ಹುಬ್ಬಳ್ಳಿ: ವಿವಾದಿತ ಪೋಸ್ಟ್ ಮಾಡಿ ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹುಬ್ಬಳ್ಳಿ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ವಿವಾದಿತ ಪೋಸ್ಟ್ ಮಾಡಿದ್ದ ಅಭಿಷೇಕ್ ಹಿರೇಮಠ ಪರ ವಕೀಲರ ಸಂಜಯ ಬಡಾಸಕರ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಭಿಷೇಕ್ನನ್ನು ಏಪ್ರಿಲ್ 30 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ನಾಳೆ ಸರ್ಕಾರದ ಪರ ವಕೀಲರು ಜಾಮೀನಿಗೆ ತಕರಾರು ಸಲ್ಲಿಸಲಿದ್ದಾರೆ.
ಅಭಿಷೇಕ್ ಪಿಯುಸಿ 2 ನೇ ವರ್ಷದ ಪರೀಕ್ಷೆ ಬರೆಯಲಿರುವ ಕಾರಣ ನ್ಯಾಯಾಲಯದ ಗಮನಕ್ಕೆ ತಂದಿದ್ದೆವೆ, ನಾಳೆ ಈ ಬಗ್ಗೆ ಅರ್ಜಿ ಕೂಡ ಕೊಡಲಿದ್ದೇವೆ ಎಂದು ವಕೀಲರು ತಿಳಿಸಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು
ಗಲಭೆ ಪ್ರಕರಣ ಸಂಬಂಧ ಖಾಕಿ ತನಿಖೆ ಇಂದು ಮತ್ತಷ್ಟು ಚುರುಕಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಗಲಾಟೆ ಮಾಡಿ ಎಸ್ಕೇಪ್ ಆಗಿದ್ದವರ ಹೆಡೆಮುರಿ ಕಟ್ಟೋಕೆ ಎರಡೂ ಟೀಂಗಳು ಕಾರ್ಯಾಚರಣೆ ನಡೆಸಿವೆ. ಗಲಭೆ ಮಾಡಿದ್ದ ಕೆಲ ಪುಂಡರು ಎಸ್ಕೇಪ್ ಆದ ಹಿನ್ನೆಲೆಯಲ್ಲಿ ಅವರ ಪತ್ತೆ ಕಾರ್ಯ ಚುರುಕಾಗಿದೆ.