Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ: ನ್ಯಾ. ದೀಪಕ್ ಮಿಶ್ರಾ

Public TV
Last updated: August 12, 2018 7:05 pm
Public TV
Share
3 Min Read
HBL COURT 3
SHARE

ಹುಬ್ಬಳ್ಳಿ: ದೇಶದಲ್ಲಿ ಎಷ್ಟು ಸುಭದ್ರವಾದ ಕಟ್ಟಡ ಇರುತ್ತವೆಯೋ, ಅಷ್ಟೇ ಸುಭದ್ರವಾದ ಕಾನೂನು ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾರವರು ಹೇಳಿಕೆ ನೀಡಿದ್ದಾರೆ.

ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಇದು ಕೇವಲ ಸಮಾರಂಭ ಅಲ್ಲ, ಇದು ಒಂದು ಕುಟುಂಬದ ಸಮಾರಂಭ. ನ್ಯಾಯದ ಮುಂದೆ ಎಲ್ಲರು ಸಮಾನರು, ಇಲ್ಲಿ ಬಡವ-ಶ್ರೀಮಂತ, ಮೇಲು-ಕೀಳೆಂಬ ಭಾವನೆ ಇಲ್ಲ. ಇದು ಎಲ್ಲರಿಗೂ ಒಂದೇ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ನಮ್ಮೆಲ್ಲರ ಹೆಮ್ಮೆಯ ಸಂಕೇತವಾಗಿದೆ ಎಂದು ತಿಳಿಸಿದರು.

HBL COURT 1 2

ನ್ಯಾಯಾಲಯಕ್ಕೆ ಸುಭದ್ರ ಕಟ್ಟಡ ಎಂಬುದು ಕಟ್ಟಡ ಅಲ್ಲ. ಅದು ಸುಭದ್ರ ಕಾನೂನಿನ ಸಂಕೇತ. ಹೀಗಾಗಿ ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ಕಾಳಜಿಯನ್ನು ಹೊಂದಿದ್ದಾರೆ. ರಾಜ್ಯದ ಎಲ್ಲಾ ನ್ಯಾಯಾಲಯಗಳು ಸ್ವಂತ ಕಟ್ಟಡಗಳು ಹೊಂದಲಿ ಎನ್ನುವ ಅವರ ಕಾಳಜಿಯು ನನಗೆ ತುಂಬಾ ಸಂತೋಷ ತಂದಿದೆ. ದೇಶದಲ್ಲಿ ಎಲ್ಲಾ ನ್ಯಾಯಾಲಯಗಳು ಉತ್ತಮ ಕಟ್ಟಡವನ್ನು ಹೊಂದಬೇಕು. ಇದರ ಜೊತೆಗೆ ಉತ್ತಮ ನ್ಯಾಯ ಕೊಡುವ ಕೆಲಸಗಳು ಆಗಬೇಕು ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಇದು ಗಂಡು ಮೆಟ್ಟಿದ ನಾಡು, ನನಗೆ ಅಧಿಕಾರಿಗಳು ಇಂಗ್ಲೀಷಿನಲ್ಲಿ ಭಾಷಣ ಬರೆದುಕೊಟ್ಟಿದ್ದರು, ಆದರೆ ಮುಖ್ಯನ್ಯಾಯಾಧೀಶರುಗಳೇ ಕನ್ನಡದಲ್ಲಿ ಮಾತನಾಡಿದ ಮೇಲೆ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಈ ಕಟ್ಟಡಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಧಿಯಲ್ಲಿ ಅಡಿಗಲ್ಲು ಹಾಕಲಾಗಿತ್ತು. ಈ ಹಿಂದೆ ಕಲಬುರಗಿ ಹಾಗೂ ಧಾರವಾಡದಲ್ಲಿ ಹೈಕೋರ್ಟ್ ಆಗಲು ನಾನು ಶ್ರಮಪಟ್ಟಿದ್ದೆ. ನನ್ನ ಈ ಹಿಂದಿನ ಇಪ್ಪತ್ತು ತಿಂಗಳ ಅವಧಿಯಲ್ಲಿ ನ್ಯಾಯಾಲಯಗಳಿಗೆ ಅತೀ ಹೆಚ್ಚು ಮೂಲಭೂತ ಸೌಕರ್ಯ ಕೊಟ್ಟಿದ್ದೆ ಎಂದು ಹೇಳಿದರು.

