ಬೆಂಗಳೂರು: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡಿಯಲ್ಲಿ ನಡೆದಿದೆ.
ಶಿಲ್ಪಾ(27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ. ಮೃತ ಶಿಲ್ಪಾ ಹೊಸಕೋಟೆಯ ಹಿಂಡಿಗನಾಳ ಗ್ರಾಮದ ರಾಮಪ್ಪ ಹಾಗು ದೇವಮ್ಮ ದಂಪತಿ ಮಗಳು. ಕಳೆದ ಒಂದು ವರ್ಷದ ಹಿಂದೆ ನಾಗೇಶ್ ಎಂಬವರ ಜೊತೆ ಶಿಲ್ಪಾಳ ವಿವಾಹವಾಗಿತ್ತು.
ಗುರುವಾರ ಹೂಡಿಯಲ್ಲಿನ ಪತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ರೂಮ್ನಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಮಗಳ ಸಾವಿಗೆ ಪೋಷಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ಪ್ರಕರಣ ಸಂಬಂಧ ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ ಈ ಬಗ್ಗೆ ದೂರನ್ನು ದಾಖಲಿಸಿಕೊಂಡಿದ್ದಾರೆ. ಮದುವೆಯಾದ ಎರಡ್ಮೂರು ಮೂರು ತಿಂಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಪತಿಯ ಮನೆಯವರು ನಂತರದ ದಿನಗಳಲ್ಲಿ ಪದೇ ಪದೇ ಜಗಳ ಮಾಡುತ್ತಿದ್ದರು.
ಆಗ ಎರಡು ಕುಟುಂಬದ ಹಿರಿಯರನ್ನು ಕರೆಸಿ ಬುದ್ಧಿವಾದ ಹೇಳಿಸಿದರೂ ಸರಿ ಹೋಗದ ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡಿ ನೇಣು ಹಾಕಿ ಸಾಯಿಸಿದ್ದಾರೆ ಎಂದು ಶಿಲ್ಪಾಳ ಪೋಷಕರು ಆರೋಪಿಸಿದ್ದಾರೆ. ಅಲ್ಲದೆ ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.