Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!

Karnataka

ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!

Public TV
Last updated: May 16, 2018 9:55 pm
Public TV
Share
2 Min Read
anand singh siddaramaiah parameshwar
SHARE

ವಿಶೇಷ ವರದಿ
ಬಳ್ಳಾರಿ/ಬೆಂಗಳೂರು: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಆಯ್ಕೆಯಾಗಿರುವ ಶಾಸಕ ಆನಂದ್ ಸಿಂಗ್ ಎಲ್ಲಿ ಹೋದ್ರು ಎಂಬ ಪ್ರಶ್ನೆ ಈಗ ಸದ್ಯಕ್ಕೆ ರಾಜ್ಯ ಕಾಂಗ್ರೆಸಿಗರನ್ನು ಕಾಡುತ್ತಿದೆ. ಒಂದು ಕಡೆ ಕಾಂಗ್ರೆಸ್‍ಗೆ ಕೈ ಕೊಡ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಡಿದ್ದರೂ, ಆನಂದ್ ಸಿಂಗ್ ದಿಢೀರ್ ಮರೆಯಾಗಲು ಕಾರಣವೇನು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಬಳ್ಳಾರಿಯಿಂದ ಬರುತ್ತಿದ್ದಾರೆ ಎನ್ನಲಾದ ಆನಂದ್ ಸಿಂಗ್ ಅವರನ್ನು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರೆದುಕೊಂಡು ಬರಲು ಹೋಗಿದ್ದ ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಹಾಗೂ ನಾಗೇಂದ್ರ ಬರಿಗೈಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ವಾಪಸ್ ಆಗಿದ್ದಾರೆ. ಬೆಳಗ್ಗೆಯಿಂದಲೇ ಆನಂದ್ ಸಿಂಗ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಸಂಜೆ ವೇಳೆಗೆ ಆನಂದ್ ಸಿಂಗ್ ಬೆಂಗಳೂರಿಗೆ ಬರುತ್ತಾರೆ ಎಂದು ಕೈ ನಾಯಕರು ಹೇಳಿದ್ದರೂ ಇಂದು ರಾತ್ರಿ 7.00 ಗಂಟೆಯವರೆಗೂ ಅವರು ಎಲ್ಲೂ ಕಾಣಿಸಿಕೊಂಡಿಲ್ಲ.

ಪಬ್ಲಿಕ್ ಟಿವಿಗೆ ಸಿಕ್ಕ ಖಚಿತ ಮಾಹಿತಿ ಪ್ರಕಾರ ಇಂದು ಬೆಳಗ್ಗೆ ಆನಂದ್ ಸಿಂಗ್ ಬಳ್ಳಾರಿಯಲ್ಲೇ ಇದ್ದರು. ಸೂರ್ಯನ ಬಿಸಿಲು ನೆತ್ತಿಗೇರುತ್ತಿದ್ದಂತೆಯೇ ಆನಂದ್ ಸಿಂಗ್ ಹಾಗೂ ನಾಗೇಂದ್ರ ಬಳ್ಳಾರಿಯಲ್ಲೇ ಪರಸ್ಪರ ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಇಬ್ಬರೂ ಪರಸ್ಪರ ಮಾತನಾಡಿಕೊಂಡೇ ಬೆಂಗಳೂರಿಗೆ ಹೊರಟಿದ್ದಾರೆ. ಸದ್ಯ ಬೆಂಗಳೂರಿನಲ್ಲೇ ಆನಂದ್ ಸಿಂಗ್ ಬೀಡುಬಿಟ್ಟಿದ್ದಾರೆ ಎಂಬ ಖಚಿತ ಮಾಹಿತಿಯೂ ಇದೆ. ಆದರೆ ಆನಂದ್ ಸಿಂಗ್ ಇನ್ನೂ ಯಾಕೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿಲ್ಲ ಎಂಬುದನ್ನು ಕೆದಕುತ್ತಾ ಹೋದಾಗ ರೋಚಕ ಮಾಹಿತಿ ಸಿಕ್ಕಿದೆ.

