Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?

Latest

ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ಕಾಡಾನೆಗಳ ಸಾವಿಗೆ ರಾಗಿ ಕಾರಣವೇ?

Public TV
Last updated: November 12, 2024 5:00 pm
Public TV
Share
3 Min Read
How Kodo millet consumption killed 10 elephants in Madhya Pradesh
SHARE

ಮಧ್ಯಪ್ರದೇಶದ (Madhya Pradesh) ಬಾಂಧವಗಢ (Bandhavgarh) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನಾರೋಗ್ಯದಿಂದ ಇತ್ತೀಚೆಗೆ ಮೂರು ದಿನಗಳ ಅಂತರದಲ್ಲಿ 11 ಆನೆಗಳು (Elephant) ಸಾವನ್ನಪ್ಪಿವೆ. ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಕಿತೋಳಿ ವ್ಯಾಪ್ತಿಯ ಸಂಖಾನಿ ಮತ್ತು ಬಾಕೇಲಿಯಲ್ಲಿ ನಾಲ್ಕು ಕಾಡಾನೆಗಳು ಮೃತಪಟ್ಟಿವೆ. ಇನ್ನೂ ಎರಡು ದಿನದ ಅಂತರದಲ್ಲಿ 6 ಆನೆಗಳು ಸಾವನ್ನಪ್ಪಿದ್ದವು. ಇನ್ನೊಂದು ಆನೆ ಭಾನುವಾರ ಚಿಕಿತ್ಸೆ ವೇಳೆ ಸಾವನ್ನಪ್ಪಿದೆ. 

ಮೃತಪಟ್ಟ 11 ಆನೆಗಳು 13 ಆನೆಗಳ ಹಿಂಡಿನ ಭಾಗವಾಗಿದ್ದವು. ಸಾವಿಗೀಡಾದ ಆನೆಗಳಲ್ಲಿ ಒಂದು ಗಂಡು ಆನೆಯಾಗಿದ್ದು, ಉಳಿದಂತೆ ಎಲ್ಲಾ ಹೆಣ್ಣು ಆನೆಗಳಾಗಿವೆ. ಗುಂಪಿನಲ್ಲಿ ಉಳಿದ 2 ಆನೆಗಳು ಆರೋಗ್ಯವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆನೆಗಳಿಂದ ಸಂಗ್ರಹಿಸಲಾದ ಅಂಗಾಂಗಗಳ ಮಾದರಿಗಳನ್ನು ಉತ್ತರ ಪ್ರದೇಶದ ಐಸಿಎಆರ್-ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಮತ್ತು ಮಧ್ಯಪ್ರದೇಶದ ಸಾಗರದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೀಸಲು ಸಿಬ್ಬಂದಿ ಸಾವನ್ನಪ್ಪಿದ ಆನೆಗಳ ಬಗ್ಗೆ ಮಾಹಿತಿ ನೀಡಿ, ಆನೆಗಳು ಸಾಯುವ ಮೊದಲು ನೆಲಕ್ಕೆ ಬಿದ್ದು ನಡುಗುತ್ತಿದ್ದವು ಎಂದು ತಿಳಿಸಿದ್ದರು. 

ಆನೆಗಳ ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಆನೆಗಳ ಸಾವಿಗೆ ಕೊಡೋ ರಾಗಿ ಕಾರಣ ಎಂದು ಶಂಕಿಸಲಾಗಿದೆ. ಕೊಡೋ ರಾಗಿ ದೇಹದಲ್ಲಿ ಮೈಕೋಟಾಕ್ಸಿನ್‌ಗಳನ್ನು ಉತ್ಪಾದಿಸುತ್ತದೆ. ಇದು ಸೈಕ್ಲೋಪಿಯಾಜೋನಿಕ್ ಆಮ್ಲದ ಉತ್ಪಾದನೆಗೆ ಕಾರಣವಾಗುತ್ತದೆ. ಇದು ದೇಹದಲ್ಲಿ ವಿಷವನ್ನು ಉಂಟುಮಾಡುತ್ತದೆ ಎಂದು ಮಧ್ಯಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ. 

Kodo millet

ಈ ಬಗ್ಗೆ ಮಾಹಿತಿ ಕಲೆ ಹಾಕಲು ಅರಣ್ಯ ಅಧಿಕಾರಿಗಳು, ಆನೆಗಳು ಮೃತಪಟ್ಟ ಸಮೀಪದ ಹೊಲಗಳಿಂದ ಸಂಗ್ರಹಿಸಿದ ‘ಕೊಡೋ ರಾಗಿ’ ಮತ್ತು ಆನೆಗಳ ಹೊಟ್ಟೆಯಿಂದ ಸಂಗ್ರಹಿಸಿದ ಮಾದರಿಯನ್ನು ಐಸಿಎಆರ್- ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ, ಉತ್ತರಪ್ರದೇಶ ಮತ್ತು ಸಾಗರದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇನ್ನೂ, ಮೂರು ದಿನಗಳಲ್ಲಿ 11 ಆನೆಗಳು ಸಾವನ್ನಪ್ಪಿರುವುದು ದೇಶದಲ್ಲಿ ಇದೇ ಮೊದಲ ನಿದರ್ಶನ ಎಂದು ಕೆಲವು ವನ್ಯಜೀವಿ ತಜ್ಞರು ಹೇಳಿದ್ದಾರೆ.

ಆನೆಗಳಿಗೆ ವಿಷಪ್ರಾಶನ?

ಮಧ್ಯ ಪ್ರದೇಶ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ವರದಿಗಳು, ವಿಷ ಪ್ರಾಶನದಿಂದ ಆನೆಗಳು ಸಾವನ್ನಪ್ಪಿರುವ ಸಾಧ್ಯತೆಯ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದಾರೆ. 

ಕೊಡೋ ರಾಗಿ ಎಂದರೇನು? 

ಕೊಡೋ ರಾಗಿ (Paspalum scrobiculatum) ಅನ್ನು ಭಾರತದಲ್ಲಿ ಕೊಡ್ರ ಮತ್ತು ವರಗು ಎಂದೂ ಕರೆಯಲಾಗುತ್ತದೆ. ಈ ಬೆಳೆಯನ್ನು ಭಾರತ, ಪಾಕಿಸ್ತಾನ, ಫಿಲಿಪೈನ್ಸ್, ಇಂಡೋನೇಷ್ಯಾ, ವಿಯೆಟ್ನಾಂ, ಥೈಲ್ಯಾಂಡ್ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಬೆಳೆಯಲಾಗುತ್ತದೆ.

ಈ ಕೊಡೋ ರಾಗಿ ಸೇವಿಸಿ 1983ರಲ್ಲಿ ಆನೆಗಳು ಮೃತಪಟ್ಟ ಬಗ್ಗೆ ವರದಿ ಇದೆ. ಇನ್ನೂ 1922 ರಲ್ಲಿ ಉತ್ತರ ಪ್ರದೇಶದಲ್ಲಿ ಕೊಡೋ ರಾಗಿ ಸೇವನೆಯಿಂದ ಕೆಲವು ವ್ಯಕ್ತಿಗಳಲ್ಲಿ ವಿಷದ ಅಂಶ ಪತ್ತೆ ಆಗಿತ್ತು. ಇದಕ್ಕೆ ರಾಗಿಯಲ್ಲಿನ ಮೈಕೋಟಾಕ್ಸಿನ್ ಸೈಕ್ಲೋಪಿಯಾಜೋನಿಕ್ ಆ್ಯಸಿಡ್(CPA) ಎಂಬ ಅಂಶ ಕಾರಣ ಎಂದು ವರದಿಯಾಗಿತ್ತು. 

ಕೊಡೋ ರಾಗಿ ತೇವಾಂಶವುಳ್ಳ ಸ್ಥಿತಿಯಲ್ಲಿ ಕೊಯ್ಲು ಮಾಡುವಾಗ ಶಿಲೀಂದ್ರಗಳ ಸೋಂಕು ಹೆಚ್ಚಾಗಿ ಇದು ವಿಷಕಾರಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಕೆಲವು ಪ್ರಕರಣಗಳಲ್ಲಿ ಮನುಷ್ಯರು ಮತ್ತು ಪ್ರಾಣಿಗಳಲ್ಲೂ ಒಂದೇ ರೀತಿಯ ರೋಗಲಕ್ಷಣ ಪತ್ತೆಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. 

ಕೊಡೋ ರಾಗಿ ಏಕೆ ವಿಷವಾಗುತ್ತದೆ? 

ಮುಖ್ಯವಾಗಿ ಒಣ ಮತ್ತು ಅರೆ-ಶುಷ್ಕ ಪ್ರದೇಶಗಳಲ್ಲಿ ಕೊಡೋ ರಾಗಿ ಬೆಳೆಯಲಾಗುತ್ತದೆ. ಈ ರಾಗಿ ಬ್ಯಾಕ್ಟೀರಿಯಾ ಮತ್ತು ಎರ್ಗೋಟ್ ಎಂಬ ಶಿಲೀಂಧ್ರಗಳ ಸೋಂಕಿಗೆ ಹೆಚ್ಚು ಗುರಿಯಾಗುತ್ತದೆ. ಕೊಯ್ಲು ಮಾಡುವಾಗ ಬೀಳುವ  ಮಳೆಯಿಂದ  ಈ ಶಿಲೀಂದ್ರದ ಸೋಂಕು ಉಂಟಾಗುತ್ತದೆ. ಇದನ್ನು ಸ್ಥಳೀಯವಾಗಿ ಮಾತಾವ್ನಾ ಕೊಡು ಅಥವಾ ಮಾಟೋನಾ ಕೊಡೋ ಎಂದು ಕರೆಯಲಾಗುತ್ತದೆ. ಈ ಸೋಂಕಿಗೊಳಗಾದ ರಾಗಿಯ ಸೇವನೆಯಿಂದ ಪ್ರಾಣಿಗಳ ದೆಹಕ್ಕೆ ವಿಷದ ಅಂಶ ಸೇರುತ್ತದೆ. 

ಪ್ರಾಣಿಗಳ ಮೇಲೆ ಕೊಡೋ ರಾಗಿ ವಿಷಕಾರಿ  ಪ್ರಭಾವ ಏನು? 

ಕೊಡೋ ವಿಷವು ಮುಖ್ಯವಾಗಿ ನರ ಮತ್ತು ಹೃದಯರಕ್ತನಾಳದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವಾಂತಿ, ತಲೆತಿರುಗುವಿಕೆ ಮತ್ತು ಪ್ರಜ್ಞೆ ಕಳೆದುಕೊಳ್ಳುವಿಕೆ, ಕೈಕಾಲುಗಳ ನಡುಕ ಉಂಟಾಗಲಿದೆ. ಅಲ್ಲದೇ ಯಕೃತ್‌, ಹೃದಯದಲ್ಲಿ ಕ್ಯಾಲ್ಸಿಯಂ ಅಂಶದ ಮೇಲೆ ಪರಿಣಾಮ ಬೀರುವ ಮೂಲಕ ಹೃದಯವನ್ನು ದುರ್ಬಲಗೊಳಿಸುತ್ತದೆ. ಜಠರ, ಕರುಳಿನ ಅಸ್ವಸ್ಥತೆಗಳನ್ನು ಉಂಟುಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 

ಪರಿಹಾರವೇನು? 

ಬೆಳೆಗಳ ಮೇಲೆ ಬೆಳೆಯುವ ಶಿಲೀಂದ್ರಗಳನ್ನು ನಾಶಮಾಡಲು ಬೇರೆ ಜೀವಿಗಳ ಬಳಕೆ ಮಾಡುವುದು. ಸಂಶೋಧಕರ ಪ್ರಕಾರ ಅನೇಕ ಸೂಕ್ಷ್ಮಜೀವಿಗಳು ಶಿಲೀಂಧ್ರ ಬೆಳವಣಿಗೆ ಮತ್ತು ಮೈಕೋಟಾಕ್ಸಿನ್ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಬೆಳೆ ಕಟಾವಿನ ಬಳಿಕ ಸರಿಯಾದ ಸಂಗ್ರಹಣೆ, ಉತ್ತಮ ಕೃಷಿ ಪದ್ಧತಿಯ ಅಳವಡಿಕೆ ಅಗತ್ಯವಾಗಿದೆ. ತೇವಾಂಶವುಳ್ಳ ವಾತಾವರಣದಲ್ಲಿ ಶಿಲೀಂಧ್ರಗಳು ವೇಗವಾಗಿ ಹರಡುವುದರಿಂದ ಕೊಯ್ಲು ಮಾಡಿದ ರಾಶಿಗಳು ಮಳೆಯಿಂದ ರಕ್ಷಣೆ ಮಾಡಬೇಕು. ಒಣಗಿಸುವ ಮೊದಲು ಸಸ್ಯಗಳನ್ನು ತೇವಗೊಳಿಸಿ ಒಕ್ಕಣೆ ಮಾಡುವ ಹಳೆಯ ಅಭ್ಯಾಸವನ್ನು ನಿಲ್ಲಿಸಬೇಕು. ಸೋಂಕಿತ ಧಾನ್ಯಗಳನ್ನು ತೆಗೆದುಹಾಕುವುದು ಸಹ ರೋಗದ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವರದಿಯಾಗಿದೆ. 

TAGGED:BandhavgarhelephantMadhya Pradeshಆನೆಬಾಂಧವಗಢ ಹುಲಿಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
3 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
31 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
39 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
41 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?