆಪಿಯ ಜೊತೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುವುದರಿಂದ ಹೊಸಕೋಟೆಯಲ್ಲಿ ಚುನಾವಣಾ ಕಾವು ನಿಧಾನವಾಗಿ ಏರತೊಡಗಿದೆ.

sharath MTB

ಸುಪ್ರೀಂ ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ್ದ ಎಂಟಿಬಿ ನಾಗರಾಜ್ ಹೊಸಕೋಟೆಯಲ್ಲಿ ನನ್ನ ವಿರುದ್ಧ ಶರತ್ ಸ್ಪರ್ಧಿಸಲಿ ನೋಡೋಣ ಎಂದು ಸವಾಲು ಎಸೆದಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಬೆಂಬಲಿಗರ ಜೊತೆ ಸಭೆ ನಡೆಸಿದ ಶರತ್ ಗುರುವಾರ ನಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಶರತ್ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗುತ್ತಿದ್ದಂತೆ ಹಿರಿಯ ನಾಯಕ ಅಶೋಕ್ ಅವರು ಪಕ್ಷದ ವಿರುದ್ಧ ಕೆಲಸ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅನರ್ಹರಿಗೆ ಮೋಸವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಶರತ್ ಇದನ್ನೆಲ್ಲ ಅರ್ಥ ಮಾಡಿಕೊಳ್ಳುತ್ತಾರೆ. ನಾನೂ ಸಹ ಈ ಕುರಿತು ಅವರ ಬಳಿ ಮಾತನಾಡುತ್ತೇನೆ. ಅಭ್ಯರ್ಥಿ ಘೋಷಣೆಗೂ ಮೊದಲು ಇಂತಹ ಗೊಂದಲಗಳು ಸಹಜ. ಆದರೆ ಪಕ್ಷ ಒಂದು ಬಾರಿ ಅಭ್ಯರ್ಥಿಗಳನ್ನು ಘೋಷಿಸಿದರೆ ಯಾರೂ ಅದರ ವಿರುದ್ಧ ಮಾತನಾಡಬಾರದು. ಈ ರೀತಿಯ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದರು.

SIDDARAMAIAH MTB NAGARAJ b

ಎಂಟಿಬಿ ರಾಜೀನಾಮೆ ನೀಡುವ ಮೊದಲು ಅವರ ಮನೆಗೆ ಡಿಕೆ ಶಿವಕುಮಾರ್ ತೆರಳಿ ಮಾತುಕತೆ ನಡೆಸಿದ್ದರು. ಅಷ್ಟೇ ಅಲ್ಲದೇ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯನವರು ತೆರಳಿ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದರು. ಜೆಡಿಎಸ್, ಕೈ ನಾಯಕರ ಮಾತುಕತೆಯ ಹೊರತಾಗಿಯೂ ಎಂಟಿಬಿ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದರು.

ಈ ಹಿಂದೆ ಕುಮಾರಸ್ವಾಮಿ ಮುಂದೆಯೇ ಕೈ ಟ್ರಬಲ್ ಶೂಟರ್ ಶಿವಕುಮಾರ್ ಬೆಂಗಳೂರಿನ ಐವರು ಶಾಸಕರನ್ನು ನಾನೇ ಸೋಲಿಸುತ್ತೇನೆ ಎಂದು ಶಪಥ ಮಾಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹೊಸಕೋಟೆಯ ಎಂಟಿಬಿ ನಾಗರಾಜ್, ಕೆಆರ್ ಪುರಂ ಭೈರತಿ ಬಸವರಾಜು, ಯಶವಂತಪುರದ ಎಸ್.ಟಿ.ಸೋಮಶೇಖರ್, ಮಹಾಲಕ್ಷ್ಮಿ ಲೇಔಟಿನ ಗೋಪಾಲಯ್ಯ ಹಾಗೂ ರಾಜರಾಜೇಶ್ವರಿ ನಗರದ ಮುನಿರತ್ನ ಅವರನ್ನು ಸೋಲಿಸುತ್ತೇನೆ ಡಿಕೆಶಿ ಹೇಳಿದ್ದರು.

Sharath MTB DKSHi

2014ರಲ್ಲಿ ಏನಾಗಿತ್ತು?
ದೇವೇಗೌಡರ ಬಗ್ಗೆ ಹರಿಹಾಯ್ದ ಪರಿಣಾಮ ಕೊನೆ ಕ್ಷಣದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಚ್‍ಡಿ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು. ಹೀಗಾಗಿ ಓಕ್ಕಲಿಗರ ಮತ ವಿಭಜನೆಯಿಂದಾಗಿ ಕೇವಲ 9,520 ಮತಗಳ ಅಂತರದಿಂದ ಬಚ್ಚೇಗೌಡ ಅವರು ಸೋತಿದ್ದರು.

ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಅವರು ಗೆಲ್ಲಲ್ಲಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಚ್ಚೇಗೌಡರು ದೇವೇಗೌಡ ಮತ್ತು ಅವರ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದರ ಪರಿಣಾಮ ಕೊನೆಯ ಕ್ಷಣದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಎಚ್‍ಡಿಕೆ ಅಭ್ಯರ್ಥಿಯಾದ ಕೂಡಲೇ ಚುನಾವಣೆಯ ಸಂಪೂರ್ಣ ಚಿತ್ರಣವೇ ಬದಲಾಯಿತು. ಒಕ್ಕಲಿಗರ ಮತ ವಿಭಜನೆಯಾದ ಪರಿಣಮ ಬಚ್ಚೇಗೌಡ ಭಾರೀ ಸ್ಪರ್ಧೆ ನೀಡಿದರೂ ಕೊನೆ ಕ್ಷಣದಲ್ಲಿ ಮೋಯ್ಲಿ ಮುಂದೆ 9,520 ಮತಗಳ ಅಂತರದಿಂದ ಸೋಲನ್ನಪ್ಪಿದರು. ಈ ಕಾರಣಕ್ಕೆ ತಮ್ಮ ಗೆಲುವಿನ ಹಾದಿ ಕಷ್ಟ ಆಗುತ್ತದೆ ಎಂದುಕೊಂಡಿರುವ ಬಚ್ಚೇಗೌಡ ಈ ಬಾರಿಯ ಚುನಾವಣೆಯಲ್ಲಿ ದೇವೇಗೌಡ ಅವರು ವಿರುದ್ಧ ತುಟಿ ಬಿಚ್ಚರಲಿಲ್ಲ.

11 veerappamoily kumaraswamy bachegowda1

ಕಳೆದ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ಎಂ.ವೀರಪ್ಪ ಮೋಯ್ಲಿ 4,24,800 ವೋಟ್ ಗಳಿಸಿದ್ದರೆ ಬಿ.ಎನ್ ಬಚ್ಚೇಗೌಡ ಅವರಿಗೆ 4,15,280 ಮತಗಳು ಬಿದ್ದಿತ್ತು. ಎಚ್.ಡಿ ಕುಮಾರಸ್ವಾಮಿ ಅವರು 3,46,339 ಲಕ್ಷ ಮತ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಚ್ಚೇಗೌಡ 7,45,912 ಮತಗಳನ್ನು ಪಡೆದಿದ್ದರೆ ಮೊಯ್ಲಿ 5,63,802 ಮಗಳನ್ನು ಪಡೆದು ಸೋತಿದ್ದರು.

TAGGED:by electionhd kumaraswamyhoskotejdsPublic TVSharath Bachegowdaಉಪಚುನಾವಣೆಎಂಟಿಬಿ ನಾಗರಾಜ್ಕುಮಾರಸ್ವಾಮಿಬಚ್ಚೇಗೌಡಶರತ್ ಬಚ್ಚೇಗೌಡಹೊಸಕೋಟೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
45 seconds ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
9 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
32 minutes ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
42 minutes ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
1 hour ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?