anand singh dk shivakumar

ಅಧಿಕಾರಕ್ಕಾಗಿ ಸರ್ಕಸ್!: ಸದ್ಯದ ಮಾಹಿತಿ ಪ್ರಕಾರ ಆನಂದ್ ಸಿಂಗ್ ಬಿಜೆಪಿ ಬೆಂಬಲಿಸುವ ಸಾಧ್ಯತೆ ತೀರಾ ಕಡಿಮೆ. ಆದರೆ ಆನಂದ್ ಸಿಂಗ್‍ಗೆ ಈಗ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ಈ ಬೇಡಿಕೆಗೆ ನೀರೆರೆಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಬಳ್ಳಾರಿಯಲ್ಲಿರುವ ಪಕ್ಷದ ನಾಯಕರು ಹಾಗೂ ಶಾಸಕರಾದ ಪರಮೇಶ್ವರ್ ನಾಯ್ಕ್ ಹಾಗೂ ತುಕಾರಾಂ ಮೇಲೆ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಪ್ರೀತಿಯಿದೆ. ಹೀಗಾಗಿ ಕೈ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆನಂದ್ ಸಿಂಗ್‍ಗೆ ಯಾವುದಾದರೂ ಹುದ್ದೆ ಸಿಗುವ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗಿದೆ. ಬಳ್ಳಾರಿ ಗ್ರಾಮಾಂತರ ಶಾಸಕರಾಗಿರುವ ನಾಗೇಂದ್ರ ಮೇಲೆ ಸಿಎಂಗೆ ಪ್ರೀತಿಯಿದೆ. ಎಸ್ಟಿ ಸಮುದಾಯದ ನಾಯಕರೊಬ್ಬರನ್ನು ರಾಮುಲು ವಿರುದ್ಧ ಬಳ್ಳಾರಿಯಲ್ಲಿ ಬೆಳೆಸಲೇಬೇಕಾಗಿದೆ. ಇದಕ್ಕಾಗಿ ಕಾಂಗ್ರೆಸ್ ಮುಖಂಡರಲ್ಲಿ ನಾಗೇಂದ್ರ ಮೇಲೆ ಒಲವಿದೆ.

ಇದಲ್ಲದೇ 2008ರಲ್ಲಿ ರೆಡ್ಡಿ ಬ್ರದರ್ಸ್ ಬಳ್ಳಾರಿಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಬೆಳೆಸಿದ್ದರೂ ಅಂದಿನ ಚುನಾವಣೆಯಲ್ಲಿ ರೆಡ್ಡಿಗಳನ್ನು ಎದುರಿಸಿ ತುಕಾರಾಂ ಗೆದ್ದು ಬಂದಿದ್ದರು. ಆದರೆ ತುಕಾರಾಂಗೆ ಸಚಿವ ಸ್ಥಾನ ಸೇರಿದಂತೆ ಯಾವುದೇ ಪಟ್ಟ ಸಿಕ್ಕುವುದು ಆನಂದ್ ಸಿಂಗ್ ಗೆ ಇಷ್ಟವಿಲ್ಲ. ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಬೆಂಗಳೂರಿಗೆ ಬಂದಿದ್ದರೂ ಯಾರ ಮುಂದೆಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ ಎನ್ನಲಾಗಿದೆ. ಸದಾ ಕಾಲ ಮಾಧ್ಯಮಗಳು ಹಾಗೂ ಜನರ ಸಂಪರ್ಕಕ್ಕೆ ಸಿಗುತ್ತಿದ್ದ ಸೋದರಳಿಯಂದಿರಾದ ಧರ್ಮೇಂದ್ರ ಸಿಂಗ್ ಹಾಗೂ ಸಂದೀಪ್ ಸಿಂಗ್ ಕೂಡಾ ಇಂದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆಂಬ ಮಾಹಿತಿ ಮೇರೆಗೆ ತೆರಳಿದ್ದ ಜಮೀರ್ ಮತ್ತು ನಾಗೇಂದ್ರ ಏರ್‍ಪೋರ್ಟ್ ಗೂ ತಲುಪುವ ಮುನ್ನವೇ ಅರ್ಧ ದಾರಿಯಿಂದಲೇ ವಾಪಸ್ ಆಗಿದ್ದಾರೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಅಪ್ಡೇಟ್.

anand singh

 

 

TAGGED:2018 karnataka assembly election2018 ಕರ್ನಾಟಕ ವಿಧಾನಸಭೆ ಚುನಾವಣೆAnand SinghbjpCoalation GovernmentcongressjdsNagendraPublic TVTukaramಆನಂದ್ ಸಿಂಗ್ಜೆಡಿಎಸ್-ಕಾಂಗ್ರೆಸ್ತುಕಾರಾಂನಾಗೇಂದ್ರಪಬ್ಲಿಕ್ ಟಿವಿಬಿಜೆಪಿಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Saudi Aramco Ras Tanura
Latest

ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
17 minutes ago
Haveri Ranebennuru hall ticket
Districts

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

Public TV
By Public TV
20 minutes ago
F15 Jet 2
Latest

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Public TV
By Public TV
42 minutes ago
Umrah yathra pilgrims
Latest

ಇರಾನ್‌-ಇಸ್ರೇಲ್‌ ಯುದ್ಧ; ಉತ್ತರ ಕನ್ನಡ ಜಿಲ್ಲೆಯ 150 ಕ್ಕೂ ಹೆಚ್ಚು ಯಾತ್ರಿಕರ ಉಮ್ರಾ ಯಾತ್ರೆ ರದ್ದು

Public TV
By Public TV
1 hour ago
Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
2 hours ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?