`ಸಾಕಪ್ಪ ಸಾಕು, ಕಿವಿ ಮೇಲೆ ಹೂ’; ಬಜೆಟ್ ಬಗ್ಗೆ ಕಾಂಗ್ರೆಸ್ ವ್ಯಂಗ್ಯ – ಪೋಸ್ಟರ್ ಅಂಟಿಸಿ ಅಭಿಯಾನ

Public TV
1 Min Read
Congress Poster Campain 4

ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget 2023) ಮಂಡಿಸುವ ವೇಳೆ ಕಿವಿಗೆ ಚೆಂಡು ಹೂವು ಇಟ್ಟುಕೊಂಡು ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದರು.

ಇದೀಗ ಹುಬ್ಬಳ್ಳಿಯಲ್ಲಿ (Hubballi) ಕಾಂಗ್ರೆಸ್ (Congress) ಘಟಕದಿಂದ ಬಜೆಟ್ ಕುರಿತು `ಸಾಕಪ್ಪ ಸಾಕು, ಕಿವಿ ಮೇಲೆ ಹೂವ’ ಎಂಬ ಅಭಿಯಾನ ಶುರುವಾಗಿದೆ. ಇದನ್ನೂ ಓದಿ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

Congress Poster Campain 3

`ಪೇ ಸಿಎಂ’ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನ ಕಾಂಗ್ರೆಸ್ ಘಟಕ ಪ್ರಾರಂಭ ಮಾಡಿದೆ. ಬಿಜೆಪಿ (BJP) ಘಟಕದಿಂದ ಈಗಾಗಲೇ ಗೋಡೆಗಳ ಮೇಲೆ ಅಂಟಿಸಿರುವ `ಬಿಜೆಪಿಯೇ ಭರವಸೆ’ ಪೋಸ್ಟರ್ ಗಳ ಮೇಲೆ `ಸಾಕಪ್ಪ ಸಾಕು ಕಿವಿ ಮೇಲೆ ಹೂವ, ಬುರುಡೆ ಭರವಸೆ ಸಾಕು’ ಎಂಬ ಪೋಸ್ಟರ್‌ಗಳನ್ನ ಅಂಟಿಸಿ ಕೈ ಕಾರ್ಯಕರ್ತರು ಲೇವಡಿ ಮಾಡುತ್ತಿದ್ದಾರೆ.

Congress Poster Campain

ವಿವಿಧ ನಗರಗಳಲ್ಲಿ ಈ ಹೊಸ ಅಭಿಯಾನಕ್ಕೆ ಹುಬ್ಬಳ್ಳಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿಯ ಸಾಫ್ಟ್‌ವೇರ್‌ ಇಂಜಿನಿಯರ್; ಬಿಡುಗಡೆಗೆ ಗೃಹ ಸಚಿವ ಶತಪ್ರಯತ್ನ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *