Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

Latest

ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

Public TV
Last updated: June 24, 2025 2:32 pm
Public TV
Share
2 Min Read
How did the Israel Iran ceasefire happen
SHARE

ವಾಷಿಂಗ್ಟನ್‌: ಕಳೆದ 12 ದಿನಗಳಿಂದ ನಡೆಯುತ್ತಿದ್ದ ಇಸ್ರೇಲ್‌ (Israel) ಇರಾನ್‌ (Iran) ನಡುವಿನ ಯುದ್ಧ ಕೊನೆಗೂ ಅಂತ್ಯವಾಗಿದ್ದು ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅಮೆರಿಕ (USA) ಮತ್ತು ಕತಾರ್‌ (Qatar) ಪ್ರಯತ್ನದಿಂದ ಈ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ.

ಜೂನ್‌ 23 ರ ರಾತ್ರಿಯಿಡಿ ನಡೆದ ವಿದ್ಯಮಾನದಲ್ಲಿ ಅಮೆರಿಕ ಇಸ್ರೇಲ್‌ ಮನವೊಲಿಸಿದರೆ ಕತಾರ್‌ ಇರಾನ್‌ ಮನವೊಲಿಸಲು ಯಶಸ್ವಿಯಾಯಿತು.

ಕದನ ವಿರಾಮ ಹೇಗಾಯ್ತು?
ಆರಂಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಜೊತೆ ಮಾತನಾಡಿದರು. ಆರಂಭದಲ್ಲಿ ಕದನ ವಿರಾಮಕ್ಕೆ ಒಪ್ಪದ ಇಸ್ರೇಲ್‌ ಕೊನೆಗೆ ಇರಾನ್‌ ಮುಂದೆ ಯಾವುದೇ ದಾಳಿ ಮಾಡುವುದಿಲ್ಲ ಎಂದು ಒಪ್ಪಿಕೊಂಡರೆ ಮಾತ್ರ ಕದನ ವಿರಾಮಕ್ಕೆ ಒಪ್ಪುತ್ತೇನೆ ಎಂದು ಷರತ್ತು ವಿಧಿಸಿದರು.

ಬಾಂಬ್‌ ದಾಳಿ ನಡೆಸಿದ್ದರಿಂದ ಇರಾನ್‌ ತನ್ನ ಮಾತನ್ನು ಕೇಳುವುದಿಲ್ಲ ಎನ್ನುವುದು ಅಮೆರಿಕ್ಕೆ ಗೊತ್ತಿತ್ತು. ಈ ಕಾರಣಕ್ಕೆ ಟ್ರಂಪ್ ಇರಾನ್‌ ಆಪ್ತ ದೇಶವಾಗಿರುವ ಕತಾರ್‌ ಸಂಪರ್ಕಿಸಿದರು. ಕತಾರ್‌ ಎಮಿರ್‌ ಜೊತೆ ಮಾತನಾಡಿ ಕದನ ವಿರಾಮಕ್ಕೆ ಇರಾನ್‌ ಮನವೊಲಿಸುವಂತೆ ಕೇಳಿಕೊಂಡರು ನಂತರ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕತಾರ್‌ ಪ್ರಧಾನಿ ಕಚೇರಿಯೊಂದಿಗೆ ಸಮನ್ವಯ ಸಾಧಿಸಿದರು. ಇದನ್ನೂ ಓದಿ: 12 ದಿನಗಳ ಇಸ್ರೇಲ್-ಇರಾನ್ ಸಂಘರ್ಷಕ್ಕೆ ಅಂತ್ಯ – ಮೂರು ದೇಶಗಳಿಗೆ ಸಿಕ್ಕಿದ್ದೇನು?

 

ವ್ಯಾನ್ಸ್ ಜೊತೆಗೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮತ್ತು ಯುಎಸ್ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಕೂಡ ಇರಾನ್ ಜೊತೆ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಕತಾರ್ ಪ್ರಧಾನಿಯೊಂದಿಗೆ ಮಾತನಾಡಿದ ನಂತರ ಇರಾನ್ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡಿತು.

ಅಮೆರಿಕ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಬಾಂಬ್ ದಾಳಿ ಮಾಡಿದ್ದಕ್ಕೆ ಇರಾನ್‌ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಅದರಂತೆ ಸೋಮವಾರ ರಾತ್ರಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ದೊಡ್ಡ ವಾಯುನೆಲೆಯ ಮೇಲೆ ದಾಳಿ ಮಾಡಿತ್ತು. ಆದರೆ ಈ ದಾಳಿ ನಡೆಸುವ ಮೊದಲೇ ಇರಾನ್‌ ಕತಾರ್‌ಗೆ ತಿಳಿಸಿತ್ತು. ಈ ವಿಚಾರವನ್ನು ಕತಾರ್‌ ಅಮೆರಿಕಗೆ ಹೇಳಿತ್ತು. ಮೊದಲೇ ದಾಳಿ ನಡೆಸುವ ವಿಚಾರ ತಿಳಿದ ಕಾರಣ ಅಮೆರಿಕ ಎಲ್ಲದ್ದಕ್ಕೂ ಸನ್ನದ್ದವಾಗಿತ್ತು ಮತ್ತು ಯಾವುದೇ ಸಾವು ನೋವು ಸಂಭವಿಸಿಲ್ಲ. ಇದನ್ನೂ ಓದಿ: ದೇಶ ತೊರೆಯಿರಿ ಇಲ್ವೋ ಇಂದು ಸಾಯಲು ಸಿದ್ಧವಾಗಿರಿ – ಕರೆ ಮಾಡಿ ಇರಾನ್‌ ಕಮಾಂಡರ್‌ಗಳಿಗೆ ಮೊಸಾದ್‌ ಎಚ್ಚರಿಕೆ

 

ನಮಗೆ ಮುಂಚಿನ ಸೂಚನೆ ನೀಡಿದ್ದಕ್ಕಾಗಿ ಇರಾನ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದರಿಂದ ಯಾವುದೇ ಜೀವ ಹಾನಿ ಮತ್ತು ಯಾರು  ಗಾಯಗೊಂಡಿಲ್ಲ ಎಂದು ಟ್ರಂಪ್‌ ಹೇಳಿದ್ದರು. ಒಂದು ವೇಳೆ ದಾಳಿಯಿಂದ ವಾಯುನೆಲೆಗೆ ಹಾನಿಯಾಗಿದ್ದರೆ ಅಮೆರಿಕ ಮತ್ತಷ್ಟು ದಾಳಿ ನಡೆಸುವ ಸಾಧ್ಯತೆ ಇತ್ತು. ಆದರೆ ಈ ಬಾರಿ ಶಾಂತಿ ಮಂತ್ರವನ್ನು ಜಪಿಸಿದ ಟ್ರಂಪ್‌ ಪ್ರತಿದಾಳಿ ನಡೆಸಲು ಮುಂದಾಗಲಿಲ್ಲ. ಹೀಗಾಗಿ ಕದನ ವಿರಾಮದ ಮಾತುಕತೆ ಯಶಸ್ವಿಯಾಯಿತು.

ಇಸ್ರೇಲಿ ದಾಳಿಯಿಂದ ಸುಮಾರು 600 ಜನ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ಆದರೆ ಮಾನವ ಹಕ್ಕುಗಳ ಗುಂಪು 950ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇಸ್ರೇಲ್ ನಗರಗಳ ಮೇಲೆ ಇರಾನ್‌ ಕ್ಷಿಪಣಿಗಳು ಬಿದ್ದ ಪರಿಣಾಮ 24 ಮಂದಿ ಮೃತಪಟ್ಟಿದ್ದಾರೆ.

TAGGED:ceasefiredonald trumpiranIsraelಇರಾನ್ಇಸ್ರೇಲ್ಕತಾರ್ಕದನ ವಿರಾಮ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
3 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
5 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
14 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
56 minutes ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?