Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?

Public TV
Last updated: November 1, 2024 7:35 am
Public TV
Share
2 Min Read
kannada rajyotsava 02
SHARE

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅದರಂತೆ ಕರ್ನಾಟಕದ ಇತಿಹಾಸ ತಿಳಿಯುವುದೂ ಅಷ್ಟೇ ಮುಖ್ಯವಾಗಿದೆ.

Kannada Flag 7

ರಾಜ್ಯ ಉದಯಿಸಿ 17 ವರ್ಷಗಳವರೆಗೂ ʻಮೈಸೂರುʼ ಎಂಬ ಹೆಸರೇ ಇತ್ತು. ಬಳಿಕ ಮೈಸೂರು ರಾಜ್ಯಕ್ಕೆ 1973ರ ನವೆಂಬರ್ 1ರಂದು ʻಕರ್ನಾಟಕ’ ಎಂದು ನಾಮಕರಣ ಮಾಡಲಾಯಿತು. ʻಮೈಸೂರು’ ‘ಬದಲಾಗಿ ʻಕರ್ನಾಟಕʼ ಎಂದು ಮರುನಾಮಕರಣ ಮಾಡಿದ್ದೇಕೆ? ರಾಜ್ಯದ ಮೂಲ ಹೆಸರು ಬದಲಿಸುವ ಪ್ರಯತ್ನಗಳು ಏಕೆ ನಡೆದವು? ಇದೊಂದು ಚೆಂದದ ಕುತೂಹಲ. ಇದರ ಸಂಕ್ಷಿಪ್ತ ಹಿನ್ನೆಲೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ….

belagavi Suvarna Soudha 1

ಚಳವಳಿಗಾರರೂ ಆಗಿದ್ದ ಅಂದಾನಪ್ಪ ದೊಡ್ಡಮೇಟಿ ಅವರು ವಿಧಾನಸಭಾ ಸದಸ್ಯರೆಲ್ಲರೂ ʻಕರ್ನಾಟಕ’ ಎಂಬ ಹೆಸರು ಕುರಿತು ಚರ್ಚಿಸಲೆಂದೇ ಕೃತಿಯೊಂದನ್ನು ರಚಿಸಿ ಹಂಚಿದರು. 1957ರ ಸೆ.30ರಂದು ಈ ಕುರಿತು ಸದನದಲ್ಲಿ ಚರ್ಚೆಯಾಯಿತು. ಪ್ರತಿಪಕ್ಷದ ಉಪನಾಯಕರಾಗಿದ್ದ ಎಂ. ರಾಮಪ್ಪನವರು ʻಕರ್ನಾಟಕ’ ನಾಮಕರಣಗೊಳ್ಳಬೇಕೆಂದು ಎರಡು ಬಾರಿ ಗೊತ್ತುವಳಿ ಮಂಡಿಸಿದ್ದರೂ ಅನಿರ್ದಿಷ್ಟಕಾಲ ಮುಂದೂಡಲ್ಪಟ್ಟಿತು. ಶಾಸಕರಾದ ಬಸವನಗೌಡ ಮತ್ತು ಆ‌ರ್.ಎಸ್ ಪಾಟೀಲ್ ಅವರೂ ಸದನದಲ್ಲಿ ಪ್ರಸ್ತಾಪಿಸಿದ್ದರು. ಅಂದಾನಪ್ಪನವರು, ʻಕರ್ನಾಟಕʼ ನಾಮಕರಣಗೊಳ್ಳದೇ ತಾವು ವಿರಮಿಸುವುದಿಲ್ಲ, ಎನ್ನುವ ಮಟ್ಟಿಗೆ ಮತ್ತೆಮತ್ತೆ ನಾಮಕರಣದ ವಿಚಾರವನ್ನು ಸದನದಲ್ಲಿ ಮುನ್ನೆಲೆಗೆ ತಂದರು. ಇದನ್ನೂ ಓದಿ: ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಯಾರೆಂದು ಗೊತ್ತೆ?

