ವಿಪರೀತ ಜ್ವರ ಹಾಗೂ ತುಂಬಾ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ ಖುಷ್ಬೂ (Khushboo) ಈಗ ಹೇಗಿದ್ದಾರೆ ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿತ್ತು. ನಿನ್ನೆಯಿಂದಲೇ ಹೈದರಾಬಾದ್ ಆಸ್ಪತ್ರೆಯ (Hospital) ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕವನ್ನು ಗಮನಿಸಿದ ಖುಷ್ಬೂ ತಮ್ಮ ಆರೋಗ್ಯದ ಅಪ್ ಡೇಟ್ ಕೊಟ್ಟಿದ್ದಾರೆ.
ವಿಪರೀತ ಜ್ವರದಿಂದ ಬಳಲಿ ಹೋಗಿದ್ದೆ. ಅಸಾಧರಣ ನೋವಿತ್ತು. ನನ್ನಿಂದ ತಡೆದುಕೊಳ್ಳಲು ಆಗದೇ ಆಸ್ಪತ್ರೆಗೆ ದಾಖಲಾದೆ. ಈಗ ಜ್ವರ ಕಡಿಮೆ ಆಗಿದೆ. ಆರೋಗ್ಯ ಸುಧಾರಿಸುತ್ತಿದೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ ಖುಷ್ಬೂ.
ಇತ್ತೀಚಿನ ದಿನಗಳಲ್ಲಿ ಖುಷ್ಬೂ ಅವರು ಜ್ವರ ಮತ್ತು ಬಾಡಿ ವೀಕ್ನೆಸ್ನಿಂದ ಬಳಲುತ್ತಿದ್ದರಂತೆ. ಈ ಬಗ್ಗೆ ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದರು. ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನನ್ನು ಕೊಲ್ಲುತ್ತಿದೆ. ಆದರೆ ನಾನು ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಎಂದು ಬರೆದುಕೊಂಡಿದ್ದಾರೆ.
ಕನ್ನಡದ ರಣಧೀರ, ಶಾಂತಿ ಕ್ರಾಂತಿ, ಹೃದಯಗೀತೆ, ಪಾಳೇಗಾರ ಸೇರಿದಂತೆ ಪರಭಾಷೆಗಳಲ್ಲೂ ನಟಿ ಖುಷ್ಬೂ ಸುಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ- ರಾಜಕೀಯ ಎರಡು ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ.