Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ

Bengaluru City

ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ

Public TV
Last updated: April 25, 2024 7:39 am
Public TV
Share
4 Min Read
dr. shilpa pandya malaria
SHARE

ಪ್ರಪಂಚದಾದ್ಯಂತ ಮಲೇರಿಯಾವನ್ನು (Malaria) ನಿಯಂತ್ರಿಸಲು ಮತ್ತು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಾಗತಿಕ ಮಟ್ಟದಲ್ಲಿ ಜಾಗೃತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ಏಪ್ರಿಲ್ 25 ರಂದು ‘ವಿಶ್ವ ಮಲೇರಿಯಾ ದಿನ’ವನ್ನು (World Malaria Day) ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ಈ ದಿನವನ್ನು ‘ಜಗತ್ತಿನಾದ್ಯಂತ ಮಲೇರಿಯಾ ವಿರುದ್ಧದ ಹೋರಾಟಕ್ಕೆ ಒತ್ತು’ ಎಂಬ ಥೀಮ್‌ನೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಲೇರಿಯಾ ಕಾಯಿಲೆಯು ಮಕ್ಕಳ ಮೇಲೆ ಬೀರುವ ಪರಿಣಾಮ ಏನು? ಪೋಷಕರು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಈ ಬಗ್ಗೆ ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಮಕ್ಕಳ ತಜ್ಞರಾದ ಶಿಲ್ಪಾ ಪಾಂಡ್ಯ (Dr.Shilpa Pandya) ಅವರು ವಿವರಿಸಿದ್ದಾರೆ.

ಪ್ರಶ್ನೆ: ಮಲೇರಿಯಾ ಹರಡುವುದು ಹೇಗೆ?
ಉತ್ತರ: ಮಲೇರಿಯಾವು ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಪ್ಲಾಸ್ಮೋಡಿಯಂ ಫಾಲ್ಸಿಪಾರಮ್‌ ಎಂಬುದು ಇದಕ್ಕೆ ಕಾರಣವಾಗಿದೆ. ಈ ಕಾಯಿಲೆಯು ಮಕ್ಕಳು ಮತ್ತು ವಯಸ್ಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ವ್ಯಕ್ತಿಯು ಸೊಳ್ಳೆಯ ಕಡಿತಕ್ಕೆ ಒಳಗಾದ ನಂತರ ಮಲೇರಿಯಾದ ಪರಾವಲಂಬಿಗಳು ಆ ವ್ಯಕ್ತಿಯ ಯಕೃತ್ ಅನ್ನು ಸೇರಿಕೊಂಡು ಯಕೃತ್ತಿನ ಜೀವಕೋಶಗಳಲ್ಲಿ ದ್ವಿಗುಣಗೊಂಡು ಕೆಂಪು ರಕ್ತ ಕಣಗಳನ್ನು ಸೋಂಕಿಗೆ ಒಳಪಡಿಸುತ್ತವೆ. ಜ್ವರ, ತಲೆನೋವು, ವಾಕರಿಕೆ, ವಾಂತಿ ಮತ್ತು ಕೆಲವೊಮ್ಮೆ ಅತಿಸಾರ ಬೇಧಿಯಾಗುವುದು ಈ ಕಾಯಿಲೆಯ ಲಕ್ಷಣಗಳು. ಕಾಯಿಲೆ ಅತಿಯಾದಾಗ ಅಂಗಾಂಗ ವೈಫಲ್ಯಕ್ಕೆ ಕಾರಣವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಕಾಲಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಅತ್ಯಗತ್ಯ ಎನ್ನುತ್ತಾರೆ ಮಕ್ಕಳ ತಜ್ಞರಾದ ಶಿಲ್ಪಾ ಪಾಂಡ್ಯ. ಇದನ್ನೂ ಓದಿ: ಚುನಾವಣೆ ಪ್ರಕ್ರಿಯೆ ನಿಯಂತ್ರಿಸುವ ಅಧಿಕಾರ ತಮಗಿಲ್ಲ: ಇವಿಎಂ-ವಿವಿಪ್ಯಾಟ್ ತಾಳೆ ಕೇಸಲ್ಲಿ ತೀರ್ಪು ಕಾಯ್ದಿರಿಸಿದ ಸುಪ್ರೀಂ

malaria

ಪ್ರಶ್ನೆ: ಮಕ್ಕಳಲ್ಲಿ ಕಂಡುಬರುವ ಮಲೇರಿಯಾದ ಸಾಮಾನ್ಯ ಲಕ್ಷಣಗಳೇನು?
ಉತ್ತರ: ಮಲೇರಿಯಾ ಸೋಂಕಿತ ಮಕ್ಕಳು ಸಾಮಾನ್ಯವಾಗಿ ಜ್ವರದಿಂದ ಬಳಲುತ್ತಿರುತ್ತಾರೆ. ಅದಲ್ಲದೆ ಶೀತ, ತಲೆನೋವು, ವಾಕರಿಕೆ, ವಾಂತಿ ಮತ್ತು ಭೇದಿ ಲಕ್ಷಣಗಳು ಕೂಡ ಕಾಣಿಸಿಕೊಳ್ಳುತ್ತದೆ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಮಲೇರಿಯಾ ಹೊಂದಿರುವ ಎಲ್ಲಾ ಮಕ್ಕಳು ಜ್ವರದ ಜೊತೆಗೆ ಶೀತವನ್ನು ಹೊಂದಿರುವುದಿಲ್ಲ. ಆದರೆ ಅಸ್ವಸ್ಥತೆ ಅಥವಾ ಆಯಾಸದಂತಹ ಇತರ ರೋಗಲಕ್ಷಣಗಳನ್ನೂ ಹೊಂದಿರಬಹುದು.

ಪ್ರಶ್ನೆ: ಮಲೇರಿಯಾ ಪೀಡಿತ ಮಗುವಿನ ಆರೈಕೆ ಹೇಗಿರಬೇಕು?
ಉತ್ತರ: ಮಲೇರಿಯಾ ಪೀಡಿತ ಮಗುವಿನ ಆರೈಕೆಯಲ್ಲಿ ಪೋಷಕರು ಪ್ರಮುಖ ಪಾತ್ರವಹಿಸುತ್ತಾರೆ. ಕಾಯಿಲೆಯಿಂದ ಕೂಡಿರುವ ಮಗುವಿಗೆ ಪ್ಯಾರಾಸಿಟಮಾಲ್‌ನಂತಹ ಜ್ವರ ನಿಯಂತ್ರಿಸುವ ಔಷಧಗಳನ್ನು ನೀಡುವುದು, ಮಗುವಿಗೆ ಸಾಕಷ್ಟು ವಿಶ್ರಾಂತಿ ನೀಡುವುದು ಮತ್ತು ಮಗುವಿನ ದೇಹ ಹೈಡ್ರೇಟೆಡ್ ಆಗಿರಲು ಸಾಕಷ್ಟು ನೀರು ಕುಡಿಯಲು ಅವರನ್ನು ಪ್ರೋತ್ಸಾಹಿಸುವುದರ ಜೊತೆಗೆ ಉತ್ತಮ ಆರೈಕೆಯನ್ನು ಒದಗಿಸುವುದು ಅತ್ಯಗತ್ಯ. ಮುಖ್ಯವಾಗಿ ವೈದ್ಯರ ಸಲಹೆಯ ಮೇರೆಗೆ ಮಗುವನ್ನು ಆರೈಕೆ ಮಾಡುವ ಮೂಲಕ ಸೋಂಕು ಮುಕ್ತವಾಗುವಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿ.

ಪ್ರಶ್ನೆ: ಮಲೇರಿಯಾ ಪೀಡಿತ ಮಗುವಿನಲ್ಲಿ ಕಂಡುಬರುವ ಅಪಾಯಕಾರಿ ಚಿಹ್ನೆಗಳು ಯಾವುವು?
ಉತ್ತರ: ಮಲೇರಿಯಾದಿಂದ ಬಳಲುತ್ತಿರುವ ಮಗುವು ಕಾಮಾಲೆ (ಚರ್ಮ ಮತ್ತು ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುವುದು), ರೋಗಗ್ರಸ್ತವಾಗುವಿಕೆ, ಮೂತ್ರ ಅಥವಾ ಮಲದಲ್ಲಿ ರಕ್ತ ಕಂಡುಬರುವುದು ಅಥವಾ ಸೂಕ್ತ ಔಷಧಿಗಳನ್ನು ತೆಗೆದುಕೊಂಡರೂ ನಿರಂತರವಾಗಿ ಜ್ವರ ಕಾಣಿಸಿಕೊಳ್ಳುವಂತಹ ಅಪಾಯಕಾರಿ ಚಿಹ್ನೆಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರ ಸಲಹೆ ತೆಗೆದುಕೊಳ್ಳುವುದು ಪೋಷಕರ ಕರ್ತವ್ಯ. ಇದನ್ನೂ ಓದಿ: ಪವನ್ ಕಲ್ಯಾಣ್ ಆಸ್ತಿ ಇಷ್ಟೇನಾ?: ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರ

ಪ್ರಶ್ನೆ: ಮಲೇರಿಯಾದ ಬಗೆಗೆ ಪೋಷಕರಲ್ಲಿ ಇರುವ ತಪ್ಪುಕಲ್ಪನೆಗಳೇನು?
ಉತ್ತರ: ಮಲೇರಿಯಾ ಕಾಯಿಲೆಯ ಬಗೆಗೆ ಪೋಷಕರಲ್ಲಿ ಹಲವಾರು ತಪ್ಪುಕಲ್ಪನೆಗಳಿವೆ. ಅವುಗಳ ಕುರಿತಾಗಿ ಮಕ್ಕಳ ತಜ್ಞೆ ಶಿಲ್ಪಾ ಪಾಂಡ್ಯ ಅವರು ಹೇಳುತ್ತಾರೆ.

ತಪ್ಪುಕಲ್ಪನೆ: ಮಲೇರಿಯಾವು ಕಲುಷಿತ ನೀರಿನ ಸೇವನೆ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡುತ್ತದೆ.
ಸತ್ಯಾಂಶ: ಮಲೇರಿಯಾವು ಸೊಳ್ಳೆ ಕಡಿತ ಅಥವಾ ರಕ್ತ ವರ್ಗಾವಣೆಯ ಮೂಲಕ ಮಾತ್ರ ಹರಡುತ್ತದೆ. ನೀರು ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡುವುದಿಲ್ಲ.

malaria baby care

ತಪ್ಪುಕಲ್ಪನೆ: ಮಲೇರಿಯಾ ಸೋಂಕಿತ ತಾಯಂದಿರು ಸ್ತನ್ಯಪಾನ ಮಾಡಬಾರದು!
ಸತ್ಯಾಂಶ: ಮಲೇರಿಯಾ ಪರಾವಲಂಬಿಗಳು ಎದೆ ಹಾಲಿನ ಮೂಲಕ ಹರಡುವುದಿಲ್ಲ. ಆದರೆ ತಾಯಿಯು ಮಗುವಿಗೆ ಹಾಲುಣಿವಾಗ ಕೆಲವು ಔಷಧಿಗಳ ಸೇವನೆ ಬಗೆಗೆ ಎಚ್ಚರಿಕೆವಹಿಸುವುದು ಅತ್ಯಗತ್ಯ.

ತಪ್ಪುಕಲ್ಪನೆ: ಸೋಂಕಿತ ಮಗುವಿನ ಸಂಪರ್ಕದಿಂದ ಮಕ್ಕಳಿಗೆ ಮಲೇರಿಯಾ ಹರಡುತ್ತದೆ.
ಸತ್ಯಾಂಶ: ಸೋಂಕಿತ ಮಗುವಿನ ಸಂಪರ್ಕದಿಂದ, ಸೋಂಕಿತ ಮಗು ಬಳಸುವ ಬಟ್ಟೆ ಅಥವಾ ಪಾತ್ರೆಗಳಂತಹ ವಸ್ತುಗಳನ್ನು ಹಂಚಿಕೊಳ್ಳುವುದರಿಂದ ಮಕ್ಕಳಿಗೆ ಮಲೇರಿಯಾ ಹರಡುವುದಿಲ್ಲ.

ತಪ್ಪುಕಲ್ಪನೆ: ಮಲೇರಿಯಾ ಸೋಂಕು ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆ.
ಸತ್ಯಾಂಶ: ವಿಭಿನ್ನ ಜಾತಿಯ ಪರಾವಲಂಬಿಗಳಿಂದ ಮನುಷ್ಯರಲ್ಲಿ ಮತ್ತೆ ಮಲೇರಿಯಾ ಸೋಂಕು ಕಾಣಿಸಿಕೊಳ್ಳಬಹುದು. ಹೀಗಾಗಿ ರೋಗನಿರೋಧಕ ಶಕ್ತಿ ಶಾಶ್ವತವಲ್ಲ.

