ಮಂಡ್ಯ: ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಗೃಹಿಣಿ ವಿಷದ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದು ಗಂಡನ ಮನೆಯವರು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದ ಹರ್ಷಿತ(22) ಮೃತ ಗೃಹಿಣಿ. ಕಳೆದ ಮೂರು ವರ್ಷಗಳ ಹಿಂದೆ ವಳಗೆರೆಮೆಣಸ ಗ್ರಾಮದ ಲೋಕೇಶ್ ಜೊತೆ ಹರ್ಷಿತ ಮದುವೆಯಾಗಿತ್ತು. ಇಬ್ಬರ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ ಒಂದೂವರೆ ವರ್ಷದ ಹೆಣ್ಣು ಮಗು ಕೂಡ ಇತ್ತು.
ಹರ್ಷಿತ ವಿಷದ ಕಾಳಿನ ಮಾತ್ರೆ ನುಂಗಿದ್ದಾಳೆ ಎಂದು ಪತಿ ಲೋಕೇಶ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿಕ ಮೃತಪಟ್ಟಿದ್ದಳು. ಹರ್ಷಿತ ಸಾವಿನ ನಂತರ ಪತಿ ಲೋಕೇಶ್ ನಾಪತ್ತೆಯಾಗಿದ್ದು, ಆಕೆಯ ಸಾವಿಗೆ ಗಂಡನ ಮನೆಯವರು ಕಾರಣ. ಇದೊಂದು ವ್ಯವಸ್ಥಿತ ಕೊಲೆ ಎಂದು ಮೃತಳ ಪೋಷಕರು ಆರೋಪ ಮಾಡುತ್ತಿದ್ದಾರೆ.
ಸದ್ಯ ಈ ಬಗ್ಗೆ ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv