Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾ ಕುಂಭಮೇಳದ ಆರಂಭ ಹೇಗಾಯ್ತು? ಅದರ ಮಹತ್ವ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾ ಕುಂಭಮೇಳದ ಆರಂಭ ಹೇಗಾಯ್ತು? ಅದರ ಮಹತ್ವ ಏನು?

Latest

ಮಹಾ ಕುಂಭಮೇಳದ ಆರಂಭ ಹೇಗಾಯ್ತು? ಅದರ ಮಹತ್ವ ಏನು?

Public TV
Last updated: January 13, 2025 2:24 pm
Public TV
Share
3 Min Read
Maha Kumbh Mela 2025
SHARE

ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭ ಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ.

ಕುಂಭಮೇಳ ಇದು ಪ್ರತಿ 3 ವರ್ಷಗಳಿಗೊಮ್ಮೆ ನಡೆಯುವ ಒಂದು ರೀತಿಯ ಜಾತ್ರೆ. ಇದನ್ನು ಕುಂಭ ಎಂದು ಕರೆಯಲಾಗುತ್ತದೆ. ಹರಿದ್ವಾರ ಮತ್ತು ಪ್ರಯಾಗ್ರಾಜ್‌ನಲ್ಲಿ ಪ್ರತಿ 6 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಅರ್ಧ ಕುಂಭ ಎಂದು ಕರೆಯಲಾಗುತ್ತದೆ. ಪ್ರಯಾಗರಾಜ್‌ಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಪೂರ್ಣ ಕುಂಭಮೇಳ ಎಂದು ಕರೆಯಲಾಗುತ್ತದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭವನ್ನು ಮಹಾಕುಂಭಮೇಳ ಎಂದು ಕರೆಯಲಾಗುತ್ತದೆ.

ಈ ಬಾರಿ ಪ್ರಯಾಗರಾಜ್‌ದಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ. ಸದ್ಯ ಮಹಾಕುಂಭ ಮೇಳಕ್ಕೆ ದೇಶವೇ ಭರದಿಂದ ಸಂಭ್ರಮದಿಂದ ಸಜ್ಜಾಗುತ್ತಿದೆ. 12 ವರ್ಷಗಳ ನಂತರ ಬರುವ ಮಹಾಕುಂಭ ಮೇಳ ಇದಾಗಿದ್ದು, ನಡೆಯಲಿರುವ ಮಹಾ ಕುಂಭಮೇಳಕ್ಕೆ 40-45 ಕೋಟಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಹಾಕುಂಭ ಮೇಳ ಕೇವಲ ಉತ್ಸವ ಮಾತ್ರವಲ್ಲ ಸಾವಿರಾರು ವರ್ಷಗಳ ಐತಿಹ್ಯ, ಪುರಾತನ ಇತಿಹಾಸ ಹೊಂದಿರುವ ಉತ್ಸಾಹಭರಿತ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ. ಈ ಉತ್ಸವವು ಪ್ರಾಚೀನ ಹಿಂದೂ ಪುರಾಣ ಮತ್ತು ಭಾರತದ ಶ್ರೀಮಂತ ಧಾರ್ಮಿಕ ಪರಂಪರೆಯ ಸಾಕ್ಷಿಯಾಗಿದೆ.

 

ಧಾರ್ಮಿಕ ನಂಬಿಕೆ:
ಪ್ರತಿ 144 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. 144 ಹೇಗೆ? 12 ರಿಂದ 12 ನ್ನು ಗುಣಿಸಿದಾಗ 144 ಆಗುತ್ತದೆ. ವಾಸ್ತವವಾಗಿ, ಕುಂಭ ಕೂಡ ಹನ್ನೆರಡು. ಅದರಲ್ಲಿ ನಾಲ್ಕು ಭೂಮಿಯಲ್ಲಿವೆ, ಉಳಿದ ಎಂಟು ಸ್ವರ್ಗದಲ್ಲಿವೆ ಎನ್ನುವ ನಂಬಿಕೆಯಿದೆ. ಆದ್ದರಿಂದ ಪ್ರತಿ 144 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಪ್ರಯಾಗರಾಜ್‌ನಲ್ಲಿ ಆಯೋಜಿಸಲಾಗುತ್ತದೆ. ಮಹಾ ಕುಂಭದ ಮಹತ್ವವನ್ನು ಇತರ ಕುಂಭಗಳಿಗಿಂತ ಹೆಚ್ಚು ಎಂದು ಪರಿಗಣಿಸಲಾಗುತ್ತದೆ.

ಗ್ರಹಗಳ ಒಗ್ಗೂಡುವಿಕೆಯ ಮೂಲಕ ಕುಂಭಮೇಳದ ಸ್ಥಳವನ್ನು ನಿರ್ಧರಿಸಲಾಗುತ್ತದೆ. ಗುರು, ಸೂರ್ಯ ಮತ್ತು ಚಂದ್ರರ ಸ್ಥಾನವನ್ನು ಗಣನೆಗೆ ತೆಗೆದುಕೊಂಡು ಅದು ಇರುವ ರಾಶಿಚಕ್ರ ಚಿಹ್ನೆಯನ್ನು ಪರಿಶೀಲಿಸಲಾಗುತ್ತದೆ. ಗುರುವು ಸೂರ್ಯನ ಸುತ್ತ ಒಂದು ಸುತ್ತು ಬರಲು ಸುಮಾರು 12 ವರ್ಷಗಳನ್ನು ತೆಗೆದುಕೊಳ್ಳುವುದರಿಂದ, ಕುಂಭಮೇಳವನ್ನು 12 ವರ್ಷಗಳ ಅವಧಿಯಲ್ಲಿ ನಾಲ್ಕು ಬಾರಿ ಆಚರಿಸಲಾಗುತ್ತದೆ.

