ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಧಾರವಾಡದಲ್ಲಿ ಯುವರತ್ನ ಚಿತ್ರ ಶೂಟಿಂಗ್ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ನಂತರ ಅಲ್ಲಿಂದ ಕಾರಿನಲ್ಲಿ ಧಾರವಾಡಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪುನೀತ್ ಅವರು ವಿಮಾನ ನಿಲ್ಧಾನಕ್ಕೆ ಬಂದಿಳೀಯುತ್ತಿದ್ದಂತೆಯೇ ಅಭಿಮಾನಿಗಳು ಪುನೀತ್ ಅವರಿಗೆ ಶಾಲ್ ಹೊದಿಸಿ, ಮೈಸೂರು ಟೋಪಿ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದ್ರು.
ಧಾರವಾಡದಲ್ಲಿ ಸುಮಾರು ಆರು ದಿನಗಳ ಕಾಲ ಚಿತ್ರದ ಶೂಟಿಂಗ್ ನಡೆಯಲಿದೆ. ಧಾರವಾಡ ನಗರದ ಯೂನಿವರ್ಸಿಟಿ, ಕರ್ನಾಟಕ ಕಾಲೇಜು ಸೇರಿದಂತೆ ಹಲವು ಕಡೆ ಚಿತ್ರದ ಶೂಟಿಂಗ್ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ದರ್ಶನ್ ನಂತ್ರ ಪುನೀತ್ ರಾಜ್ಕುಮಾರ್ ಅಭಿಮಾನಿಗಳಲ್ಲಿ ಮನವಿ
ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ‘ರಾಜಕುಮಾರ’ ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ನಟನ ಕಾಂಬಿನೇಷನ್ ಯುವರತ್ನ ಚಿತ್ರದಲ್ಲಿ ಒಟ್ಟಾಗಿದ್ದು, ಫೆಬ್ರವರಿ 14 ರಂದು ಚಿತ್ರೀಕರಣ ಆರಂಭವಾಗಿದೆ. ಈ ಚಿತ್ರದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ 16 ವರ್ಷಗಳ ಹಿಂದೆ ತೆರೆಕಂಡಿದ್ದ ‘ಅಭಿ’ ಚಿತ್ರದ ಬಳಿಕ ಪುನೀತ್ ಮತ್ತೆ ಕಾಲೇಜ್ ಸ್ಟೂಡೆಂಟ್ ಆಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv