ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

Public TV
3 Min Read
delhi muslim

– ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ

ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. ರಾಜ್ಯಗಳಿಗೆ ಮರಳಿದ ಅನೇಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಅವರೊಂದಿಗೆ ಸಂಪರ್ಕ ಹೊಂದಿದ್ದ ಜನರನ್ನೂ ಕೂಡ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ. ಇದನ್ನೂ ಓದಿ:  ಎಲ್ಲೆಂದರಲ್ಲಿ, ಡಾಕ್ಟರ್ ಮೇಲೆ ಉಗುಳುತ್ತಿದ್ದಾರೆ ದೆಹಲಿ ಮಸೀದಿಯ ಕ್ವಾರಂಟೈನ್‍ಗಳು

Tabligh e Jamaat Nizamuddin Markaz Delhi Corona 1

ಸದ್ಯಕ್ಕೆ ದೇಶದಲ್ಲಿ 400ಕ್ಕೂ ಹೆಚ್ಚು ಮಂದಿಗೆ ಕೊರೊನಾ ಬಂದಿದ್ದು, ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಇದರ ಜೊತೆ ಇವರ ಸಂಪರ್ಕಕ್ಕೆ ಬಂದವರಿಗೂ ಕೊರೊನಾ ಹರಡುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ.

ವಿವಿಧ ರಾಜ್ಯದಲ್ಲಿ 9 ಸಾವು:
ಜಮಾತ್ ಸಭೆಯಿಂದ ವಾಪಸ್ ಆಗಿದ್ದ ತೆಲಂಗಾಣದಲ್ಲಿ ಒಂಬತ್ತು ಜನರು, ದೆಹಲಿ, ಮಹಾರಾಷ್ಟ್ರ, ಜಮ್ಮು-ಕಾಶ್ಮೀರದ ತಲಾ ಇಬ್ಬರು, ಕರ್ನಾಟಕದ, ಆಂಧ್ರ ಪ್ರದೇಶ, ಬಿಹಾರ್ ಹಾಗೂ ಗುಜರಾತ್‍ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿತ ಸಂಖ್ಯೆಯಂತೂ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಲೇ ಇದೆ.

Tabligh e Jamaat Nizamuddin Markaz Delhi Corona 3

ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು 1,965 ಜನರಿಗೆ ಸೋಂಕುಲಿದ್ದು, ಅವರಲ್ಲಿ 151 ಜನರು ಗುಣಮುಖರಾಗಿದ್ದಾರೆ. ಉಳಿದಂತೆ 50 ಜನರ ಕೊರೊನಾಗೆ ಬಲಿಯಾಗಿದ್ದಾರೆ.

ಯಾವ ರಾಜ್ಯದಲ್ಲಿ ಎಷ್ಟು ಸೋಂಕಿತರು?
ಆಂಧ್ರಪ್ರದೇಶದ 746ಕ್ಕೂ ಹೆಚ್ಚು ಜನರು ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ 70 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 659 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

ದೆಹಲಿಯ ಸಭೆಗೆ ತೆಲಂಗಾಣದ 1,030 ಜನರು ಹಾಜರಾಗಿದ್ದರು. ಅವರಲ್ಲಿ 321 ಜನರಿಗೆ ಸೋಂಕು ತಗುಲಿದ್ದು, 700 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

Tabligh e Jamaat Nizamuddin Markaz Delhi Corona 4

ಈ ಕುರಿತು ಮಾಹಿತಿ ನೀಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ತಬ್ಲಿಘಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದ 46 ಜನರು ಗೋವಾಗೆ ಬಂದಿದ್ದಾರೆ. ಅವರನ್ನು ಗುರುತಿಸಿದ ಕ್ವಾರಂಟೈನ್‍ನಲ್ಲಿ ಇರಿಸಿದ್ದೇವೆ. ಆದರೆ ಅವರು ಗೋವಾಕ್ಕೆ ಯಾಕೆ ಬಂದಿದ್ದಾರೆಂದು ನಮಗೆ ತಿಳಿದಿಲ್ಲ. ಉಳಿದವರ ಹುಡುಕಾಟ ನಡೆಸಿದ್ದೇವೆ ಎಂದರು.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮರ್ಕಜ್ ನಿಜಾಮುದ್ದೀನ್‍ನಿಂದ ವಾಪಸ್ ಆಗಿರುವ 2,346 ಜನರಲ್ಲಿ 1,810 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಉಳಿದ 536 ಜನರನ್ನು ನಗರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎಲ್ಲಾ 2,346 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ವೇಳೆ ಅವರನ್ನು ಹಾಗೆ ಬಿಟ್ಟರೆ ನಗರದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೆ 121 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 429 ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಕೇವಲ 8 ಜನ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ 1,400ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ಪೈಕಿ ಸುಮಾರು 1,300 ಮಂದಿಯನ್ನು ಪತ್ತೆ ಮಾಡಲಾಗಿದ್ದು, ಅವರ ಮಾದರಿಗಳನ್ನು ಕೋವಿಡ್-19 ಪರೀಕ್ಷೆಗೆ ಸಂಗ್ರಹಿಸಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೊಪೆ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಬುಧವಾರದ ರಾತ್ರಿ 9 ಗಂಟೆ ಸುಮಾರಿಗೆ ಕೊರೊನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿತ್ತು. ಈ ಪೈಕಿ 190 ಜನರು ದೆಹಲಿಯಲ್ಲಿ ನಡೆದ ಜಮಾತ್ ಸಭೆಗೆ ಸೇರಿದರೇ ಆಗಿದ್ದರು. ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಬೀಲಾ ರಾಜೇಶ್ ಅವರು ಇಂದು ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 75 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಅವರಲ್ಲಿ ಅದರಲ್ಲಿ 74 ಮಂದಿ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರೇ ಆಗಿದ್ದಾರೆ. ತಬ್ಲಿಘಿ ಕಾರ್ಯಕ್ರಮಕ್ಕೆ ಹಾಜರಾಗಿದ್ದ 264 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳು 309 ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಕೇರಳದಿಂದ 300ಕ್ಕೂ ಅಧಿಕ ಜನರು ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಹಿಸಿದ್ದರು. ಈ ಪೈಕಿ 60 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಉತ್ತರ ಪ್ರದೇಶದಿಂದ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 596 ಜನರ ಪೈಕಿ ಒಬ್ಬರಿಗೆ ಸೋಂಕು ತಗುಲಿದ್ದು, 500 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಧಾರ್ಮಿಕ ಸಭೆಯಲ್ಲಿ ಗುಜರಾತ್‍ನ 72 ಜನರು, ಒಡಿಶಾದ 20 ಜನರು, ಅಸ್ಸಾಂನ 450 ಜನರು, ರಾಜಸ್ಥಾನದ 583 ಜನರು, ಚತ್ತೀಸಗಢದ 101 ಮಂದಿ ಹಾಜರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *