Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

Crime

ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

Public TV
Last updated: November 19, 2024 3:48 pm
Public TV
Share
3 Min Read
Naxal Vikram Hegde
SHARE

ಉಡುಪಿ: ವಿಕ್ರಂ ಗೌಡ (Vikram Gowda) ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.

ವಿಕ್ರಂಗೌಡನ ಬಗ್ಗೆ ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ನಕ್ಸಲ್‌ರ (Naxal) ಚಲನವಲನಗಳು ನಮ್ಮೂರಲ್ಲಿ ಇರಲಿಲ್ಲ. ವಿಕ್ರಂಗೌಡ ನಮ್ಮ ಊರಿನವನಾದ್ದರಿಂದ ಆತ ಹೆಚ್ಚಾಗಿ ಬರುತ್ತಿದ್ದಾನೆ ಅನ್ನುವುದು ಬಿಟ್ಟರೆ, ಬಂದ ಬಗ್ಗೆ ಖಚಿತ ಮಾಹಿತಿ ಇರಲಿಲ್ಲ. ಆತನ ತಂದೆ ತಾಯಿ ತೀರಿಕೊಂಡಿದ್ದರಿಂದ ನಮಗೆ ಆತ ಬರುವ ಹೋಗುವ ಬಗ್ಗೆ ಸುಳಿವು ಇರಲಿಲ್ಲ. ಅವನ ದೊಡ್ಡಪ್ಪ ನಮ್ಮ ಊರಿನಲ್ಲಿದ್ದಾರೆ. ಅವರು ಮಲೆಕುಡಿಯ ಸಮಾಜದಿಂದ ಬಂದವರು ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

anti naxal force ANF 3

ಸುಮಾರು 2002-03ರಲ್ಲಿ ಈ ಆತ ಇಂತಹ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಎನ್ನುವಂತಹ ತಂಡವನ್ನು ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಆ ನಂತರ ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರವನ್ನು ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

ವಿಕ್ರಂಗೌಡ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು. ಅವರು ಆತನ ಮೆಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಆತ ಈ ತಂಡದಲ್ಲಿ ತೊಡಗಿಕೊಂಡು ಅಲ್ಲಿಂದ ಆತ ಆ ತಂಡದ ಜೊತೆಗೆ ಬೆಳೆದ. ವಿಕ್ರಂ ಸಾಧು ಸ್ವಭಾವದ ಹುಡುಗ. ಈ ಮಟ್ಟಕ್ಕೆ ನಕ್ಸಲ್ ನಾಯಕನಾಗುತ್ತಾನೆ ಎನ್ನುವುದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. 5ನೇ ತರಗತಿ ತನಕ ಮಾತ್ರ ಓದಿದ್ದ. ಆಮೇಲೆ ಮುಂಬೈಗೆ ಹೋಗಿ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ನಂತರ ಊರಿಗೆ ಬಂದು ಇಂತಹ ಕೆಲಸದಲ್ಲಿ ತೊಡಗಿಕೊಂಡ. ಆತನಿಗೆ ಅನೇಕ ಬಾರಿ ನಾನು ಬುದ್ಧಿವಾದ ಹೇಳಿದ್ದೆ ಆದರೂ ಆತ ಕೇಳಲಿಲ್ಲ ಎಂದರು.

13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್‌- ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ

ಯಾರು ಈ ವಿಕ್ರಂ ಗೌಡ?
ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ (Kerala Police) ಚಳ್ಳೆಹಣ್ಣು ತಿನ್ನಿಸಿದ್ದ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಇದನ್ನೂ ಓದಿ: ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

TAGGED:Forest DepartmrntKabbinale ForestNaxal EncounterudupiVikram Gowdaಕಬ್ಬಿನಾಲೆನಕ್ಸಲ್‌ ಎನ್‌ಕೌಂಟರ್‌ವಿಕ್ರಂ ಗೌಡಹೆಬ್ರಿ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
32 minutes ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
43 minutes ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
43 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
2 hours ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
2 hours ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?