ತಪ್ಪುಕಲ್ಪನೆ: ಮಲೇರಿಯಾ ಕಾಯಿಲೆಗೆ ಲಸಿಕೆ ಲಭ್ಯವಿದೆ!
ಸತ್ಯಾಂಶ: ಈ ಕಾಯಿಲೆಗೆ ಲಸಿಕೆ ಕಂಡುಹಿಡಿಯಲು ಸಂಶೋಧನೆ ನಡೆಯುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಯಾವುದೇ ಲಸಿಕೆ ಲಭ್ಯವಿಲ್ಲ.

ಪ್ರಶ್ನೆ: ಪೋಷಕರು ತಮ್ಮ ಮಕ್ಕಳನ್ನು ಮಲೇರಿಯಾದಿಂದ ಹೇಗೆ ರಕ್ಷಿಸಿಕೊಳ್ಳಬಹುದು?
ಉತ್ತರ: ಪೋಷಕರು ತಮ್ಮ ಮಕ್ಕಳನ್ನು ಮಲೇರಿಯಾದಿಂದ ರಕ್ಷಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವುಗಳೆಂದರೆ

* ಸೊಳ್ಳೆಗಳನ್ನು ದೂರವಿಡಲು ಸೊಳ್ಳೆ ನಿವಾರಕಗಳು ಮತ್ತು ಸೊಳ್ಳೆ ಬತ್ತಿಗಳನ್ನು ಬಳಸುವುದು.
* ಬೆಳಗ್ಗೆ ಮತ್ತು ಮುಸ್ಸಂಜೆ ವೇಳೆ ಸೊಳ್ಳೆಗಳು ಹೆಚ್ಚು, ಹೀಗಾಗಿ ಮಕ್ಕಳು ಮೈತಂಬಾ ಉಡುಪುಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು.
* ಮನೆಯ ಆವರಣದಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಮನೆಯ ಸುತ್ತ ನಿಂತ ನೀರನ್ನು ಸ್ವಚ್ಛಗೊಳಿಸುವುದು ಪ್ರಮುಖವಾದುದು.
* ಎರಡು ತಿಂಗಳೊಳಗಿನ ಶಿಶುಗಳಿಗೆ ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯ.
* ಸೊಳ್ಳೆಗಳು ಹೆಚ್ಚಿರುವ ಮುಂಜಾನೆ ಮತ್ತು ಮುಸ್ಸಂಜೆ ಸಮಯದಲ್ಲಿ ಮಕ್ಕಳು ಹೊರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಪೋಷಕರು ನೋಡಿಕೊಳ್ಳಬೇಕು.
* ಸೊಳ್ಳೆ ಕಡಿತ ಮತ್ತು ನೈರ್ಮಲ್ಯ ಅಭ್ಯಾಸಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕು ಎನ್ನುವುದು ತಜ್ಞರ ಸಲಹೆ.

ಈ ವರ್ಷ 2024ರ ಥೀಮ್/ವಿಷಯದ ಕುರಿತಾಗಿ ‘ಮಲೇರಿಯಾವು ತಡೆಗಟ್ಟಬಹುದಾದ ಕಾಯಿಲೆಯಾಗಿದೆ. ಆದರೆ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಮಲೇರಿಯಾದಿಂದ ಮೃತಹೊಂದುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಮುಂದಾಗೋಣ ಮತ್ತು ಅನಗತ್ಯ ಜೀವಹಾನಿಯನ್ನು ತಡೆಗಟ್ಟೋಣ’ ಎಂದು ವೈದ್ಯೆ ಶಿಲ್ಪಾ ಪಾಂಡ್ಯ ಅಭಿಪ್ರಾಯ ಪಡುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6364409651, 6364466240

TAGGED:Dr. Shilpa PandyaMalariaಡಾ.ಶಿಲ್ಪಾ ಪಾಂಡ್ಯಮಲೇರಿಯಾ
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

R Ashok 1
Bengaluru City

ಸಿಎಂ ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸಲಿದ್ದಾರೆ: ಅಶೋಕ್ ಟೀಕೆ

Public TV
By Public TV
4 minutes ago
newlywed man dies of heart attack in nelamangala
Bengaluru Rural

ನೆಲಮಂಗಲ | ಹೃದಯಾಘಾತಕ್ಕೆ ನವವಿವಾಹಿತ ಬಲಿ

Public TV
By Public TV
36 minutes ago
Pakistan T20 World Cup player fined after alleged misconduct with female hotel staff in Sri Lanka
Cricket

ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

Public TV
By Public TV
41 minutes ago
Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
59 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
1 hour ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?