Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?

Bengaluru City

ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?

Public TV
Last updated: November 1, 2024 7:35 am
Public TV
Share
2 Min Read
kannada rajyotsava 02
SHARE

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅದರಂತೆ ಕರ್ನಾಟಕದ ಇತಿಹಾಸ ತಿಳಿಯುವುದೂ ಅಷ್ಟೇ ಮುಖ್ಯವಾಗಿದೆ.

Kannada Flag 7

ರಾಜ್ಯ ಉದಯಿಸಿ 17 ವರ್ಷಗಳವರೆಗೂ ʻಮೈಸೂರುʼ ಎಂಬ ಹೆಸರೇ ಇತ್ತು. ಬಳಿಕ ಮೈಸೂರು ರಾಜ್ಯಕ್ಕೆ 1973ರ ನವೆಂಬರ್ 1ರಂದು ʻಕರ್ನಾಟಕ’ ಎಂದು ನಾಮಕರಣ ಮಾಡಲಾಯಿತು. ʻಮೈಸೂರು’ ‘ಬದಲಾಗಿ ʻಕರ್ನಾಟಕʼ ಎಂದು ಮರುನಾಮಕರಣ ಮಾಡಿದ್ದೇಕೆ? ರಾಜ್ಯದ ಮೂಲ ಹೆಸರು ಬದಲಿಸುವ ಪ್ರಯತ್ನಗಳು ಏಕೆ ನಡೆದವು? ಇದೊಂದು ಚೆಂದದ ಕುತೂಹಲ. ಇದರ ಸಂಕ್ಷಿಪ್ತ ಹಿನ್ನೆಲೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ….

belagavi Suvarna Soudha 1

ಚಳವಳಿಗಾರರೂ ಆಗಿದ್ದ ಅಂದಾನಪ್ಪ ದೊಡ್ಡಮೇಟಿ ಅವರು ವಿಧಾನಸಭಾ ಸದಸ್ಯರೆಲ್ಲರೂ ʻಕರ್ನಾಟಕ’ ಎಂಬ ಹೆಸರು ಕುರಿತು ಚರ್ಚಿಸಲೆಂದೇ ಕೃತಿಯೊಂದನ್ನು ರಚಿಸಿ ಹಂಚಿದರು. 1957ರ ಸೆ.30ರಂದು ಈ ಕುರಿತು ಸದನದಲ್ಲಿ ಚರ್ಚೆಯಾಯಿತು. ಪ್ರತಿಪಕ್ಷದ ಉಪನಾಯಕರಾಗಿದ್ದ ಎಂ. ರಾಮಪ್ಪನವರು ʻಕರ್ನಾಟಕ’ ನಾಮಕರಣಗೊಳ್ಳಬೇಕೆಂದು ಎರಡು ಬಾರಿ ಗೊತ್ತುವಳಿ ಮಂಡಿಸಿದ್ದರೂ ಅನಿರ್ದಿಷ್ಟಕಾಲ ಮುಂದೂಡಲ್ಪಟ್ಟಿತು. ಶಾಸಕರಾದ ಬಸವನಗೌಡ ಮತ್ತು ಆ‌ರ್.ಎಸ್ ಪಾಟೀಲ್ ಅವರೂ ಸದನದಲ್ಲಿ ಪ್ರಸ್ತಾಪಿಸಿದ್ದರು. ಅಂದಾನಪ್ಪನವರು, ʻಕರ್ನಾಟಕʼ ನಾಮಕರಣಗೊಳ್ಳದೇ ತಾವು ವಿರಮಿಸುವುದಿಲ್ಲ, ಎನ್ನುವ ಮಟ್ಟಿಗೆ ಮತ್ತೆಮತ್ತೆ ನಾಮಕರಣದ ವಿಚಾರವನ್ನು ಸದನದಲ್ಲಿ ಮುನ್ನೆಲೆಗೆ ತಂದರು. ಇದನ್ನೂ ಓದಿ: ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಯಾರೆಂದು ಗೊತ್ತೆ?

kannada rajyotsava 01

ನಂತರದಲ್ಲಿ ಜನರಿಂದ ಒತ್ತಡ ತೀವ್ರಗೊಂಡಾಗ ದೇವರಾಜ ಅರಸು ಅವರು ಜುಲೈ 27, 1972ರಂದು ʻಕರ್ನಾಟಕ’ ನಾಮಕರಣದ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂದೇ ಒಪ್ಪಿಗೆ ಪಡೆದರು. ಅದೇ ತಿಂಗಳ 31ರಂದು ವಿಧಾನ ಪರಿಷತ್ತಿನಲ್ಲಿ ಒಪ್ಪಿಗೆ ದೊರೆಯಿತು. ವಿಧೇಯಕವು 1973ರ ಜುಲೈ 30ರಂದು ಲೋಕಸಭೆಯಲ್ಲಿ, ಆಗಸ್ಟ್ 8ರಂದು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡು, ಅ.8ರಂದು ರಾಷ್ಟ್ರಪತಿ ವಿ.ವಿ.ಗಿರಿ ಅಂಕಿತದೊಂದಿಗೆ ಮೈಸೂರು ರಾಜ್ಯ ʻಕರ್ನಾಟಕ’ ವಾಯಿತು. ನವೆಂಬರ್ 1, 1973ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17ನೇ ರಾಜ್ಯೋತ್ಸವವೇ ಕರ್ನಾಟಕ ನಾಮಕರಣೋತ್ಸವ. ಅರಸು ಅವರು ಕಾರ್ಯಕ್ರಮ ಉದ್ಘಾಟಿಸಿ, ʻಇದು ನಾಡಿನ ಜನತೆಯ ಆಸೆ, ಆಕಾಂಕ್ಷೆಗಳ ಪ್ರತೀಕ. ಕನ್ನಡ ಭಾವಬಂಧನದ ಸಂಕೇತʼ ಎಂದು ನುಡಿದಿದ್ದರು.

Kannada Flag 5

ರಾಜ್ಯನಿರ್ಮಾಣ ದಿನಾಚರಣೆ ನಡೆದಿದ್ದೆಲ್ಲಿ?
ಕೆಂಗಲ್‌ ಹನುಮಂತರಾಯರ ಆಶಯದಂತೆ ಏಕೀಕರಣಗೊಂಡ ಕರ್ನಾಟಕವು ವಿಶಾಲ ʻಮೈಸೂರು ರಾಜ್ಯ’ ಎಂಬ ಹೆಸರಿನಿಂದ ನ.1, 1956ರಂದು ಅಸ್ತಿತ್ವಕ್ಕೆ ಬಂತು. ಅಂದು ಕನ್ನಡಿಗರ ಸಾಂಸ್ಕೃತಿಕ ರಾಜಧಾನಿ ಹಂಪಿಯಲ್ಲಿ ಉತ್ತರ ಕರ್ನಾಟಕದ ಜನರು ʻರಾಜ್ಯ ನಿರ್ಮಾಣದ ದಿನ’ವನ್ನಾಗಿ ಆಚರಿಸಿದರು. ʻಕನ್ನಡ ಕುಲಪುರೋಹಿತ’ ಆಲೂರು ವೆಂಕಟರಾಯರು ಈ ಉತ್ಸವದ ಪೌರೋಹಿತ್ಯ ವಹಿಸಿದ್ದು ವಿಶೇಷವಾಗಿತ್ತು.

ಮೊದಲ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ:
ಏಕೀಕರಣದ ರೂವಾರಿಗಳಾದ ಎಸ್‌. ನಿಜಲಿಂಗಪ್ಪನವರು 10 ದಿನಗಳ ಮೊದಲು ವಿಶಾಲ ಮೈಸೂರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಅವಿರೋಧ ನಾಯಕರಾಗಿ ಆಯ್ಕೆಯಾದರು. ಏಕೀಕರಣದ ದಿನದಂದೇ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ವಿಶಾಲ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾದರು. ಈವರೆಗೆ ರಾಜ್ಯದಲ್ಲಿ ಐದು ವರ್ಷ ಪೂರ್ಣಾವಧಿ ಪೂರೈಸಿದ ಮೂವರು ಮುಖ್ಯಮಂತ್ರಿಗಳಲ್ಲಿ ಇವರು ಮೊದಲಿಗರು.

TAGGED:bengaluruKannada RajyotsavaKarnataka Unification Movementkengal hanumanthaiahS Nijalingappaಎಸ್. ನಿಜಲಿಂಗಪ್ಪಕನ್ನಡ ರಾಜ್ಯೋತ್ಸವಕರ್ನಾಟಕ ಏಕೀಕರಣಕರ್ನಾಟಕ ಏಕೀಕರಣ ಚಳುವಳಿಕರ್ನಾಟಕ ನಾಮಕರಣಕೆಂಗಲ್ ಹನುಮಂತಯ್ಯಬೆಂಗಳೂರುಮೈಸೂರು ರಾಜ್ಯ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
10 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
29 minutes ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
2 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
2 hours ago
R Ashok 3
Bengaluru City

ಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

Public TV
By Public TV
2 hours ago
Shivalinge Gowda
Districts

ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ರೇವಣ್ಣಗೆ ಸವಾಲೆಸೆದ ಶಿವಲಿಂಗೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?