38900367 1798595610188895 2733682203559985152 n

ರಾಜ್ಯದಲ್ಲಿ ಕೇವಲ 20 ನ್ಯಾಯಾಲಯದ ಕಟ್ಟಡಗಳು ಮಾತ್ರ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ನ್ಯಾಯಾಲಯ ಮತ್ತು ನ್ಯಾಯಾಂಗ ಇಲಾಖೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಲು ನಾನು ಸಿದ್ದನಿದ್ದೇನೆ. ಫ್ಲೆಕ್ಸ್ ತೆರವು ಮಾಡಲು ನ್ಯಾಯಮೂರ್ತಿಗಳ ಆದೇಶ ನನಗೆ ಹೆಚ್ಚು ಸಂತೋಷ ಕೊಟ್ಟಿದೆ. ನಾವು ಹೇಳಿದರೆ ಅಧಿಕಾರಿಗಳು ಕೇಳುವುದಿಲ್ಲ, ಆದರೆ ಕೋರ್ಟ್ ಆದೇಶ ನೀಡಿದಾಗ ಅಧಿಕಾರಿಗಳು ಎದ್ದು-ಬಿದ್ದು ಕೆಲಸ ಮಾಡುತ್ತಾರೆ ಎಂದರು.

ನಮ್ಮ ಸರ್ಕಾರ ಅಖಂಡ ಕರ್ನಾಟಕದ ಸರ್ಕಾರವಾಗಿದೆ. ಯಾವುದೇ ಮಾತಿಗೂ ಕಿವಿ ಕೊಡಬೇಡಿ. ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿದಾಗ ನಮ್ಮ ಸರ್ಕಾರದ ನಿಲುವನ್ನು ನಿಮ್ಮ ಮುಂದಿಡುತ್ತೇನೆ ಎಂದು ಅವರು ತಿಳಿಸಿದರು.

39071409 1798595870188869 6017909498558021632 n

ಹುಬ್ಬಳ್ಳಿ ನ್ಯಾಯಾಲಯದ ವಿಶೇಷವೇನು?
122 ಕೋಟಿ ವೆಚ್ಚದಲ್ಲಿ ಸಿದ್ಧವಾಗಿರುವ ಈ ಕಟ್ಟಡವು ಸುಮಾರು 5 ಎಕರೆ ವ್ಯಾಪ್ತಿ ಪ್ರದೇಶದಲ್ಲಿ ಸುವ್ಯವಸ್ಥಿತವಾಗಿ ನಿರ್ಮಾಣಗೊಂಡಿದೆ. ನ್ಯಾಯಾಲಯದ ಕಟ್ಟಡವು ಒಟ್ಟು 7 ಮಹಡಿಗಳನ್ನು ಹೊಂದಿದ್ದು, ಎಲ್ಲಾ ಕಟ್ಟಡವು ಸಂಪೂರ್ಣ ಕೇಂದ್ರೀಕೃತ ಹವಾನಿಯಂತ್ರಿತ ವ್ಯವಸ್ಥೆಯನ್ನು ಹೊಂದಿದೆ. ಒಟ್ಟು ಏಳು ಅಂತಸ್ತಿನ ಕಟ್ಟದಲ್ಲಿ ಮೊದಲೆರಡು ಅಂತಸ್ತುಗಳನ್ನು ನ್ಯಾಯಧೀಶರು ಹಾಗೂ ವಕೀಲರಿಗೆ ಪಾರ್ಕಿಂಗ್ ಗೆ ಮೀಸಲಿಡಲಾಗಿದೆ. ಮೊದಲ ಮಹಡಿಯಲ್ಲಿ ಹಾಲ್ ನಲ್ಲಿ ವಾದಿ – ಪ್ರತಿವಾದಿ ಹಾಗೂ ಸರಕಾರಿ ವಕೀಲರಿಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

hbl new court INGARATION AV 1

ಮೊದಲನೇ ಮಹಡಿಯಲ್ಲಿ 3 ಕೋರ್ಟ್, ಒಂದು ಕಾನ್ಫರೆನ್ಸ್ ಹಾಲ್, ಇನ್ನುಳಿದ 4 ಮಹಡಿಗಳಲ್ಲಿ ತಲಾ 4 ನ್ಯಾಯಾಲಯಗಳಿದ್ದು, 1 ಕೌಟುಂಬಿಕ ನ್ಯಾಯಾಲಯ, 2 ಜಿಲ್ಲಾ ನ್ಯಾಯಾಲಯ, 2 ಕಾರ್ಮಿಕ ನ್ಯಾಯಾಲಯ, 4 ಸಿವಿಲ್ ಜ್ಯೂನಿಯರ್ ಡಿವಿಜನ್, 2 ಜೆಎಂಎಫ್‍ಸಿ, 3 ಸಿನಿಯರ್ ಡಿವಿಜನ್ ಕೋರ್ಟ್‍ಗಳಿವೆ. ಅಲ್ಲದೇ ದೊಡ್ಡದಾಗ ಕಾನ್ಫರೆನ್ಸ್ ಹಾಲ್, 2 ಕೋರ್ಟ್‍ಗಳಲ್ಲಿ ಬಾರ್ ಅಸೋಸಿಯೇಶನ್, ಲೈಬ್ರರಿ, ಮಹಿಳಾ ವಕೀಲರ ಕೊಠಡಿಗಳು ಇವೆ.

ನ್ಯಾಯಾಧೀಶರ ಧ್ವನಿ ಕೇಳಿಸಲು ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಅಳವಡಿಸಲಾಗಿದೆ. ಸಂಪೂರ್ಣ ನ್ಯಾಯಾಲಯದ ಸಂಕೀರ್ಣಕ್ಕೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಹಾಕಲಾಗಿದೆ. ಕೈದಿಗಳಿಗೆ ಲಾಕಪ್ ಕೊಠಡಿ ಮತ್ತು ಕಕ್ಷಿದಾರರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಸಂಪೂರ್ಣ ನ್ಯಾಯಾಲಯದಲ್ಲಿ ಒಟ್ಟು ಒಂದು ಸಾವಿರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯದಲ್ಲಿ ಅತ್ಯಾಧುನಿಕ ಕ್ಯಾಂಟೀನ್ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಮಹಿಳೆಯರ ಅನುಕೂಲಕ್ಕಾಗಿ ಮಗುವಿಗೆ ಹಾಲುಣಿಸುವ ಕೊಠಡಿಯನ್ನು ಸಹ ನಿರ್ಮಿಸಲಾಗಿದೆ.

39027483 1798596030188853 5829516861267509248 n

ಮುನ್ನೆಚ್ಚರಿಕಾ ಕ್ರಮಗಳು:
ಕಟ್ಟಡವು ಭೂಕಂಪ ನಿರೋಧಕ ಶಕ್ತಿಯನ್ನು ಹೊಂದಿದ್ದು, ಭೂಮಿ ಕಂಪನದ ಮುನ್ಸೂಚನೆಯನ್ನು ತಿಳಿಸುವ ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಅಲ್ಲದೇ ಸಂಕೀರ್ಣದ ಯಾವುದೇ ಭಾಗದಲ್ಲಿ ಹೊಗೆ ಕಾಣಿಸಿಕೊಂಡರೆ, ತಕ್ಷಣವೇ ಮುನ್ಸೂಚನೆನೀಡುವ ವ್ಯವಸ್ಥೆ ಸಿದ್ದಪಡಿಸಲಾಗಿದೆ. ಯಾವುದೇ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡರೆ ತಕ್ಷಣ ಫೈರ್‍ವಾಟರ್‍ಗಳು ಆಟೋಮ್ಯಾಟಿಕ್ ಆಗಿ ಕಾರ್ಯನಿರ್ವಹಿಸುವಂತೆ ಸಿದ್ಧಪಡಿಸಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹುಬ್ಬಳ್ಳಿಯ ನ್ಯಾಯಾಲಯ ಸಂಕೀರ್ಣ ಗುರುತಿಸಿಕೊಂಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

TAGGED:CM KumaraswamycourtDeepak mishrahubballiinaugurationjudgePublic TVSpecialtySupreme Courtಉದ್ಘಾಟನೆದೀಪಕ್ ಮಿಶ್ರನ್ಯಾಯಾಧೀಶರುನ್ಯಾಯಾಲಯಪಬ್ಲಿಕ್ ಟಿವಿವಿಶೇಷತೆಸಿಎಂ ಕುಮಾರಸ್ವಾಮಿಸುಪ್ರೀಂ ಕೋರ್ಟ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
2 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
12 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
1 hour ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
3 hours ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
3 hours ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?