Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಯುಗಾದಿ ಹಬ್ಬವನ್ನು ಬೇರೆ ಬೇರೆ ರಾಜ್ಯಗಳಲ್ಲಿ ಹೇಗೆಲ್ಲಾ ಆಚರಿಸುತ್ತಾರೆ?

Public TV
Last updated: March 30, 2025 10:17 am
Public TV
Share
2 Min Read
Ugadi 1 1
SHARE

ಯುಗಾದಿ ಎಂದರೆ ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷದ ಮೊದಲ ದಿನ. ಯುಗಾದಿ (Ugadi) ಎಂಬ ಪದವು ಸಂಸ್ಕೃತದಿಂದ ಬಂದಿದೆ. ಹಿಂದೂಗಳು ಈ ದಿನವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯುಗಾದಿಯು ಒಂದು ಪ್ರಮುಖ ವಿಶ್ವ ಚಕ್ರದ ಆರಂಭವನ್ನು ಸೂಚಿಸುತ್ತದೆ. ಯುಗಾದಿಯನ್ನು ವಿಶೇಷವಾಗಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಜನರು ಆಚರಿಸುತ್ತಾರೆ.

Ugadi 1

ಕರ್ನಾಟಕದಲ್ಲಿ ಯುಗಾದಿ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಎಂದು ಆಚರಿಸಿದರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ (Gudi Padwa), ತಮಿಳುನಾಡಿನಲ್ಲಿ ಪುತಂಡು, ಪಂಜಾಬ್‌ನಲ್ಲಿ ಬೈಸಾಕಿ, ಕೇರಳದಲ್ಲಿ ವಿಷು ಎಂದು ಆಚರಿಸಲಾಗುತ್ತದೆ. ಇದನ್ನೂ ಓದಿ: ಹೊಸ ವರುಷ.. ಹೊಸ ಹರುಷದ ಯುಗಾದಿ ಮತ್ತೆ ಬಂದಿದೆ

ಆಂಧ್ರಪ್ರದೇಶ ಮತ್ತು ತೆಲಂಗಾಣದ ಯುಗಾದಿ

ಪೂಜೆ ಮತ್ತು ಅಭ್ಯಂಗ ಸ್ನಾನದೊಂದಿಗೆ ಪ್ರಾರಂಭವ ಹಬ್ಬದ ಆಚರಣೆ. ಮನೆಗಳನ್ನು ಸ್ವಚ್ಛಗೊಳಿಸಿ ಮಾವಿನ ಎಲೆ ತೋರಣ ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಮುಂದೆ ಪಂಚಾಂಗ ಓದುವಿಕೆಯೊಂದಿಗೆ ವರ್ಷದ ಒಳಿತುಗಳ ಬಗ್ಗೆ ತಿಳಿಯುತ್ತಾರೆ. ಜೀವನದ ವಿವಿಧ ಅನುಭವಗಳನ್ನು ಪ್ರತಿನಿಧಿಸುವ ಆರು ರುಚಿಗಳನ್ನು ಹೊಂದಿರುವ ʻಯುಗಾದಿ ಪಚಡಿʼ ಎಂಬ ಸಾಂಕೇತಿಕ ಖಾದ್ಯವನ್ನು ತಯಾರಿಸಲಾಗುತ್ತದೆ. ಇದನ್ನೂ ಓದಿ: ಯುಗಾದಿ ಸ್ಪೆಷಲ್;‌ ಆರೋಗ್ಯಕರ ಪಚಡಿ ರೆಸಿಪಿ!

ಕರ್ನಾಟಕದ ಯುಗಾದಿ

ಯುಗಾದಿಯಂದು ಪ್ರಾರ್ಥನೆ ಮತ್ತು ಎಣ್ಣೆ ಸ್ನಾನದೊಂದಿಗೆ ದಿನವನ್ನು ಆರಂಭಿಸುತ್ತಾರೆ. ನಂತರ ಬೇವು ಮತ್ತು ಬೆಲ್ಲದ ಸೇವಿಸುತ್ತಾರೆ. ಇದು ಜೀವನದ ಸಿಹಿ ಮತ್ತು ಕಹಿ ಕ್ಷಣಗಳನ್ನು ಸಂಕೇತಿಸುತ್ತದೆ. ಅಂದು ದೇವಾಲಯಗಳಿಗೆ ತೆರಳಿ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ.

Bevu bella 1

ಮಹಾರಾಷ್ಟ್ರ ಮತ್ತು ಗೋವಾದ ಗುಡಿ ಪಾಡ್ವ

ವಸಂತ ಋತುವಿನ ಆಗಮನ ಮತ್ತು ರಬಿ ಬೆಳೆಗಳ ಕೊಯ್ಲಿಗೆ ಸೂಚಿಸುವ ಹಬ್ಬದಂದು ಮನೆಗಳಲ್ಲಿ ಗುಡಿ ಅಂದರೆ ಧ್ವಜ ಹಾರಿಸುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ದುಷ್ಟಶಕ್ತಿಗಳನ್ನು ದೂರವಿಡುತ್ತದೆ ಎಂದು ನಂಬಲಾದ ಗುಡಿಯನ್ನು ಉದ್ದವಾದ ಬಿದಿರಿನ ಕೋಲಿನ ಮೇಲೆ ಹಳದಿ, ಹಸಿರು ಅಥವಾ ಕೆಂಪು ಬಣ್ಣದ ರೇಷ್ಮೆ ಬಟ್ಟೆಯಿಂದ ಕಟ್ಟಲಾಗುತ್ತದೆ. ಗುಡಿಯ ಮೇಲೆ ಬೇವಿನ ಎಲೆ, ಮಾವಿನ ಎಲೆ, ಹೂವು ಮತ್ತು ಸಕ್ಕರೆ ಹರಳುಗಳ ಹಾರವನ್ನು ಹಾಕಿ, ತಲೆಕೆಳಗಾದ ಕಂಚು, ಬೆಳ್ಳಿ ಅಥವಾ ತಾಮ್ರದ ಕಲಶದಿಂದ ಅಲಂಕರಿಸುವ ಮೂಲಕ ಆಚರಿಸುತ್ತಾರೆ. ಇದನ್ನೂ ಓದಿ: ಯುಗಾದಿ ವಿಶೇಷ – ಏನಿದು ಗುಡಿಪಾಡ್ವ? ಯಾಕೆ ಈ ಆಚರಣೆ?

Gudi Padwa 1

ತಮಿಳುನಾಡಿನ ಪುತಂಡು

ತಮಿಳರು ಹೊಸ ವರ್ಷವನ್ನು ಸ್ವಾಗತಿಸಲು ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಹಳೆಯ ವಸ್ತುಗಳನ್ನು ಎಸೆದು, ಮನೆಯ ಮುಂದೆ ರಂಗೋಲಿಯನ್ನು ಬಿಡಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ʻಮಾಂಗ ಪಚಡಿʼ ಎಂಬ ವಿಶೇಷ ಪದಾರ್ಥವನ್ನು ತಯಾರಿಸುತ್ತಾರೆ. 

ಕೇರಳದ ವಿಷು

ಕೇರಳದಲ್ಲಿ ಈ ಹಬ್ಬದಂದು ದೇವರ ಕೋಣೆಯಲ್ಲಿ ʻವಿಷು ಕಣಿʼ ಇಡುವ ಸಂಪ್ರದಾಯವಿದೆ. ವಿಷುಕಣಿ ವಿಷು ಹಬ್ಬದ ಪ್ರಮುಖ ಭಾಗವಾಗಿದೆ. ವಿಷು ಹಬ್ಬದ ಹಿಂದಿನ ದಿನವೇ ಮನೆಯನ್ನು ಶುಚಿಗೊಳಿಸಿ ಶೃಂಗಾರ ಮಾಡುತ್ತಾರೆ. ದೇವರ ಕೋಣೆಯಲ್ಲಿ ಕಣಿ ಕಾಣಲು ಬೇಕಾದ ವಸ್ತುಗಳನ್ನು ತಯಾರು ಮಾಡುತ್ತಾರೆ. ದೇವರ ವಿಗ್ರಹ, ಫಲ ವಸ್ತುಗಳು, ನವ ಧಾನ್ಯ, ಹೊಸ ಬಟ್ಟೆ, ಧನ ಇತ್ಯಾದಿಯನ್ನು ಹೊಸ ಮಡಿಕೆಯಲ್ಲಿ ಅಥವಾ ಉರುಳಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಹಾಗೂ ಕನ್ನಡಿಯನ್ನು ಇಡುತ್ತಾರೆ. ಇದನ್ನೂ ಓದಿ: ಬೇವು – ಬೆಲ್ಲ ಸಿಹಿ, ಕಹಿಯ ಸಮಾನ ಹಂಚಿಕೆ ಬಾಳಿಗೊಂದು ಸವಿ ಪಾಠ

Vishu

ಈ ರೀತಿಯಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆಯಾದ ಆಚರಣೆಗಳ ಮೂಲಕ ಯುಗಾದಿ ಹಬ್ಬವನ್ನು ಜನರು ಸಂಭ್ರಮದಿಂದ ಆಚರಿಸುತ್ತಾರೆ. ನವ ಸಂವತ್ಸರದ ಯುಗಾದಿಯು ಕೆಡುಕನ್ನು ಹೋಗಲಾಡಿಸಿ ಒಳಿತನ್ನು ತರುತ್ತದೆ ಎಂಬುದು ಜನರ ನಂಬಿಕೆಯಾಗಿದೆ.

TAGGED:gudi padwaUgadi FestivalVishuಗುಡಿ ಪಾಡ್ವಯುಗಾದಿ ಹಬ್ಬವಿಷು
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
35 minutes ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
54 minutes ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
2 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
3 hours ago

You Might Also Like

C T Ravi
Bengaluru City

ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

Public TV
By Public TV
23 minutes ago
RCB Player Tim David
Bengaluru City

ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

Public TV
By Public TV
42 minutes ago
Raichuru Theft Arrest
Districts

ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್ – ಚಿನ್ನಾಭರಣ ಸೇರಿ 7.89 ಲಕ್ಷ ಮೌಲ್ಯದ ವಸ್ತು ಜಪ್ತಿ

Public TV
By Public TV
43 minutes ago
Parappana Agrahara Jail
Bengaluru City

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಓರ್ವನಿಗೆ ಗಂಭೀರ ಗಾಯ

Public TV
By Public TV
59 minutes ago
Kothur Manjunath
Districts

ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ

Public TV
By Public TV
1 hour ago
Nagamohan Das
Bengaluru City

ಬೆಂಗ್ಳೂರಲ್ಲಿ ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು? – ನ್ಯಾ.ನಾಗಮೋಹನ್ ದಾಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?