ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿದ್ದು, ಇದೀಗ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾರಣ ಅನೇಕ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ ಎದುರಾಗಿದೆ.
ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಅನೇಕ ಡೆಂಗ್ಯೂ ರೋಗಿಗಳು ಹಾಸಿಗೆ ಪಡೆಯಲು ವಿಫಲರಾಗಿದ್ದಾರೆ ಮತ್ತು ಇರುವವರಿಗೆ ಇತರ ರೋಗಿಗಳೊಂದಿಗೆ ಬೆಡ್ ಹಂಚಿಕೊಳ್ಳಲು ಒತ್ತಾಯಿಸಲಾಗುತ್ತಿದೆ. ಹಾಸಿಗೆ ಸಿಗುವ ಗ್ಯಾರಂಟಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಕ್ತಸ್ರಾವ ಅಥವಾ ಅವರ ಪ್ಲೇಟ್ಲೆಟ್ಗಳು 30,000ಕ್ಕೆ ಕುಸಿದ ರೋಗಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ, ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ದೆಹಲಿಯ ಸ್ವಾಮಿ ದಯಾನಂದ ಆಸ್ಪತ್ರೆಯಲ್ಲಿ ದಾಖಲಾದ 220 ರೋಗಿಗಳಲ್ಲಿ 54 ಮಂದಿ ಡೆಂಗ್ಯೂ ರೋಗಿಗಳಾಗಿದ್ದು, ಅವರಿಗೆ ಸ್ಥಳಾವಕಾಶ ಕಲ್ಪಿಸಲು ಆಸ್ಪತ್ರೆ ಆಡಳಿತ ತುರ್ತು ಶಸ್ತ್ರಚಿಕಿತ್ಸೆಗಳನ್ನು ನಿಲ್ಲಿಸಿದೆ. ಇದನ್ನೂ ಓದಿ: ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್
ದೆಹಲಿಯಲ್ಲಿ ಈ ವರ್ಷ 1,000 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಕಳೆದ ವಾರ 280ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ ಸೀಸನ್ನಲ್ಲಿ ದೆಹಲಿಯಲ್ಲಿ ದಾಖಲಾದ ಒಟ್ಟು ಡೆಂಗ್ಯೂ ಪ್ರಕರಣಗಳ ಪೈಕಿ ಈ ತಿಂಗಳ ಮೊದಲ 23 ದಿನಗಳಲ್ಲಿ 665 ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಭಾರತಕ್ಕೂ ಮೊದಲ ಕೋವಿಡ್ ಗುಳಿಗೆ ಭಾಗ್ಯ
ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಕ್ಟೋಬರ್ 18 ರಂದು ಡೆಂಗ್ಯೂಗೆ ನಗರದಲ್ಲಿ ಮೊದಲನೇ ಸಾವಿನ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!
ಸದ್ಯ ಡೆಂಗ್ಯೂ ಪ್ರಕರಣಗಳು ವಿಪರೀತವಾಗಿರುವುದರಿಂದ ನೋಯ್ಡಾದ ಕೈಲಾಶ್ ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್ ಅನ್ನು ತಾತ್ಕಾಲಿಕವಾಗಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆಗೊಳಿಸಲಾಗಿದೆ.