– ಉಗ್ರನ ಬೇಟೆಯಾಡುವ ಮುನ್ನ ಬೀದಿ ನಾಯಿಗಳ ಬಾಯಿಮುಚ್ಚಿಸಿದ್ದು ಏಕೆ?
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ಶ್ರೀನಗರದಲ್ಲಿ ಶನಿವಾರ ಪಾಕ್ ಮೂಲದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿಯನ್ನು (Usman Bhai) ಯೋಧರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಶ್ರೀನಗರ ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಆಗಿದೆ.
ಉಸ್ಮಾನ್ ಹತ್ಯೆಯಲ್ಲಿ ಕುರುಕುಲು ತಿಂಡಿಯಾದ ‘ಬಿಸ್ಕೆಟ್’ ಮಹತ್ವದ ಪಾತ್ರ ವಹಿಸಿದೆ. ಆತ ವಾಸವಿದ್ದ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಬೀದಿ ನಾಯಿಗಳು ಇದ್ದು, ಅವುಗಳ ಬೊಗಳುವಿಕೆಯಿಂದ ಉಗ್ರ ಎಚ್ಚೆತ್ತುಕೊಂಡು ಪರಾರಿಯಾಗುವ ಸಾಧ್ಯತೆಯಿತ್ತು. ಹೀಗಾಗಿ ಯೋಧರು ʼಬಿಸ್ಕೆಟ್ʼ ನೀಡಿ ಬೊಗಳುವ ನಾಯಿಗಳ ಬಾಯಿ ಮುಚ್ಚಿಸಿ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಗಿದ್ದಾರೆ. ಇದನ್ನೂ ಓದಿ: ಆನೇಕಲ್ನಲ್ಲಿ ಡಬಲ್ ಬ್ಯಾರಲ್ ಗನ್ ಸದ್ದು – ಜಗಳ ಬಿಡಿಸಲು ಹೋದವನಿಗೆ ಗುಂಡೇಟು!
ಹತ್ಯೆ ಹೇಗೆ?:
ಇನ್ಸ್ಪೆಕ್ಟರ್ ಮನ್ಸೂರ್ ವಾನಿ ಹತ್ಯೆ ಸೇರಿ ಹಲವು ಪ್ರಕರಣಗಳಲ್ಲಿ ಉಸ್ಮಾನ್ ಭಾಗಿಯಾಗಿದ್ದ, ಹಲವು ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯನಾಗಿದ್ದ ಉಸ್ಮಾನ್, ಶ್ರೀನಗರದ ಜನನಿಬಿಡ ಖಾನ್ಯಾರ್ ಎಂಬಲ್ಲಿ ಅವಿತುಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶನಿವಾರ ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ನಾಯಿಗಳು ಬೊಗಳುವುದನ್ನು ತಪ್ಪಿಸಲು ಬಿಸ್ಕೆಟ್ ಬಳಸಿವೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ
ಇದು ಶ್ರೀನಗರ (Srinagar) ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಕಾರ್ಯಾಚರಣೆ ಆಗಿದ್ದು, ಈತನ ಹತ್ಯೆ ನಮಗೆ ಒಂದು ದೊಡ್ಡ ಯಶಸ್ಸು. ಲಷ್ಕರ್ನ ಅತಿ ಹಿರಿಯ ಕಮಾಂಡರ್ ಆಗಿದ್ದ ಆತನ ಹತ್ಯೆ ಲಷ್ಕರ್ಗೆ ದೊಡ್ಡ ಹೊಡೆತ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ, ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದದ ಕಿಚ್ಚು – ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