Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Automobile

ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?

Public TV
Last updated: October 10, 2024 4:02 pm
Public TV
Share
3 Min Read
tata nano ratan tata narendra modi
SHARE

ರತನ್‌ ಟಾಟಾ (Ratan Tata) ಅವರಿಗೆ ನ್ಯಾನೋ ಕಾರನ್ನು (Nano Car) ತಯಾರಿಸುವ ಕಲ್ಪನೆ ಹೊಳೆದಿದ್ದೆ ರೋಚಕ. ಮುಂಬೈನಲ್ಲಿ ಭಾರೀ ಮಳೆಗೆ 4 ಮಂದಿ ಬೈಕಿನಲ್ಲಿ ತೆರಳುತ್ತಿದ್ದರು. ಈ ದೃಶ್ಯವನ್ನು ನೋಡಿದ ರತನ್‌ ಟಾಟಾ ಅವರ ಮನಸ್ಸು ಮಿಡಿಯಿತು.

ತಂದೆ, ತಾಯಿ ಮಧ್ಯೆ ಕುಳಿತಿದ್ದ ಮಕ್ಕಳು ಬೈಕಿನಿಂದ ರಸ್ತೆಗೆ ಬೀಳುವನ್ನು ಕೇಳಿದ್ದ ರತನ್‌ ಟಾಟಾ ಸಾಮಾನ್ಯ ವರ್ಗದವರಿಗೆ ಕಡಿಮೆ ದರದಲ್ಲಿ ಕಾರು ನಿರ್ಮಿಸಿಕೊಡಬೇಕೆಂದು ಪಣ ತೊಟ್ಟರು. ಈ ಕಲ್ಪನೆಯನ್ನು ಸಾಕಾರಗೊಳಿಸಲು ನ್ಯಾನೋ ಕಾರನ್ನು ಉತ್ಪಾದನೆ ಮಾಡಲು ರತನ್‌ ಟಾಟಾ ಮುಂದಾದರು.

ಜನವರಿ 10, 2008 ರಂದು ನ್ಯಾನೋ ಕಾರನ್ನು ಬಿಡುಗಡೆ ಮಾಡಲಾಯಿತು. ಈ ಕಾರಿಗೆ 1 ಲಕ್ಷ ರೂ. ದರ ನಿಗದಿ ಪಡಿಸಿದ್ದರಿಂದ ವಿಶ್ವದ ಅಗ್ಗದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಈ ಮೂಲಕ ರತನ್‌ ಟಾಟಾ ಅವರು ಬಡವರು, ಸಾಮಾನ್ಯ ವರ್ಗದವರು ಕಾರು ಖರೀದಿಸಬೇಕೆಂಬ ಕನಸನ್ನು ನನಸು ಮಾಡುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು

tata nano car

ರತನ್‌ ಟಾಟಾ ಅವರು ವಿಶ್ವದ ಅಗ್ಗದ ನ್ಯಾನೋ ಕಾರನ್ನು ಪಶ್ಚಿಮ ಬಂಗಾಳದಲ್ಲಿ (Wet Bengal) ನಿರ್ಮಾಣ ಮಾಡುವ ಕನಸು ಕಂಡಿದ್ದರು. ಆದರೆ ಕಾರು ನಿರ್ಮಾಣದ ವೇಳೆ ಟಾಟಾ ಕಂಪನಿ ಬಹಳ ಸಂಕಷ್ಟ ಎದುರಾಗಿತ್ತು. 2006 ರಲ್ಲಿ ಕಮ್ಯೂನಿಸ್ಟ್‌ ಪಕ್ಷ ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿತು. ಮುಖ್ಯಮಂತ್ರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ವಿಶ್ವದ ಅತ್ಯಂತ ಅಗ್ಗದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನ್ಯಾನೋ ಉತ್ಪಾದನಾ ಘಟಕ ಸ್ಥಾಪಿಸಲು ಹೂಗ್ಲಿ ಬದಿಯಲ್ಲಿರುವ ಸಿಂಗೂರಿನಲ್ಲಿ ಟಾಟಾಗೆ ಸುಮಾರು 1,000 ಎಕರೆ ಜಾಗ ನೀಡುವುದಾಗಿ ಘೋಷಿಸಿದ್ದರು.