ಇತಿಹಾಸ:
ಹಿಂದೂ ಪುರಾಣಗಳ ಪ್ರಕಾರ ಕುಂಭಮೇಳದಲ್ಲಿ ದೇವರುಗಳು ಭೂಮಿಗೆ ಇಳಿದು ಭಕ್ತರನ್ನು ಆಶೀರ್ವದಿಸುತ್ತಾರೆ ಎಂದು ನಂಬಲಾಗಿದೆ. 8ನೇ ಶತಮಾನದ ಹಿಂದೂ ತತ್ವಜ್ಞಾನಿ ಆದಿ ಶಂಕರಾಚಾರ್ಯರು ಆಧ್ಯಾತ್ಮಿಕ ನಾಯಕರು ಮತ್ತು ತಪಸ್ವಿಗಳ ನಿಯಮಿತ ಸಭೆಗಳನ್ನು ಉತ್ತೇಜಿಸಿದರು. ಇದುವೇ ಕುಂಭಮೇಳ ನಡೆಸಲು ಪ್ರೇರಣೆ ನೀಡಿತು ಎನ್ನಲಾಗಿದೆ.

ಮಹಾಕುಂಭ ಮೇಳದ ಇತಿಹಾಸವು ಸಮುದ್ರ ಮಂಥನ ಹಿಂದೂ ಪುರಾಣವನ್ನು ಉಲ್ಲೇಖಿಸುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಭಗವಾನ್ ವಿಷ್ಣು ಮೋಹಿನಿಯ ವೇಷದಲ್ಲಿ ಅಮೃತದ ಪಾತ್ರೆಯನ್ನು ಹೊತ್ತೊಯ್ದಾಗ, ದೇವತೆಗಳು ಮತ್ತು ದಾನವರ ನಡುವಿನ ಹೋರಾಟದಲ್ಲಿ ಅಮೃತದ ನಾಲ್ಕು ಹನಿಯು ಪ್ರಯಾಗರಾಜ್, ಹರಿದ್ವಾರ, ನಾಸಿಕ್ ಮತ್ತು ಉಜ್ಜಯಿನಿಯಲ್ಲಿ ಬಿದ್ದಿತು ಹೀಗೆ ಈ ನಾಲ್ಕು ಸ್ಥಳಗಳು ಪವಿತ್ರ ತೀರ್ಥಸ್ಥಳಗಳಾದವು. ಈ ತೀರ್ಥಸ್ಥಳಗಳ ಮೂಲಕ ಹರಿಯುವ ನದಿಗಳಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ.

ಗುಪ್ತರ ಆಡಳಿತ ಸಮಯದಲ್ಲಿ ಪವಿತ್ರ ನದಿಗಳ ಉದ್ದಕ್ಕೂ ದೇವಾಲಯಗಳು ಮತ್ತು ಸ್ನಾನ ಘಟ್ಟಗಳನ್ನು ನಿರ್ಮಿಸಿದಾಗ ಕುಂಭಮೇಳವು ಹೆಚ್ಚಿನ ಜನಸಮೂಹವನ್ನು ಆಕರ್ಷಿಸಲು ಪ್ರಾರಂಭಿಸಿತು. 12 ನೇ ಶತಮಾನದಿಂದ ಕುಂಭಮೇಳವು ರಾಜಮನೆತನದ ಪ್ರೋತ್ಸಾಹದೊಂದಿಗೆ ಒಂದು ಕಾರ್ಯಕ್ರಮವಾಗಿ ಪರಿಣಮಿಸಿದೆ. ಮೊಘಲ್ ಚಕ್ರವರ್ತಿಗಳು, ವಿಶೇಷವಾಗಿ ಚಕ್ರವರ್ತಿ ಅಕ್ಬರ್ ಆಳ್ವಿಕೆಯಲ್ಲಿ, ಕುಂಭಮೇಳಕ್ಕೆ ಹೆಚ್ಚಿನ ಗೌರವ ನೀಡಲಾಯಿತು.

ಸ್ವಾತಂತ್ರ್ಯಾನಂತರ ಜನವರಿ 1954 ರಲ್ಲಿ ಭಾರತೀಯ ಅಧಿಕಾರಿಗಳು ಮೊದಲ ಕುಂಭಮೇಳವನ್ನು ಆಯೋಜಿಸಿದ್ದರು. 1966 ರಲ್ಲಿ, ಐದನೇ ಪ್ರಮುಖ ಸ್ನಾನ ದಿನವಾದ ಮಾಘ ಪೂರ್ಣಿಮೆಯಂದು 7 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದರು ಎಂದು ವರದಿಯಾಗಿದೆ.

1975 ರಿಂದ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಲಾಗಿದ್ದರೂ, 1977 ರಲ್ಲಿ 12 ಕುಂಭಮೇಳಗಳು ಪೂರ್ಣಗೊಂಡಿದ್ದವು. 2019 ರಲ್ಲಿ, ಪ್ರಯಾಗ್‌ರಾಜ್‌ನಲ್ಲಿ ನಡೆದ ಅರ್ಧ ಕುಂಭದಲ್ಲಿ ಹಲವಾರು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಾಯಿತು, ಅದರಲ್ಲಿ ಶಾಹಿ ಸ್ನಾನದಲ್ಲಿ ಕಿನ್ನಾರ್ ಅಖಾಡವನ್ನು ಸೇರಿಸಲಾಯಿತು.

TAGGED:maha kumbh melaPrayagrajuttar pradesh
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
5 minutes ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
14 minutes ago
Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
41 minutes ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
1 hour ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
1 hour ago
NAGENDRA
Bengaluru City

ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ CBI ನೋಟಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?