kannada rajyotsava 01

ನಂತರದಲ್ಲಿ ಜನರಿಂದ ಒತ್ತಡ ತೀವ್ರಗೊಂಡಾಗ ದೇವರಾಜ ಅರಸು ಅವರು ಜುಲೈ 27, 1972ರಂದು ʻಕರ್ನಾಟಕ’ ನಾಮಕರಣದ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂದೇ ಒಪ್ಪಿಗೆ ಪಡೆದರು. ಅದೇ ತಿಂಗಳ 31ರಂದು ವಿಧಾನ ಪರಿಷತ್ತಿನಲ್ಲಿ ಒಪ್ಪಿಗೆ ದೊರೆಯಿತು. ವಿಧೇಯಕವು 1973ರ ಜುಲೈ 30ರಂದು ಲೋಕಸಭೆಯಲ್ಲಿ, ಆಗಸ್ಟ್ 8ರಂದು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡು, ಅ.8ರಂದು ರಾಷ್ಟ್ರಪತಿ ವಿ.ವಿ.ಗಿರಿ ಅಂಕಿತದೊಂದಿಗೆ ಮೈಸೂರು ರಾಜ್ಯ ʻಕರ್ನಾಟಕ’ ವಾಯಿತು. ನವೆಂಬರ್ 1, 1973ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17ನೇ ರಾಜ್ಯೋತ್ಸವವೇ ಕರ್ನಾಟಕ ನಾಮಕರಣೋತ್ಸವ. ಅರಸು ಅವರು ಕಾರ್ಯಕ್ರಮ ಉದ್ಘಾಟಿಸಿ, ʻಇದು ನಾಡಿನ ಜನತೆಯ ಆಸೆ, ಆಕಾಂಕ್ಷೆಗಳ ಪ್ರತೀಕ. ಕನ್ನಡ ಭಾವಬಂಧನದ ಸಂಕೇತʼ ಎಂದು ನುಡಿದಿದ್ದರು.

Kannada Flag 5

ರಾಜ್ಯನಿರ್ಮಾಣ ದಿನಾಚರಣೆ ನಡೆದಿದ್ದೆಲ್ಲಿ?
ಕೆಂಗಲ್‌ ಹನುಮಂತರಾಯರ ಆಶಯದಂತೆ ಏಕೀಕರಣಗೊಂಡ ಕರ್ನಾಟಕವು ವಿಶಾಲ ʻಮೈಸೂರು ರಾಜ್ಯ’ ಎಂಬ ಹೆಸರಿನಿಂದ ನ.1, 1956ರಂದು ಅಸ್ತಿತ್ವಕ್ಕೆ ಬಂತು. ಅಂದು ಕನ್ನಡಿಗರ ಸಾಂಸ್ಕೃತಿಕ ರಾಜಧಾನಿ ಹಂಪಿಯಲ್ಲಿ ಉತ್ತರ ಕರ್ನಾಟಕದ ಜನರು ʻರಾಜ್ಯ ನಿರ್ಮಾಣದ ದಿನ’ವನ್ನಾಗಿ ಆಚರಿಸಿದರು. ʻಕನ್ನಡ ಕುಲಪುರೋಹಿತ’ ಆಲೂರು ವೆಂಕಟರಾಯರು ಈ ಉತ್ಸವದ ಪೌರೋಹಿತ್ಯ ವಹಿಸಿದ್ದು ವಿಶೇಷವಾಗಿತ್ತು.

ಮೊದಲ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ:
ಏಕೀಕರಣದ ರೂವಾರಿಗಳಾದ ಎಸ್‌. ನಿಜಲಿಂಗಪ್ಪನವರು 10 ದಿನಗಳ ಮೊದಲು ವಿಶಾಲ ಮೈಸೂರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಅವಿರೋಧ ನಾಯಕರಾಗಿ ಆಯ್ಕೆಯಾದರು. ಏಕೀಕರಣದ ದಿನದಂದೇ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ವಿಶಾಲ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾದರು. ಈವರೆಗೆ ರಾಜ್ಯದಲ್ಲಿ ಐದು ವರ್ಷ ಪೂರ್ಣಾವಧಿ ಪೂರೈಸಿದ ಮೂವರು ಮುಖ್ಯಮಂತ್ರಿಗಳಲ್ಲಿ ಇವರು ಮೊದಲಿಗರು.

TAGGED:bengaluruKannada RajyotsavaKarnataka Unification Movementkengal hanumanthaiahS Nijalingappaಎಸ್. ನಿಜಲಿಂಗಪ್ಪಕನ್ನಡ ರಾಜ್ಯೋತ್ಸವಕರ್ನಾಟಕ ಏಕೀಕರಣಕರ್ನಾಟಕ ಏಕೀಕರಣ ಚಳುವಳಿಕರ್ನಾಟಕ ನಾಮಕರಣಕೆಂಗಲ್ ಹನುಮಂತಯ್ಯಬೆಂಗಳೂರುಮೈಸೂರು ರಾಜ್ಯ
Share This Article
Facebook Whatsapp Whatsapp Telegram

Cinema Updates

Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
7 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
11 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
1 day ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
1 day ago

You Might Also Like

ajit doval wang yi
Latest

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

Public TV
By Public TV
1 hour ago
nagrota indian army
Latest

ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

Public TV
By Public TV
1 hour ago
wang yi pakistan
Latest

ಉಗ್ರರ ಪೋಷಕ ಪಾಕಿಸ್ತಾನಕ್ಕೆ ಮತ್ತೆ ಬೆಂಬಲ ಘೋಷಿಸಿದ ಚೀನಾ

Public TV
By Public TV
2 hours ago
Capture 1
Latest

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

Public TV
By Public TV
3 hours ago
BSF Sub Inspector Mohammed Imteyaz
Crime

ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

Public TV
By Public TV
3 hours ago
Omar Abdullah drone attack
Latest

ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?