ಸರ್ಕಾರ ಜಾಗ ನೀಡಲು ಮುಂದಾಗುತ್ತಿದ್ದಂತೆ ಭಾರೀ ಹೋರಾಟ ಆರಂಭವಾಯಿತು. ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆ ನಡೆದರೂ ಸ್ವಾಧಿನ ಪ್ರಕ್ರಿಯೆ ಪೂರ್ಣಗೊಂಡು ಕಾರು ನಿರ್ಮಾಣದ ಫ್ಯಾಕ್ಟರಿ ಕೆಲಸ ಆರಂಭವಾಯಿತು. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

ಫ್ಯಾಕ್ಟರಿ ಕೆಲಸ ಆರಂಭವಾಗುತ್ತಿದ್ದಾಗ 2007 ರಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಪ್ರತಿಭಟನೆಯ ನೇತೃತ್ವ ವಹಿಸಿದರು. ಪೊಲೀಸರು ಮತ್ತು ಟಿಎಂಸಿ ಕಾರ್ಯಕರ್ತರ ಮಧ್ಯೆ ಸಂಘರ್ಷ ನಡೆಯಿತು. ಘಟಕದ ವಿರುದ್ಧ ಮಮತಾ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಈ ಪ್ರತಿಭಟನೆಗೆ ಹಲವು ಪರಿಸರ ಸಂಘಟನೆಗಳು ಸಾಥ್‌ ನೀಡಿದವು.

Mamata Banerjee Tata Protest

ಪ್ರತಿಭಟನೆ ತೀವ್ರ ವಿವಾದವಾಗುತ್ತಿದ್ದಂತೆ ಸರ್ಕಾರ, ರಾಜ್ಯಪಾಲರು ನಡೆಸಿದ ಮಾತುಕತೆ ವಿಫಲವಾಯಿತು. ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುತ್ತಿದ್ದಂತೆ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ (Narendra Modi) ಅವರು ರತನ್‌ ಟಾಟಾ ಅವರಿಗೆ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ರತನ್‌ ಟಾಟಾ ಅವರು ಮೋದಿಯ ಆಫರ್‌ ಒಪ್ಪಿದರು. ಅಂತಿಮವಾಗಿ ಅಕ್ಟೋಬರ್‌ 03, 2008 ರಂದು ಘಟಕವನ್ನು ಅಹಮದಾಬಾದ್‌ನಲ್ಲಿರುವ ಸನಂದಕ್ಕೆ ಸ್ಥಳಾಂತರ ಮಾಡುವುದಾಗಿ ಟಾಟಾ ಮೋಟಾರ್ಸ್‌ ಘೋಷಿಸಿತು.

ಉತ್ಪಾದನಾ ಘಟಕವನ್ನು ಬಂದ್‌ ಮಾಡಿದ ನಂತರ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ರಾಜಕೀಯವಾಗಿ ಶಕ್ತಿಯುತವಾದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೆ ಆರ್ಥಿಕವಾಗಿ ಪಶ್ಚಿಮ ಬಂಗಾಳ ನಷ್ಟ ಅನುಭವಿಸಿತು. ನಂತರದ ವರ್ಷಗಳಲ್ಲಿ ಬೇರೆ ರಾಜ್ಯಗಳು ಕಂಪನಿಗಳನ್ನು ಆಕರ್ಷಿಸಿದರೆ ಪಶ್ಚಿಮ ಬಂಗಾಳ ಹೂಡಿಕೆದಾರರನ್ನು ಸೆಳೆಯುವಲ್ಲಿ ವಿಫಲವಾಯಿತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

ಕಾನೂನು ಸಮರದಲ್ಲಿ ಗೆದ್ದ ಟಾಟಾ ಮೋಟಾರ್ಸ್‌
ಸಿಂಗೂರಿನಲ್ಲಿ ಟಾಟಾ ಫ್ಯಾಕ್ಟರಿ ಸ್ಥಾಪನೆಗೆ ಜಾಗ ನೀಡಿ ಹೂಡಿಕೆ ಮಾಡಿ ನಷ್ಟ ಉಂಟು ಮಾಡಿದ್ದಕ್ಕೆ ಟಾಟಾ ಕಂಪನಿ ಪಶ್ಚಿಮ ಬಂಗಾಳ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (WBIDC) ವಿರುದ್ಧ ಕೇಸ್‌ ದಾಖಲಿಸಿತ್ತು. ದಶಕಗಳಿಂದ ನಡೆದಿದ್ದ ಕಾನೂನು ಸಮರವನ್ನು ಟಾಟಾ ಮೋಟಾರ್ಸ್‌ ಗೆದ್ದುಕೊಂಡಿತ್ತು. ಟಾಟಾ ಮೋಟಾರ್ಸ್‌ಗೆ ನಷ್ಟ ಉಂಟು ಮಾಡಿದ್ದಕ್ಕೆ WBIDCಗೆ 766 ಕೋಟಿ ರೂ. ಪಾವತಿಸುವಂತೆ ಮಧ್ಯಸ್ಥಿಕೆ ನ್ಯಾಯಾಲಯ ಆದೇಶಿಸಿತ್ತು. ಇದನ್ನೂ ಓದಿ: ನ್ಯಾನೋ ಕೇಸ್‌, ಮಮತಾಗೆ ತೀವ್ರ ಮುಖಭಂಗ – ಕೊನೆಗೂ ಗೆದ್ದ ಟಾಟಾ ಮೋಟಾರ್ಸ್‌

 

Share This Article
Facebook Whatsapp Whatsapp Telegram
Previous Article Ratan Tata ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು
Next Article Mandya 2 ಬೈಕ್ ಮೆಕಾನಿಕ್ ರಾತ್ರೋರಾತ್ರಿ ಕೋಟ್ಯಧಿಪತಿ – 25 ಕೋಟಿ ಬಹುಮಾನ ಗೆದ್ದ ಮಂಡ್ಯದ ಗಂಡು

Latest Cinema News

Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories
Krrish 4 1
`ಕ್ರಿಶ್-4′ ಹೃತಿಕ್‌ಗೆ ನಾಯಕಿಯಾಗ್ತಾರಾ ಶ್ರೀವಲ್ಲಿ?
Bollywood Cinema Latest Top Stories
varsha bollamma
‘ಮಹಾನ್’ ಟೀಮ್ ಸೇರಿಕೊಂಡ ಖ್ಯಾತ ನಟಿ ವರ್ಷ ಬೊಳ್ಳಮ್ಮ
Cinema Latest Sandalwood Top Stories
Kantara 1 1
ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌
Cinema Latest Sandalwood Top Stories Uncategorized

You Might Also Like

Prostitution
Crime

ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ – ಕೇರಳ ಮೂಲದ ಇಬ್ಬರು ಅರೆಸ್ಟ್‌

18 minutes ago
husband stabs wife in davanagere court
Court

ದಾವಣಗೆರೆ | ಡಿವೋರ್ಸ್ ವಿವಾದ – ಕೋರ್ಟ್‍ನಲ್ಲೇ ಪತ್ನಿಗೆ ಚಾಕು ಇರಿದ ಪತಿ

32 minutes ago
Mark Zuckerberg Donald Trump
Latest

H-1B Visa ಹೊಂದಿರುವವರು 24 ಗಂಟೆಯೊಳಗೆ ಅಮೆರಿಕಗೆ ವಾಪಸ್‌ ಬನ್ನಿ: ಮೆಟಾ, ಮೈಕ್ರೋಸಾಫ್ಟ್‌ ಸೂಚನೆ

33 minutes ago
Delhi Bomb Threat
Crime

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

35 minutes ago
MB Patil 2
Districts

ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್

54 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?