ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ.
ದಕ್ಷಿಣ ಕನ್ನಡದ ಮಸೀದಿ (Mosque) ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ಹೇಗೆ? ಅವರು ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಇದನ್ನೂ ಓದಿ: ಸಂಸತ್ಗೆ ಪ್ಯಾಲೆಸ್ತೀನ್ ಬ್ಯಾಗ್ ಹಾಕಿಕೊಂಡು ಬಂದ ಪ್ರಿಯಾಂಕಾ – ಎಲ್ಲಾ ಸುದ್ದಿಗಾಗಿ ಎಂದ ಬಿಜೆಪಿ ಸಂಸದ
ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೇ ಪುರಾವೆಗಳನ್ನು ಪರಿಶೀಲಿಸಲಾಗಿದೆಯಾ? ಈ ಬಗ್ಗೆ ವರದಿ ನೀಡಿ ಎಂದು ರಾಜ್ಯ ಸರ್ಕಾರವನ್ನು ಜಸ್ಟೀಸ್ ಪಂಕಜ್ ಮಿತ್ತಲ್, ಸಂದೀಪ್ ಮೆಹ್ತಾ ಅವರಿದ್ದ ಪೀಠ ಕೇಳಿದೆ.
ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿಗೆ ನುಗ್ಗಿದ್ದ ಕೀರ್ತನ್ ಮತ್ತು ಸಚಿನ್, ಜೈ ಶ್ರೀರಾಮ್ ಎಂದು ಕೂಗಿ ಬ್ಯಾರಿಗಳನ್ನು ಶಾಂತಿಯಿಂದ ಬದುಕಲು ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾರೆ ಅಂತಾ ಆರೋಪಿಸಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಇಬ್ಬರನ್ನು ಬಂಧಿಸಿದ್ದರು. ಆದರೆ, ಪ್ರಕರಣ ರದ್ದು ಕೋರಿ ಇಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಮಾನ್ಯ ಮಾಡಿದ ನಾಗಪ್ರಸನ್ನ ಅವರಿದ್ದ ಪೀಠ, ಕೇಸ್ ರದ್ದು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈದರ್ ಆಲಿ ಎನ್ನುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜನವರಿಯಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಆನೆ ದಾಳಿ ತಡೆಗೆ ಕಾಂಪಾ ಅನುದಾನ – ಡಾ. ಸಿ.ಎನ್.ಮಂಜುನಾಥ್ ಮನವಿ