Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಹಣಕಾಸು ಬಜೆಟ್ ತಯಾರಾಗೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲಿ ಹಣಕಾಸು ಬಜೆಟ್ ತಯಾರಾಗೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ

Latest

ಭಾರತದಲ್ಲಿ ಹಣಕಾಸು ಬಜೆಟ್ ತಯಾರಾಗೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ

Public TV
Last updated: February 1, 2017 9:15 am
Public TV
Share
4 Min Read
SHARE

2017- 18ನೇ ಸಾಲಿನ ಬಜೆಟ್‍ನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಪ್ರತಿವರ್ಷಫೆಬ್ರವರಿ ಕೊನೆಯಲ್ಲಿ ಬಜೆಟ್ ಮಂಡನೆ ಆಗುತಿತ್ತು.  ಈ ಬಾರಿ  ಮುಂಚಿತವಾಗಿಯೇ ಬಜೆಟ್ ಮಂಡನೆಯಾಗುತ್ತಿದೆ. ಹೀಗಾಗಿ ಇಲ್ಲಿ ಹಣಕಾಸು ಬಜೆಟ್ ಸಿದ್ಧತೆ ಹೇಗೆ ನಡೆಯುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.

5 ತಿಂಗಳಿನಿಂದ ಸಿದ್ಧತೆ: ಬಜೆಟ್ ಮಂಡನೆಗೆ 5 ತಿಂಗಳು ಇರುವಂತೆಯೇ ಸಿದ್ಧತೆಗಳು ಆರಂಭವಾಗುತ್ತದೆ. ಸೆಪ್ಟೆಂಬರ್‍ನಲ್ಲಿ ಹಣಕಾಸು ಸಚಿವಾಲಯ ಕೇಂದ್ರ ಸರ್ಕಾರದ ಸಚಿವಾಲಯಗಳಿಗೆ ಟಿಪ್ಪಣಿಯೊಂದನ್ನು ಕಳುಹಿಸಿ ಖರ್ಚು ವೆಚ್ಚಗಳ ವಿವರ ಪಡೆದುಕೊಳ್ಳುತ್ತದೆ. ಇದರೊಂದಿಗೆ ಮುಮದಿನ ವರ್ಷದ ಹಣಕಾಸು ಲೆಕ್ಕಾಚಾರದ ಅಂದಾಜನ್ನೂ ಪಡೆದುಕೊಳ್ಳುತ್ತದೆ.

ನಿರಂತರ ಸಭೆ: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಖರ್ಚುವೆಚ್ಚಗಳ ಕಾರ್ಯದರ್ಶಿ, ಕೆಲವು ಇಲಾಖೆಗಳ ಹಣಕಾಸು ಸಲಹೆಗಾರರ ಜತೆ ಸಭೆಗಳನ್ನು ನಡೆಸಿ ಇಲಾಖಾವಾರು ವೆಚ್ಚಗಳ ಪರಿಶೀಲನೆ ನಡೆಸಲಾಗುತ್ತದೆ. ಇದೇ ಸಂದರ್ಭದಲ್ಲಿ ಮುಂದಿನ ವರ್ಷದ ಪ್ರಸ್ತಾವನೆಯ ಕುರಿತಂತೆಯೂ ಚರ್ಚೆ ನಡೆಸಲಾಗುತ್ತದೆ. ಹೀಗೆ ಸಿಕ್ಕ ಖರ್ಚು ವೆಚ್ಚದ ವಿವರಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ತಂಡಕ್ಕೆ ಒಪ್ಪಿಸಲಾಗುತ್ತದೆ. ಬಳಿಕ ಆದಾಯ, ಹೊಸ ಪ್ರಸ್ತಾವನೆ, ಸುಂಕ ಏರಿಕೆಯ ಮೂಲಕ ಹೆಚ್ಚಿನ ನಿಧಿ ಸಂಗ್ರಹಣೆ, ಹಣದ ಕೊರತೆ ಮತ್ತು ಇನ್ನಿತರ ಅಂಕಿ ಸಂಖ್ಯೆಗಳ ಕುರಿತಂತೆ ತಂಡದ ಸದಸ್ಯರು ಚರ್ಚೆ ನಡೆಸುತ್ತಾರೆ. ಈ ಸಭೆಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ ಮತ್ತು ಕೇಂದ್ರೀಯ ನೇರ ಅಬಕಾರಿ ತೆರಿಗೆ ಮಂಡಳಿ ಈ ಎರಡೂ ಸಂಸ್ಥೆಗಳನ್ನೂ ಸಭೆಗೆ ಕರೆಯಲಾತ್ತದೆ.

ಆರ್ಥಿಕ ಸಮೀಕ್ಷೆ ಆರಂಭ: ಬಜೆಟ್‍ನ ಪ್ರಧಾನ ತಂಡ ಚರ್ಚೆ ನಡೆಸಿದ ವಿಷಯದ ಮೇಲೆ ಬಜೆಟ್ ಪ್ರಸ್ತಾವನೆಗಳ ಒಂದು ನೀಲ ನಕ್ಷೆಯನ್ನು ರೆಡಿ ಮಾಡಲಾಗುತ್ತದೆ. ಆದರೆ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಈ ನೀಲ ನಕ್ಷೆಯ ಪ್ರತಿಗಳನ್ನು ಹಿರಿಯ ಅಧಿಕಾರಿಗಳು ನಾಶಪಡಿಸುತ್ತಾರೆ. ಬಳಿಕ ನವೆಂಬರ್ ಅಂತ್ಯಕ್ಕಾಗುವಾಗ ಕೆಲ ಪ್ರಮುಖ ಸಿಬ್ಬಂದಿಗಳಿಗೆ ಮಾತ್ರ ಹಣಕಾಸು ಸಚಿವಾಲಯದ ಕಚೇರಿಯ ಒಳಗಡೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಾತ್ರವಲ್ಲದೇ ಕಚೇರಿಯ ಸುತ್ತ ಗುಪ್ತಚರ ಸಂಸ್ಥೆಗೆ ಒಪ್ಪಿಸಲಾಗುತ್ತದೆ. ಈ ವೇಳೆ ಮುಖ್ಯ ಆರ್ಥಿಕ ಸಲಹೆಗಾರರ ಮೇಲುಸ್ತುವಾರಿಯಲ್ಲಿ ಸಮೀಕ್ಷೆಯ ಕಾರ್ಯವನ್ನು ನಡೆಸಲಾಗುತ್ತದೆ. ಈ ಮೂಲಕ ಬಜೆಟ್ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯುತ್ತದೆ.

ಅಂಕಿ ಅಂಶ ತಯಾರಿ: ಹಣಕಾಸು ಸಚಿವಾಲಯ, ನೀತಿ ಆಯೋಗ ಮತ್ತು ಇತರೆ ಸಚಿವಾಲಯಗಳ ಅಧಿಕಾರಿಗಳು ಸಭೆ ನಡೆಸಿ ಬಜೆಟ್ ಅಂಕಿ ಅಂಶಗಳನ್ನು ತಯಾರಿಸುತ್ತಾರೆ. ಖರ್ಚುಗಳನ್ನು ಆಧಾರಿಸಿ ಹಣಕಾಸು ಸಚಿವಾಲಯವು ಕೆಲವೊಂದು ಮಾರ್ಗಸೂಚಿಯನ್ನು ಪ್ರಕಟಿಸುತ್ತದೆ. ಇದಕ್ಕೆ ಅನುಗುಣವಾಗಿ ವಿವಿಧ ಸಚಿವಾಲಯಗಳು ಬೇಡಿಕೆಯನ್ನು ಸಲ್ಲಿಸುತ್ತವೆ. ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಬಜೆಟ್ ವಿಭಾಗವು ಇದನ್ನು ಸಿದ್ಧಪಡಿಸುತ್ತದೆ.

budget team
2017ರ ಬಜೆಟ್ ನ್ನು ತಯಾರಿಸಿದ ತಂಡದ ಜೊತೆ ಹಣಕಾಸು ಸಚಿವ ಅರುಣ್ ಜೇಟ್ಲಿ

ಪ್ರಧಾನಿ ಎಂಟ್ರಿ: ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಪ್ರಧಾನಿ ಬಜೆಟ್‍ನಲ್ಲಿ ತಮ್ಮನ್ನೂ ತೊಡಗಿಸಿಕೊಳ್ಳುತ್ತಾರೆ. ಹಣಕಾಸು ಸ್ಥಿತಿಗತಿ, ಹೊಸ ಯೋಜನೆಗಳು, ಖರ್ಚುವೆಚ್ಚಗಳಿಗೆ ನೀಡಬೇಕಾದ ಆದ್ಯತೆ, ಹೆಚ್ಚುವರಿ ಆದಾಯ ಕ್ರಮಗಳು ಹೀಗೆ ಬಜೆಟ್‍ನ ರೂಪುರೇಷೆಗಳ ಕುರಿತಂತೆ ಹಣಕಾಸು ಸಚಿವಾಲಯದ ಜತೆ ಪ್ರಧಾನಿ ಚರ್ಚೆ ನಡೆಸುತ್ತಾರೆ. ಪ್ರಧಾನಿ ಮತ್ತು ಹಣಕಾಸು ಸಚಿವರ ಮಧ್ಯೆ ಬಜೆಟ್ ಕುರಿತಂತೆ ಹಲವು ಸುತ್ತಿನ ಮಾತುಕತೆಗಳು ನಡೆಯುತ್ತವೆ.

ಕರಡು ಬಜೆಟ್ ಮುದ್ರಣ: ಇನ್ನು ಬಜೆಟ್‍ಗೆ ಕೆಲವೇ ವಾರಗಳು ಬಾಕಿಯಿರುವ ವೇಳೆಯಲ್ಲಿ ಕಡತಗಳನ್ನು ಸಂಗ್ರಹ ಮಾಡಲಾಗುತ್ತದೆ. ಇಲ್ಲಿಯವರೆಗೆ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ವಿವಿಧ ಸಚಿವಾಲಯಗಳು ನೀಡಿದ ಅಂಕಿ-ಅಂಶಗಳನ್ನು ಆಧರಿಸಿ ರೂಪಿಸಿದ ಕರಡು ಬಜೆಟ್ ಪ್ರತಿಯನ್ನು ಹಣಕಾಸು ಸಚಿವಾಲಯದಲ್ಲಿರುವ ಮುದ್ರಣಾಲಯಕ್ಕೆ ಕಳುಹಿಸಲಾಗುತ್ತಿತ್ತು. ಆದ್ರೆ ಈ ಬಾರಿ ಫೆಬ್ರವರಿ ಮೊದಲ ವಾರದಲ್ಲೇ ಬಜೆಟ್ ಮಂಡನೆಯಾಗುವುದರಿಂದ ಜನವರಿ ತಿಂಗಳಲ್ಲೇ ಮುದ್ರಣಕ್ಕೆ ಕಳುಹಿಸಲಾಗಿತ್ತು.

budget halwa 2

ಸಿಬ್ಬಂದಿಗೆ ಗೃಹಬಂಧನ!: ಬಜೆಟ್ ಪ್ರತಿ ಮುದ್ರಣಕ್ಕೆ ಕಳುಹಿಸುವ ಮೊದಲು ಹಲ್ವಾ ಕಾಯಿಸುವ ಸಂಪ್ರದಾಯವಿದೆ. ಹಣಕಾಸು ಸಚಿವರು ನಾರ್ತ್ ಬ್ಲಾಕ್‍ನಲ್ಲಿರುವ ಕಚೇರಿಯಲ್ಲಿ ದೊಡ್ಡ ಕಡಾಯಿಯಲ್ಲಿ ಹಲ್ವಾ ಕಾಯಿಸುತ್ತಾರೆ. ಕೆಲವು ತಿಂಗಳಿನಿಂದ ಬಜೆಟ್ ತಯಾರಿಸಿದ ಸಿಬ್ಬಂದಿ ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ. ಬಜೆಟ್ ಅಧಿವೇಶನಕ್ಕೆ ಅಂದಾಜು ಹತ್ತು ದಿನ ಮೊದಲು ಈ ಕಾರ್ಯಕ್ರಮ ನಡೆಯುತ್ತದೆ.

ಬಜೆಟ್ ಮುದ್ರಣದ ವೇಳೆ ಮುದ್ರಣಾಲಯದಲ್ಲಿ ಕಾರ್ಯನಿರ್ವಹಿಸಿರುವ ಸಿಬ್ಬಂದಿಗೆ ಗೃಹ ಬಂಧನ ವಿಧಿಸಲಾಗುತ್ತದೆ. ಹಣಕಾಸು ಸಚಿವಾಲಯ ಅಧಿಕಾರಿಗಳು, ಹಣಕಾಸು ಮಸೂದೆ ಮತ್ತು ಕಾರ್ಯಸೂಚಿ ಮಸೂದೆಯನ್ನು ಸಿದ್ಧಪಡಿಸಿದ ಕಾನೂನು ಸಚಿವಾಲಯದ ಸಿಬ್ಬಂದಿಯ ಫೋನ್, ಇಮೇಲ್ ವ್ಯವಹಾರ ಬಂದ್ ಆಗುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾತ್ರ ಮನೆಗೆ ತೆರಳು ಅನುಮತಿ ನೀಡಲಾಗುತ್ತದೆ. ಬಜೆಟ್ ಮಂಡನೆಯಾದ ಬಳಿಕವಷ್ಟೇ ಸಿಬ್ಬಂದಿ ಮನೆಗೆ ತೆರಳುತ್ತಾರೆ.

ಬಜೆಟ್ ಮಂಡನೆ ಹೇಗೆ?: ಬಜೆಟ್‍ನ ದಿನದಂದು ಹಣಕಾಸು ಸಚಿವರು ಮೊದಲು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬಜೆಟ್‍ಗೆ ಅವರಿಂದ ಸಹಿ ಪಡೆದುಕೊಳ್ಳುತ್ತಾರೆ. ಬಳಿಕ ಸಂಪುಟ ಸಭೆ ನಡೆಸಲಾಗುತ್ತದೆ. ಈ ವೇಳೆ ಹಣಕಾಸು ಸಚಿವರು ಬಜೆಟ್ ನಲ್ಲಿರುವ ಅಂಶಗಳ ಕುರಿತಂತೆ ಸಂಕ್ಷಿಪ್ತ ಮಾಹಿತಿ ನೀಡುತ್ತಾರೆ. ಆದರೆ, ತೆರಿಗೆ ಪ್ರಸ್ತಾವನೆಗಳ ಕುರಿತಂತೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ. 11 ಗಂಟೆಗೆ ಬಜೆಟ್ ಮಂಡಿಸಲಾಗುತ್ತೆ. ಇದಕ್ಕೆ ಕೆಲವೇ ನಿಮಿಷಗಳಷ್ಟೇ ಬಾಕಿ ಇರುವಂತೆ ಪ್ರಧಾನಿ ಅವರು ಹಣಕಾಸು ಸಚಿವರನ್ನು ಲೋಕಸಭೆಗೆ ಕರೆತಂದು ಆಸನದಲ್ಲಿ ಕೂರಿಸುತ್ತಾರೆ. ಬಳಿಕ ಸ್ಪೀಕರ್ ಅವರಿಂದ ಅನುಮತಿ ಪಡೆದು ಹಣಕಾಸು ಸಚಿವರು ಬಜೆಟ್ ಪ್ರತಿಯನ್ನು ಓದಲು ಆರಂಭಿಸುತ್ತಾರೆ.

ಈ ಬಾರಿ 1 ತಿಂಗಳು ಮೊದಲೇ ಯಾಕೆ?: ಇಲ್ಲಿಯವರೆಗೆ ಫೆಬ್ರವರಿ ಕೊನೆಯ ದಿನಾಂಕದಂದು ಬಜೆಟ್ ಮಂಡನೆಯಾಗುತಿತ್ತು. ಆದರೆ ಈ ಬಜೆಟ್‍ಗೆ ಮಾರ್ಚ್ 31ರೊಳಗೆ ಸಂಸತ್ತಿನ ಅನುಮೋದನೆ ಸಿಗುತ್ತಿರಲಿಲ್ಲ. ಹೀಗಾಗಿ ಅಲ್ಲಿಯವರೆಗೆ ಎರಡು ತಿಂಗಳ ಅವಧಿಗೆ ಲೇಖಾನುದಾನಕ್ಕೆ ಒಪ್ಪಿಗೆ ಪಡೆಯಬೇಕಿತ್ತು. ಇದಾದ ಬಳಿಕ ಅನುಮೋದನೆ ಪಡೆದು ಪೂರ್ಣ ಪ್ರಮಾಣದಲ್ಲಿ ಬಜೆಟ್ ಅನುಷ್ಠಾನ ಮಾಡುವ ವೇಳೆ ಮೂರು, ನಾಲ್ಕು ತಿಂಗಳು ಕಳೆದು ಹೋಗುತಿತ್ತು. ಈ ಲೇಖಾನುದಾನ ಪಡೆಯುವುದನ್ನು ತಪ್ಪಿಸಲು ಮತ್ತು ಏಪ್ರಿಲ್‍ನಿಂದ ಆರಂಭವಾಗುವ ಹಣಕಾಸು ವರ್ಷದಿಂದಲೇ ಬಜೆಟ್ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಈ ಬಾರಿ ಜನವರಿ 31ರಿಂದ ಬಜೆಟ್ ಅಧಿವೇಶನ ನಡೆಸಲು ಮುಂದಾಗಿದೆ. ಈ ವರ್ಷದಿಂದ ರೈಲ್ವೇ ಬಜೆಟ್ ಪ್ರತ್ಯೇಕವಾಗಿ ಮಂಡನೆಯಾಗುವುದಿಲ್ಲ. ಹಣಕಾಸು ಬಜೆಟ್ ನಲ್ಲೇ ರೈಲ್ವೇ ಬಜೆಟ್ ವಿಲೀನವಾಗಲಿದೆ. ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ 92 ವರ್ಷಗಳ ಪದ್ಧತಿ ಈ ಹಣಕಾಸು ವರ್ಷದಲ್ಲಿ ಕೊನೆಯಾಗಲಿದೆ.

TAGGED:arun jetlybudgetbudget 2017halwapublictvrailway budgetಅರುಣ್ ಜೇಟ್ಲಿಪಬ್ಲಿಕ್ ಟಿವಿಬಜೆಟ್ರೆಲ್ವೇ ಬಜೆಟ್ಹಣಕಾಸು ಬಜೆಟ್ಹಲ್ವಾ ತಯಾರಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
5 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
16 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
16 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
38 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
41 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?