Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಗನಯಾನ್‌ ಕ್ರೂ ಎಸ್ಕೇಪ್ ಸಿಸ್ಟಮ್ – ಗಗನಯಾತ್ರಿಗಳನ್ನು ಇದು ಹೇಗೆ ಬಚಾವ್‌ ಮಾಡುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಗನಯಾನ್‌ ಕ್ರೂ ಎಸ್ಕೇಪ್ ಸಿಸ್ಟಮ್ – ಗಗನಯಾತ್ರಿಗಳನ್ನು ಇದು ಹೇಗೆ ಬಚಾವ್‌ ಮಾಡುತ್ತೆ?

Latest

ಗಗನಯಾನ್‌ ಕ್ರೂ ಎಸ್ಕೇಪ್ ಸಿಸ್ಟಮ್ – ಗಗನಯಾತ್ರಿಗಳನ್ನು ಇದು ಹೇಗೆ ಬಚಾವ್‌ ಮಾಡುತ್ತೆ?

Public TV
Last updated: October 22, 2025 8:35 am
Public TV
Share
2 Min Read
How does Gaganyaans vital crew escape system work
SHARE

ಭಾರತದ (India) ಮೊದಲ ಮಾನವಸಹಿತ ಗಗನಯಾನ ಬಾಹ್ಯಾಕಾಶ ಯೋಜನೆಯನ್ನು 2027ರ ಮೊದಲ ತ್ರೈಮಾಸಿಕದಲ್ಲಿ ಕಾರ್ಯಗತಗೊಳಿಸಲು ಇಸ್ರೋ ನಿರ್ಧರಿಸಿದೆ. 2018ರಲ್ಲಿ ಸ್ವಾತಂತ್ರೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗಗನಯಾನ ಯೋಜನೆ (Gaganyaan Mission) ಘೋಷಿಸಿದ್ದರು. ಈ ಯೋಜನೆ ಅನುಷ್ಠಾನಕ್ಕೆ 2022ರ ಗುರಿ ನಿಗದಿ ಮಾಡಿದ್ದರೂ ಕಾರಣಾಂತರಗಳಿಂದ ಈಗ ಮುಂದೂಡಲ್ಪಟ್ಟಿದೆ.

ಈ ಯೋಜನೆಯಲ್ಲಿ ಗಗನಯಾನಿಗಳ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇದೇ ಕಾರಣಕ್ಕೆ ಕ್ರೂ ಎಸ್ಕೇಪ್ ಸಿಸ್ಟಮ್ (CES) ಅಳವಡಿಸಿಕೊಳ್ಳಲಾಗಿದೆ. ಕ್ರೂ ಎಸ್ಕೇಪ್ ಸಿಸ್ಟಮ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ. ಇದರಿಂದ ಅಪಾಯದಲ್ಲಿರುವ ಗಗನ ಯಾತ್ರಿಗಳು ಹೇಗೆ ಬಚಾವ್‌ ಆಗ್ತಾರೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

Gaganyaan 2

ಕ್ರೂ ಎಸ್ಕೇಪ್ ಸಿಸ್ಟಮ್
LVM3 (HLVM3) ರಾಕೆಟ್‌ನ್ನು ಉಡಾವಣಾ ವಾಹನವಾಗಿ ಬಳಸಿಕೊಂಡು ಭಾರತೀಯ ಗಗನಯಾತ್ರಿಗಳನ್ನು ಸುಮಾರು 400 ಕಿಮೀ ಎತ್ತರದ ಭೂಮಿಯ ಕಕ್ಷೆಗೆ ಸುರಕ್ಷಿತವಾಗಿ ಸಾಗಿಸುವುದು ಮತ್ತು ಅವರನ್ನು ಸುರಕ್ಷಿತವಾಗಿ ಹಿಂದಿರುಗಿಸುವುದು ಗಗನಯಾನ ಮಿಷನ್ ಗುರಿಯಾಗಿದೆ. ಈ ಸಂದರ್ಭದಲ್ಲಿ ಎದುರಾಗಬಹುದಾದ ತುರ್ತು ಸಂದರ್ಭಗಳಿಂದ ಬಾಹ್ಯಾಕಾಶ ಯಾನವು ವಿಫಲಗೊಂಡರೆ ಅಂತರಿಕ್ಷ ನೌಕೆಯಲ್ಲಿನ ಕ್ರೂ ಮಾಡ್ಯೂಲ್‌ನಿಂದ ಗಗನ ಯಾನಿಗಳನ್ನು ಸುರಕ್ಷಿತವಾಗಿ ಪಾರು ಮಾಡುವ ವ್ಯವಸ್ಥೆಯೇ ಕ್ರೂ ಎಸ್ಕೇಪ್ ಸಿಸ್ಟಮ್ ಆಗಿದೆ.

Gaganyaan 4

ಉಡಾವಣಾ ವಾಹನ ಅಪಘಾತಕ್ಕೊಳಗಾದರೆ CES ( ಕ್ರೂ ಎಸ್ಕೇಪ್ ಸಿಸ್ಟಮ್) ಸಿಬ್ಬಂದಿಯೊಂದಿಗೆ ಪೂರ್ತಿ ಮಾಡ್ಯೂಲ್‌ನ್ನು ಉಡಾವಣಾ ವಾಹನದಿಂದ ಬೇರ್ಪಡಿಸಿ, ಸುರಕ್ಷಿತವಾಗಿ ದೂರಕ್ಕೆ ತಳ್ಳುತ್ತದೆ. ಅಪಘಾತದ ಸಮಯದಲ್ಲಿ ಸುಲಭವಾಗಿ ಇದು ಕಾರ್ಯ ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ತಂತ್ರಜ್ಞಾನವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭಿವೃದ್ಧಿಪಡಿಸಿದೆ.

Gaganyaan 3

CES ಎಂಜಿನ್‌ಗಳ ಶಕ್ತಿ
ಉಡಾವಣೆ ವೇಳೆ ಆರೋಹಣ ಹಂತ ಅತ್ಯಂತ ನಿರ್ಣಾಯಕ ಹಂತವಾಗಿದೆ. ಈ ಸಮಯದಲ್ಲಿ ರಾಕೆಟ್ ಹೈಪರ್‌ಸಾನಿಕ್ ವೇಗ ಪಡೆದುಕೊಳ್ಳುತ್ತದೆ. ಅಂದರೆ ಶಬ್ಧದ ವೇಗಕ್ಕಿಂತ ಐದು ಪಟ್ಟು ಹೆಚ್ಚಿನ ವೇಗದಲ್ಲಿ ಚಲಿಸುತ್ತದೆ. ಇದಕ್ಕಾಗಿ ರಾಕೆಟ್‌ ಎತ್ತಲು ಎರಡು ಶಕ್ತಿಶಾಲಿ S200 ಘನ-ಇಂಧನ ಬೂಸ್ಟರ್‌ (ಘನ ಇಂಧನ ಚಾಲಿತ ರಾಕೆಟ್ ಎಂಜಿನ್) ಬಳಸಲಾಗಿರುತ್ತದೆ. ಘನ ಇಂಧನ ಎಂಜಿನ್‌ ಒಮ್ಮೆ ಆರಂಭಗೊಂಡರೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ, ಕ್ರೂ ಎಸ್ಕೇಪ್ ಸಿಸ್ಟಮ್, ಅಪಘಾತವಾದಾಗ ಉಡಾವಣಾ ವಾಹನಕ್ಕಿಂತ ಹೆಚ್ಚಿನ ವೇಗದಲ್ಲಿ ಚಲಿಸಬೇಕಾಗುತ್ತದೆ.

Gaganyaan 1

CES ಉಡಾವಣಾ ವಾಹನದ ಮುಂಭಾಗದ ತುದಿಯಲ್ಲಿ ಇರಿಸಲಾಗಿರುತ್ತದೆ. ಇದಕ್ಕೆ ವಿಶೇಷವಾದ ಘನ ಇಂಧನ ಎಂಜಿನ್‌ಗಳನ್ನು ಅಳವಡಿಸಲಾಗುತ್ತದೆ. ಇವು ಸಾಮಾನ್ಯ ಎಂಜಿನ್‌ಗಳಿಗಿಂತ ವೇಗವಾಗಿ ಇಂಧನವನ್ನು ಬಳಸಿಕೊಂಡು ಕೆಲಸ ಮಾಡುತ್ತವೆ.

ಗಗನಯಾತ್ರಿಗಳು ಹೇಗೆ ಪಾರಾಗ್ತಾರೆ?
ಅಪಘಾತದ ಸಮಯದಲ್ಲಿ CES ಸಿಬ್ಬಂದಿ ಇರುವ ಮಾಡ್ಯೂಲ್‌ನ್ನು ಅತಿ ಹೆಚ್ಚಿನ ವೇಗವಾಗಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುತ್ತದೆ. ಬಳಿಕ ಬಹು ಹಂತದ ಪ್ಯಾರಾಚೂಟ್ ವ್ಯವಸ್ಥೆ ಮಾಡ್ಯೂಲ್‌ನ್ನು ಹಂತ ಹಂತವಾಗಿ ನಿಧಾನಗೊಳಿಸುತ್ತದೆ. ಬಳಿಕ ಸುರಕ್ಷಿತ ಸಮುದ್ರದಲ್ಲಿ ಇಳಿಸುತ್ತದೆ.

Gaganyaan mission astronauts ISRO

ಈ ವ್ಯವಸ್ಥೆಯನ್ನು ಇಂಟಿಗ್ರೇಟೆಡ್ ವೆಹಿಕಲ್ ಹೆಲ್ತ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ನೈಜ ಸಮಯದಲ್ಲಿ ಮೇಲ್ವಿಚಾರಣೆ ಮಾಡುತ್ತದೆ. ಅಗತ್ಯವಿದ್ದರೆ ಮಾತ್ರ CESನ್ನು ಸಕ್ರಿಯಗೊಳಿಸುತ್ತದೆ.

ವ್ಯೋಮಮಿತ್ರ
ಈ ಯೋಜನೆಗೂ ಮುನ್ನ, ಮಾನವನನ್ನೇ ಹೋಲುವ ವ್ಯೋಮಮಿತ್ರ ರೊಬೋಟ್‌ನ್ನು ಬಾಹ್ಯಾಕಾಶಕ್ಕೆ ಕಳಿಸಲಾಗುವುದು. ನಂತರ, ಗಗನಯಾನಿಗಳನ್ನು ಹೊತ್ತ ಗಗನನೌಕೆಯನ್ನು ಕೆಳ ಭೂ ಕಕ್ಷೆಗೆ ಉಡ್ಡಯನ ಮಾಡಲಾಗುತ್ತದೆ.

ಯೋಜನೆಯ ಕೆಲಸ 90% ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾರ್ಯ ನಡೆಯುತ್ತಿದೆ. ಈ ಯೋಜನೆಯಲ್ಲಿ ನಾವು ಯಶಸ್ಸು ಸಾಧಿಸಿದಲ್ಲಿ, ರಷ್ಯಾ, ಅಮೆರಿಕ ಹಾಗೂ ಚೀನಾ ನಂತರ. ಮಾನವನನ್ನು ಸ್ವತಂತ್ರವಾಗಿ ಬಾಹ್ಯಾಕಾಶಕ್ಕೆ ಕಳುಹಿಸಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆ ಭಾರತದದ್ದಾಗಲಿದೆ.

ಗಗನಯಾನ್‌ ಯೋಜನೆಗಾಗಿ ಭಾರತೀಯ ವಾಯುಪಡೆಯ ನಾಲ್ವರು ಪೈಲಟ್‌ಗಳು ರಷ್ಯಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

TAGGED:CESGaganyaanindiaISRO
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
38 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
38 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
56 minutes ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
60 minutes ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
1 hour ago
Chikkodi Accident
Belgaum

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?