Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

Latest

2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

Public TV
Last updated: October 1, 2024 2:51 pm
Public TV
Share
4 Min Read
Chandrayaan 4
SHARE

ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಬಾಹ್ಯಾಕಾಶ ವಲಯದಲ್ಲಿ ಮತ್ತೊಂದು ಸಾಧನೆಗೆ ಮುಂದಡಿಯಿಟ್ಟಿದೆ. 2040 ಕ್ಕೆ ಚಂದ್ರನಲ್ಲಿ ಮಾನವನ ಹೆಜ್ಜೆ ಗುರುತು ಮೂಡಿಸುವ ಗುರಿ ಹೊಂದಿರುವ ಇಸ್ರೋ, ಅದಕ್ಕೆ ಪೂರಕವಾಗಿ 2027ಕ್ಕೆ ಚಂದ್ರಯಾನ-4 ಉಡಾವಣೆಗೆ ಸಜ್ಜಾಗಿದೆ. ಬಾಹ್ಯಾಕಾಶ ಪರಿಶೋಧನಾ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚು ಮಾಡುವ ಇರಾದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಚಂದ್ರಯಾನ-4 ಯೋಜನೆಗೆ ಹಸಿರು ನಿಶಾನೆ ತೋರಿದೆ. ಹಾಗಿದ್ರೆ ಚಂದ್ರಯಾನ-3ಕ್ಕಿಂತ ಚಂದ್ರಯಾನ-4 ಹೇಗೆ ವಿಭಿನ್ನ? ತಯಾರಿ ಹೇಗಿದೆ? ಚಂದ್ರಯಾನ 4 ಗಗನಯಾತ್ರಿಗಳಿಗೆ ಹೇಗೆ ಸಹಕಾರಿಯಾಗಬಹುದು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

ಚಂದ್ರಯಾನ -4 ಯೋಜನೆಯಡಿ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವುದಷ್ಟೇ ಅಲ್ಲದೇ, ಅಲ್ಲಿಂದ ಕಲ್ಲು ಮತ್ತು ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಉದ್ದೇಶವನ್ನು ಹೊಂದಿದೆ. ಹೀಗಾಗಿ ಈ ಯೋಜನೆಯಲ್ಲಿ ಚಂದ್ರಯಾನ- 3ರ ಯೋಜನೆಯಲ್ಲಿದ್ದ ಪ್ರೊಪಲ್ಷನ್‌ ಮಾಡ್ಯೂಲ್‌, ಡಿಸೆಂಡರ್‌ ಮಾಡ್ಯೂಲ್‌, ಅಸೆಂಡರ್‌ ಮಾಡ್ಯೂಲ್‌ ಜತೆಗೆ ಟ್ರಾನ್ಸಫರ್‌ ಮಾಡ್ಯೂಲ್‌, ರೀ -ಎಂಟ್ರಿ ಮಾಡ್ಯೂಲ್‌ ಎಂಬ ಎರಡು ಹೊಸ ಘಟಕಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ತಿಳಿಸಿದ್ದಾರೆ.

Chandrayaan 1

ಈ ಮಿಷನ್ ಯಶಸ್ವಿ ಚಂದ್ರನ ಲ್ಯಾಂಡಿಂಗ್, ಚಂದ್ರನ ಮಾದರಿಗಳ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಅವುಗಳನ್ನು ಭೂಮಿಯ ಮೇಲೆ ಪ್ರದರ್ಶನ ಮಾಡುವ ಗುರಿಯನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಚಂದ್ರಯಾನ-4 ಯೋಜನೆ ಸೇರಿದಂತೆ ಹಲವಾರು ಮಹತ್ವದ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಅನುಮೋದನೆಯನ್ನು ಘೋಷಿಸಿದರು. ಚಂದ್ರಯಾನ-4 ಮಿಷನ್ ಅನ್ನು ವಿಸ್ತರಿಸಲಾಗಿದೆ. ಮುಂದಿನ ಹಂತವು ಚಂದ್ರನಿಗೆ ಮಾನವಸಹಿತ ಮಿಷನ್ ಅನ್ನು ಜಾರಿ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಅನುಮೋದಿಸಲಾಗಿದೆ. ವೀನಸ್ ಆರ್ಬಿಟರ್ ಮಿಷನ್, ಗಗನ್‌ಯಾನ್ ಫಾಲೋ-ಆನ್ ಮತ್ತು ಭಾರತೀಯ ಅಂತರಿಕ್ಷ್ ನಿಲ್ದಾಣ ಮತ್ತು ಮುಂದಿನ ಪೀಳಿಗೆ ಲಾಂಚ್ ವೆಹಿಕಲ್ ಅಭಿವೃದ್ಧಿಗೂ ಅನುಮೋದನೆ ನೀಡಲಾಗಿದೆ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಚಂದ್ರಯಾನ-4 ಭವಿಷ್ಯದ ಚಂದ್ರನ ಕಾರ್ಯಾಚರಣೆಗಳಿಗೆ ಪ್ರಮುಖವಾದ ಅಡಿಪಾಯ ತಂತ್ರಜ್ಞಾನಗಳನ್ನು ಪ್ರದರ್ಶಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಡಾಕಿಂಗ್ ಮತ್ತು ಅನ್‌ಡಾಕಿಂಗ್ ಕಾರ್ಯವಿಧಾನಗಳು, ಸುರಕ್ಷಿತ ಲ್ಯಾಂಡಿಂಗ್ ತಂತ್ರಗಳು ಮತ್ತು ಚಂದ್ರನ ಮಾದರಿಗಳನ್ನು ಭೂಮಿಗೆ ಹಿಂದಿರುಗಿಸುವ ಸಾಮರ್ಥ್ಯ 2040 ರಲ್ಲಿ ಯೋಜಿಸಲಾದ ಮಾನವಸಹಿತ ಚಂದ್ರನ ಲ್ಯಾಂಡಿಂಗ್‌ನ ಭಾರತದ ಗುರಿಯತ್ತ ಪ್ರಮುಖ ಹೆಜ್ಜೆಯಾಗಿದೆ.

2035 ರ ವೇಳೆಗೆ ಭಾರತೀಯ ಅಂತರಿಕ್ಷ್ ನಿಲ್ದಾಣವನ್ನು (ಭಾರತೀಯ ಬಾಹ್ಯಾಕಾಶ ನಿಲ್ದಾಣ) ಸ್ಥಾಪಿಸುವುದು ಮತ್ತು 2040 ರ ವೇಳೆಗೆ ಮಾನವಸಹಿತ ಚಂದ್ರನ ಲ್ಯಾಂಡಿಂಗ್ ಅನ್ನು ಸಾಧಿಸುವುದು ಮತ್ತು ಅದರ ತಾಂತ್ರಿಕ ಸಾಧನೆಗಳನ್ನು ನಿರ್ಮಿಸುವುದು ಭಾರತ ಸರ್ಕಾರ ಹಾಗೂ ಇಸ್ರೋದ ಪ್ರಮುಖ ಉದ್ದೇಶವಾಗಿದೆ.

Chandrayaan

ಚಂದ್ರಯಾನ 4ಕ್ಕೆ ವೆಚ್ಚವೆಷ್ಟು?
ಚಂದ್ರಯಾನ 4 ಯೋಜನೆಗೆ 2,104.06 ಕೋಟಿ ರೂ. ಖರ್ಚಾಗಲಿದೆ. 2040ರ ಹೊತ್ತಿಗೆ ಚಂದ್ರನ ಅಂಗಳದಲ್ಲಿ ಗಗನಯಾತ್ರಿಗಳನ್ನು ಇಳಿಸಲು ಇಸ್ರೋ ಯೋಜನೆ ಹಾಕಿಕೊಂಡಿದೆ. 2040ರ ಸುಮಾರಿಗೆ ಭೂಮಿಯಿಂದ ಚಂದ್ರನಿಗೆ, ಚಂದ್ರನಿಂದ ಭೂಮಿಗೆ ಸುಲಭವಾಗಿ ಹೋಗಬಹುದಾಗ ಪರಿಸ್ಥಿತಿ ನಿರ್ಮಾಣವಾಗಬೇಕು ಎಂಬುದು ಇದರ ಗುರಿ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಾಹ್ಯಾಕಾಶ ನೌಕೆಯ ಅಭಿವೃದ್ಧಿಯ ನೇತೃತ್ವವನ್ನು ವಹಿಸುತ್ತದೆ ಮತ್ತು ಮಿಷನ್ ಅನ್ನು ಮೇಲ್ವಿಚಾರಣೆ ಮಾಡುತ್ತದೆ. 36 ತಿಂಗಳುಗಳ ಟೈಮ್‌ಲೈನ್‌ ಇದಕ್ಕೆ ನೀಡಲಾಗಿದೆ. ಯೋಜನೆಯು ಉದ್ಯಮ ಮತ್ತು ಶಿಕ್ಷಣದೊಂದಿಗೆ ಸಹಯೋಗವನ್ನು ಒಳಗೊಂಡಿರುತ್ತದೆ, ತಾಂತ್ರಿಕ ಪ್ರಗತಿಗಳು ಮತ್ತು ಉದ್ಯೋಗಾವಕಾಶಗಳನ್ನು ಉತ್ತೇಜಿಸುತ್ತದೆ.

ಚಂದ್ರಯಾನ4ರ ವಿಶೇಷತೆ ಏನು?
ಚಂದ್ರಯಾನ 4ರ ಕಾರ್ಯಾಚರಣೆಯಲ್ಲಿ ಎರಡು ವಿಭಿನ್ನ ರಾಕೆಟ್‌ಗಳಾದ ಹೆವಿ-ಲಿಫ್ಟರ್ LVM-3 ಮತ್ತು PSLV ಬಳಸಲಾಗುತ್ತದೆ. ಇವೆರಡೂ ವಿಭಿನ್ನ ಪೇಲೋಡ್‌ಗಳನ್ನು ಹೊತ್ತೊಯ್ಯುತ್ತವೆ.

ಚಂದ್ರಯಾನ 4ರ ಗಮನ ಚಂದ್ರನ ಮೇಲೆ ನಿಖರ ಲ್ಯಾಂಡಿಂಗ್, ಮಾದರಿ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳುವುದಾಗಿದೆ. ಇದರ ಮೂಲಕ ಭಾರತ ತನ್ನ ಬಾಹ್ಯಾಕಾಶ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲಿದೆ. ಒಟ್ಟು 5 ಮಾಡ್ಯೂಲ್‌ಗಳನ್ನು ತನ್ನೊಂದಿಗೆ ಚಂದ್ರಯಾನ 4 ಹೊತ್ತೊಯ್ಯಲಿದೆ. ಈ ಎಲ್ಲಾ ಮಾಡ್ಯೂಲ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ ಮತ್ತು ಚಂದ್ರನಿಂದ ಅಗತ್ಯ ಮಾದರಿಗಳನ್ನು ಸಂಗ್ರಹಿಸುತ್ತವೆ. ಇದುವರೆಗೆ ಚೀನಾ ಮತ್ತು ಅಮೆರಿಕ ದೇಶಗಳು ಮಾತ್ರ ಇಂತಹ ಕಠಿಣ ಕಾರ್ಯಾಚರಣೆಯನ್ನು ನಿರ್ವಹಿಸಿವೆ.

Chandrayaan 2

ಭಾರತಕ್ಕೆ ಜಪಾನ್ ನೆರವು:
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಈ ಕುರಿತು ಮಾತನಾಡಿ, ಚಂದ್ರಯಾನ 4 ಕೇವಲ ಚಂದ್ರನಿಂದ ಕಲ್ಲುಗಳನ್ನು ತರುವ ಮಿಷನ್ ಅಲ್ಲ. ಭವಿಷ್ಯದಲ್ಲಿ ಮನುಷ್ಯರು ಚಂದ್ರನಲ್ಲಿಗೆ ಹೋಗಲು ಮತ್ತು ಅಲ್ಲಿಂದ ಸುರಕ್ಷಿತವಾಗಿ ಹಿಂತಿರುಗಲು ಸಾಧ್ಯವಾಗುವಂತಹ ಸಾಮರ್ಥ್ಯವನ್ನು ರಚಿಸುವುದಾಗಿದೆ ಎಂದರು.

ಈ ಯೋಜನೆಯಲ್ಲಿ ಭಾರತ ಮತ್ತು ಜಪಾನ್ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬ ಮಾಹಿತಿ ದೊರೆತಿದೆ. ಇಸ್ರೋ ತನ್ನ ಲ್ಯಾಂಡರ್ ಅನ್ನು ಸಿದ್ಧಪಡಿಸುತ್ತಿದ್ದು, ಚಂದ್ರನ ರೋವರ್‌ನ ಜವಾಬ್ದಾರಿಯನ್ನು JAXA ವಹಿಸಿಕೊಂಡಿದೆ. ಲ್ಯಾಂಡರ್ ರೋವರ್ ಅನ್ನು ಹೊತ್ತೊಯ್ಯುತ್ತದೆ. ಹೀಗಾಗಿ ಎರಡೂ ದೇಶಗಳು ಚಂದ್ರಯಾನ 4ರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಲಿವೆ.

ಭಾರತೀಯ ಬಾಹ್ಯಾಕಾಶ ನಿಲ್ದಾಣ:
ಗಗನಯಾನ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸುವುದರೊಂದಿಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣದ (ಬಿಎಎಸ್-1) ಮೊದಲ ಮಾಡ್ಯೂಲ್ ಅನ್ನು ಅಭಿವೃದ್ಧಿಪಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪರಿಷ್ಕೃತ ಗಗನಯಾನ ಕಾರ್ಯಕ್ರಮ BAS-1 ಘಟಕ ಸೇರಿದಂತೆ ಎಂಟು ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದು ಡಿಸೆಂಬರ್ 2028ರೊಳಗೆ ಪೂರ್ಣಗೊಳ್ಳಲಿದೆ.

ಗಗನಯಾನ ಕಾರ್ಯಕ್ರಮದ ಒಟ್ಟು ನಿಧಿಯನ್ನು 11,170 ಕೋಟಿ ರೂಪಾಯಿಗಳಿಂದ 20,193 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಗಗನಯಾನದಲ್ಲಿ 3 ಗಗನಯಾತ್ರಿಗಳನ್ನು 400 ಕಿ.ಮೀ ಮೇಲಿನ ಭೂಮಿಯ ಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಇರುವ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ.

ವೀನಸ್ (ಶುಕ್ರ) ಆರ್ಬಿಟರ್ ಮಿಷನ್:
ಈ ಯೋಜನೆಗೆ ಕೇಂದ್ರ ಸರ್ಕಾರ 1,236 ಕೋಟಿ ರೂ.ಗಳ ಬಜೆಟ್ ಮೀಸಲಿಟ್ಟಿದೆ. 2028ರ ಮಾರ್ಚ್‌ನಲ್ಲಿ ಯೋಜನೆ ಪ್ರಾರಂಭವಾಗಲಿದೆ. ಇದರ ಪ್ರಾಥಮಿಕ ಉದ್ದೇಶ ಶುಕ್ರನ ಮೇಲ್ಮೈ ಮತ್ತು ವಾತಾವರಣದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುವುದು, ವಾತಾವರಣದ ಮೇಲೆ ಸೂರ್ಯನ ಪ್ರಭಾವದ ಕುರಿತು ಅಧ್ಯಯನ ಮಾಡುವುದಾಗಿದೆ.

TAGGED:Astronautschandrayaan-4ISROS Somanath
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
12 minutes ago
Villagers protested against illegal stone mining in several places in Anavatti Shivamogga
Districts

ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ

Public TV
By Public TV
29 minutes ago
Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
58 minutes ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
1 hour ago
Nelamangala Wife Suicide copy
Bengaluru City

200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Public TV
By Public TV
2 hours ago
Iran Protest 2 1
Latest

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?